UPSC ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡುವ ಬಗ್ಗೆ ಸ್ಪಷ್ಟನೆ ಕೊಟ್ಟ ಕೇಂದ್ರ

Published : Jan 22, 2021, 06:13 PM IST
UPSC ಹುದ್ದೆ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡುವ ಬಗ್ಗೆ ಸ್ಪಷ್ಟನೆ ಕೊಟ್ಟ ಕೇಂದ್ರ

ಸಾರಾಂಶ

ಕೊರೋನಾ ಭೀತಿ ಹಿನ್ನೆಲೆಯಲ್ಲಿ 2020ರ ನಾಗರಿಕ ಸೇವಾ ಆಯೋಗ ಪರೀಕ್ಷೆ ಬರೆಯದವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.

ನವದೆಹಲಿ, (ಜ.22): ಕೊರೋನಾ ವೈರಸ್​ ಕಾರಣ ನೀಡಿ 2020ರ ನಾಗರಿಕ ಸೇವಾ ಆಯೋಗ ಪರೀಕ್ಷೆ ಬರೆಯದವರಿಗೆ ಹೆಚ್ಚುವರಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ಕೊರೋನಾ ಕಾರಣದಿಂದ ಅನೇಕರು ಯುಪಿಎಸ್​ಸಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಇದೇ ಕಾರಣ ನೀಡಿ ಅನೇಕರು ಮತ್ತೊಂದು ಅವಕಾಶ ಕೇಳಿದ್ದರು. ಈ ಬಗ್ಗೆ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಸುಪ್ರೀಂಕೋರ್ಟ್​ ಪೀಠ, ಕೇಂದ್ರದ ಪ್ರತಿಕ್ರಿಯೆ ಕೇಳಿತ್ತು. 

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಉತ್ತರಿಸಿರುವ ಕೇಂದ್ರ ಸರ್ಕಾರ, ನಾವು ಮತ್ತೊಂದು ಅವಕಾಶ ನೀಡಲು ಸಿದ್ಧರಿಲ್ಲ ಎಂದು ಹೇಳಿದೆ. ಕೇಂದ್ರದ ಪ್ರತಿಕ್ರಿಯೆ ಪಡೆದ ನಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಜನವರಿ 25ಕ್ಕೆ ಮುಂದೂಡಿದೆ.  ಅಲ್ಲದೆ, ಈ ಅವಧಿಯಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂಕೊರ್ಟ್​​ ನಿರ್ದೇಶಿಸಿದೆ.

ಕೆಲ ಕಡೆಗಳಲ್ಲಿ ಪ್ರವಾಹ ಏರ್ಪಟ್ಟಿತ್ತು. ಅಲ್ಲದೆ, ದೇಶಾದ್ಯಂತ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ, ಕಳೆದ ಅಕ್ಟೋಬರ್​ 4ರಂದು ನಡೆಯಬೇಕಿದ್ದ ಯುಪಿಎಸ್​​ಸಿ ನಾಗರಿಕ ಸೇವೆಯ ಪ್ರಿಲಿಮಿನರಿ ಪರೀಕ್ಷೆ ಮುಂದೂಡುವಂತೆ ಕೋರಲಾಗಿತ್ತು. ಆದರೆ, ಸರ್ಕಾರ ಈ ಮನವಿ ತಿರಸ್ಕರಿಸಿತ್ತು.

PREV
click me!

Recommended Stories

ವೃತ್ತಿಜೀವನಕ್ಕೆ ಹೊಸ ತಿರುವು, ಪ್ರಸಾರ ಭಾರತಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ, 50000 ರೂ ವರೆಗೆ ವೇತನ!
ದೇಶದ ನಂಬರ್ 1 ಶಿಕ್ಷಣ ಸಂಸ್ಥೆ IISc ನಲ್ಲಿ ಭದ್ರತಾ ಹುದ್ದೆ, SSLC ಪಾಸಾದವರಿಗೆ ಸುವರ್ಣಾವಕಾಶ!