ಚಿಕ್ಕಮಗಳೂರು : ಸೇತುವೆ ಸಂಚಾರ ನಿಷೇಧಿಸಿ DC ಸೂಚನೆ

Published : Oct 23, 2019, 12:38 PM IST
ಚಿಕ್ಕಮಗಳೂರು :  ಸೇತುವೆ ಸಂಚಾರ ನಿಷೇಧಿಸಿ DC ಸೂಚನೆ

ಸಾರಾಂಶ

ಬಾಳೆಹೊನ್ನೂರಿನಲ್ಲಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಸೇತುವೆ ದುರಸ್ಥಿಗೆ ಪರಿಶೀಲನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ  ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ. 

ಚಿಕ್ಕಮಗಳೂರು (ಅ.23): ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಸೇತುವೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. 

ಚಿಕ್ಕಮಗಳುರು ಜಿಲ್ಲೆ NR ಪುರ ತಾಲೂಕಿನಲ್ಲಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಪರಿವೀಕ್ಷಣೆ ಹಿನ್ನಲೆಯಲ್ಲಿ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ. 

ಬೆಳಗ್ಗಿನಿಂದಲೇ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗೌತಮ್ ಬಗಾದಿ ಆದೇಶ ನೀಡಿದ್ದು, ಸೇತುವೆ ಕುಸಿಯುವ ಹಂತದಲ್ಲಿರುವ ಹಿನ್ನೆಲೆಯಲ್ಲಿ  ಅಧಿಕಾರಿಗಳು ಬ್ರಿಡ್ಜ್ ಟೆಸ್ಟಿಂಗ್ ಮಶಿನ್ ಬಳಸಿ ಪರಿಶೀಲನೆ ನಡೆಸುತ್ತಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿರಾಜಪೇಟೆ-ಬೈಂದೂರು ರಾಷ್ಟ್ರೀಯ ಹೆದ್ದಾರಿ 27ರಲ್ಲಿ ಈ ಸೇತುವೆ ಇದ್ದು,  ವಾಹನ ಸವಾರರು ಬದಲಿ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ. 

PREV
click me!

Recommended Stories

Chikkamagaluru: ದತ್ತಪೀಠದ ತಪ್ಪಲು ಮಾಣಿಕ್ಯಧಾರಾ ರಸ್ತೆಯಲ್ಲೂ ಅಕ್ರಮ ಗೋರಿ, ಹಸಿರು ಚಾದರ ಪತ್ತೆ! ಹಿಂದೂಗಳ ಆಕ್ರೋಶ
Varuna Mitra Helpline: ವರುಣ ಮಿತ್ರ ಸಹಾಯವಾಣಿಗೆ ರೈತರ ಕರೆಗಳು ಏಕೆ ಕಡಿಮೆಯಾದವು? ಕೆಎಸ್‌ಎನ್‌ಡಿಎಂಸಿ ನೀಡಿದ ಅಸಲಿ ಕಾರಣ ಏನು?