Muslims Traders Boycott: ಮಲೆನಾಡಿನಲ್ಲೂ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಒತ್ತಾಯ

Published : Mar 23, 2022, 05:41 PM ISTUpdated : Mar 23, 2022, 05:49 PM IST
Muslims Traders Boycott: ಮಲೆನಾಡಿನಲ್ಲೂ ಮುಸ್ಲಿಂ ವ್ಯಾಪಾರಸ್ಥರಿಗೆ ನಿಷೇಧ ಒತ್ತಾಯ

ಸಾರಾಂಶ

ಚಿಕ್ಕಮಗಳೂರು ಜಾತ್ರೆ ,ದೇವಸ್ಥಾನಗಳಿಗೆ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡದಂತೆ ಮನವಿ ಸ್ಥಳೀಯರಿಂದಲೇ ಗ್ರಾಮ ಪಂಚಾಯಿತಿಗೆ ಮನವಿ ಚಿತ್ರವಳ್ಳಿ ಜಾತ್ರೆಯಲ್ಲಿ‌ ನಿಷೇಧಿಸುವಂತೆ ಒತ್ತಾಯ   

ವರದಿ : ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

ಚಿಕ್ಕಮಗಳೂರು(ಮಾ.23): ಕೆಲ ದಿನಗಳ ಹಿಂದಷ್ಟೇ ರಾಜ್ಯಾದ್ಯಂತ ಆರಂಭವಾದ ಮುಸಲ್ಮಾನರೊಂದಿಗಿನ ವ್ಯಾಪಾರ ವಹಿವಾಟುಗಳ ನಿಷೇಧದ ಕುರಿತ ಹೋರಾಟದ ಅಭಿಯಾನ ಮಲೆನಾಡಿನಲ್ಲೂ ಆರಂಭವಾಗಿದೆ. ರಾಜ್ಯದಲ್ಲಿ ಮುಸಲ್ಮಾನರು ಹಿಜಾಬ್ (Hijab) ತೀರ್ಪನ್ನು ವಿರೋಧಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸುವ ಮೂಲಕ ಸಂವಿಧಾನವನ್ನು ವಿರೋಧಿಸಿದ್ದಾರೆ. ಈ ನಿಟ್ಟಿನಲ್ಲಿ ಹಿಂದೂ ಸಂಪ್ರದಾಯ, ಆಚರಣೆಗಳಂತೆ ನಡೆಯುವ ಜಾತ್ರೆಯಲ್ಲಿ ಅಂಗಡಿ ಮಳಿಗೆಗೆ ಅವಕಾಶ ನೀಡಬಾರದೆಂದು ಸ್ಥಳೀಯರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸುವ ಮೂಲಕ ಮಲೆನಾಡಿನಲ್ಲೂ ಹೋರಾಟದ ಅಭಿಯಾನಕ್ಕೆ ಬೆಂಬಲ ವ್ಯಕ್ತವಾಗಿದೆ.

ಚಿತ್ರವಳ್ಳಿ ಜಾತ್ರೆಯಲ್ಲಿ‌ ನಿಷೇಧಿಸುವಂತೆ ಒತ್ತಾಯ:
ಚಿಕ್ಕಮಗಳೂರು (Chikkamagaluru) ಜಿಲ್ಲೆ ಶೃಂಗೇರಿ (Sringeri) ತಾಲೂಕಿನ ಅಡ್ಡಗದ್ದೆ ಗ್ರಾಮ ಪಂಚಾಯಿತಿಯ  ಅಧ್ಯಕ್ಷರಿಗೆ ಚಿತ್ರವಳ್ಳಿ ಶ್ರೀ ವನ ದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವದಲ್ಲಿ (Chitravalli Shri Vanna Durgaparameshwari festival ) ಮುಸಲ್ಮಾನರಿಗೆ (Muslims) ಅಂಗಡಿ, ಮುಂಗಟ್ಟುಗಳಿಗೆ ಅವಕಾಶ ನೀಡಬಾರದೆಂದು ಅಡ್ಡಗದ್ದೆ ಗ್ರಾಮಸ್ಥರು ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದ್ದಾರೆ.

MUSLIMS TRADERS BOYCOTT: ಕರಾವಳಿಯಿಂದ ಶಿವಮೊಗ್ಗಕ್ಕೂ ಹಬ್ಬಿತು ನಿರ್ಬಂಧದ ಕಿಚ್ಚು

ಇನ್ನು ಜಾತ್ರೆಯಲ್ಲಿ ಹಿಂದೂ ಕುಟುಂಬಗಳು ಹರಿಕೆ ಕಾಣಿಕೆ ರೂಪದಲ್ಲಿ ಸೇವೆಸಲ್ಲಿಸುತ್ತಾ ಸಹಕಾರ ನೀಡುತ್ತಾರೆ, ಆದರೆ ಬೇರೆಡೆಗಳಿಂದ ಆಗಮಿಸುವ ಅನ್ಯಮತೀಯರು ಕಳ್ಳತನ ಸೇರಿದಂತೆ ಇನ್ನಿತರ ದುಷ್ಕೃತ್ಯಗಳಲ್ಲಿ ಭಾಗಿಯಾಗಿ ಕೆಡುಕುಂಟು ಮಾಡುತ್ತಾರೆ ಈ ಕಾರಣಕ್ಕಾಗಿ ಅವರಿಗೆ ಅವಕಾಶ ನೀಡಬಾರದು ಎಂದು ಅಡ್ಡಗದ್ದೆ ಸ್ಥಳೀಯರು ಆರೋಪಿಸಿದ್ದಾರೆ.

ಮೊನ್ನೆಯಷ್ಟೇ ಹೈಕೋರ್ಟ್ ನೀಡಿದ ಹಿಜಾಬ್ ಕುರಿತಾದ ತೀರ್ಪನ್ನು ವಿರೋಧಿಸಿ ಸಂವಿಧಾನ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ ಹಾಗೂ ಈ ನೆಲದ ಕಾನೂನನ್ನು ವಿರೋಧಿಸಿರುತ್ತಾರೆ ಆದ ಕಾರಣ ಯಾವುದೇ ಕಾರಣಕ್ಕೂ ಅನ್ಯಮತೀಯರಿಗೆ ಚಿತ್ರವಳ್ಳಿ ಜಾತ್ರೆಯಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಾರದೆಂದು ಸ್ಥಳೀಯರು ಗ್ರಾಮ ಪಂಚಾಯಿತಿಗೆ ಒತ್ತಾಯಿಸಿದ್ದಾರೆ.

Kapu Marigudi Jatra: ಕಳಚಿದ ಸೌಹಾರ್ದತೆಯ ಕೊಂಡಿ, 2ನೇ ದಿನವು ಮುಸ್ಲಿಂ ವ್ಯಾಪಾರಿಗಳಿಗೆ

PREV
Read more Articles on
click me!

Recommended Stories

ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ