ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಡಿಕ್ಕಿ: ಮೂವರ ದುರ್ಮರಣ

Published : Jun 08, 2023, 08:24 AM IST
ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್  ಡಿಕ್ಕಿ:  ಮೂವರ ದುರ್ಮರಣ

ಸಾರಾಂಶ

 ಜಿಲ್ಲೆಯ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ  ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಈ ಆಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿತ್ರದುರ್ಗ:  ಜಿಲ್ಲೆಯ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ  ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಈ ಆಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಆಂಬುಲೆನ್ಸ್ ಗುಜರಾತ್‌ನಿಂದ ತಮಿಳುನಾಡಿಗೆ ತೆರಳುತ್ತಿತ್ತು, ಗುಜರಾತ್‌ನ ಅಹಮದಾಬಾದ್‌ನಿಂದ ತಮಿಳುನಾಡಿನ ತಿರುನಾಳವೇಲಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.  ಅಂಬುಲೆನ್ಸ್ ನಲ್ಲಿದ್ದ 72 ವರ್ಷದ ಕನಕಮಣಿ, 17 ವರ್ಷದ ಆಕಾಶ್  ಮತ್ತು ಅಂಬುಲೆನ್ಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಂಬುಲೆನ್ಸ್ ನಲ್ಲಿದ್ದ  ಇನ್ನಿಬ್ಬರಿಗೆ  ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಂದಾಪುರದಲ್ಲಿ ಬಸ್ ಕಾರು ನಡುವೆ ಭೀಕರ ಅಪಘಾತ; ಐವರು ಸಾವು, ಹಲವರು ಗಂಭೀರ!

PREV
Read more Articles on
click me!

Recommended Stories

ಚಿತ್ರದುರ್ಗ: ಅತ್ತೆ ಮಗಳನ್ನು ಪ್ರೀತಿಸಿ ರಿಜಿಸ್ಟರ್ ಮದುವೆಯಾದ ಅಳಿಯ, ಮದುವೆ ಒಪ್ಪದ ಪೋಷಕರಿಂದ ರಕ್ತಸಿಕ್ತ ಸಂಧಾನ!
Chitradurga: ಅಧ್ಯಾಪಕನೊಂದಿಗೆ ಸಂಬಂಧ ಅಪಪ್ರಚಾರ; ನೇಣಿಗೆ ಶರಣಾದ BAMS ವಿದ್ಯಾರ್ಥಿನಿ ನಿಖಿತಾ