
ನವದೆಹಲಿ(ಮಾ.06): ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಬ್ರಿಟನ್ ಸಂಸತ್ನಲ್ಲಿ ಸೋಮವಾರ ಚರ್ಚೆ ನಿಗದಿಯಾಗಿರುವ ಬೆನ್ನಲ್ಲೇ, ಈ ವಿಷಯ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗದಂತೆ ನೋಡಿಕೊಳ್ಳಲು ಬ್ರಿಟನ್ ಸರ್ಕಾರ ಮುಂದಾಗಿದೆ.
ಈ ಕುರಿತು ಹೇಳಿಕೆಯೊಂದನ್ನು ನೀಡಿರುವ ಬ್ರಿಟನ ಸರ್ಕಾರ, ‘ಭಾರತದಲ್ಲಿನ ರೈತರ ಪ್ರತಿಭಟನೆ ಆ ದೇಶದ ಆಂತರಿಕ ವಿಚಾರ. ಅದನ್ನು ಅವರೇ ಸರಪಡಿಸಿಕೊಳ್ಳುತ್ತಾರೆ’ ಎಂದು ಹೇಳಿದೆ. ಆದಾಗ್ಯೂ, ಬ್ರಿಟನ್ನಲ್ಲೂ ಭಾರತೀಯ ಸಂಜಾತರು ಇರುವ ಕಾರಣ ಭಾರತದ ರೈತರ ಪ್ರತಿಭಟನೆಯು ಬ್ರಿಟನ್ನಲ್ಲೂ ಪ್ರತಿಧ್ವನಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚೆ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಬ್ರಿಟನ್ ಸರ್ಕಾರ ತಿಳಿಸಿದೆ. ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರತಿಭಟನಾಕಾರರ ಸುರಕ್ಷತೆ ಕುರಿತಾಗಿ ಚರ್ಚೆ ನಡೆಸಬೇಕೆಂಬ ಇ-ಅರ್ಜಿಗಳು 1 ಲಕ್ಷ ಪೂರೈಸಿದ್ದು, ಈ ಬಗ್ಗೆ ಸೋಮವಾರ ಚರ್ಚೆ ನಡೆಯಲಿದೆ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.