ಮಾಜಿ ಪತ್ನಿ ಜೊತೆ ಕೆಲ್ಸ ಮಾಡ್ಬಾರ್ದಂತ ಯಾವುದಾದ್ರೂ ಡಾಕ್ಟರ್​ ಹೇಳಿದ್ದಾರಾ? ಆಮೀರ್​ ಖಾನ್​ ಗರಂ

Published : Feb 06, 2024, 12:27 PM IST
ಮಾಜಿ ಪತ್ನಿ ಜೊತೆ ಕೆಲ್ಸ ಮಾಡ್ಬಾರ್ದಂತ ಯಾವುದಾದ್ರೂ ಡಾಕ್ಟರ್​ ಹೇಳಿದ್ದಾರಾ? ಆಮೀರ್​ ಖಾನ್​ ಗರಂ

ಸಾರಾಂಶ

ಮಾಜಿ ಪತ್ನಿಯ ಜೊತೆ ಕೆಲ್ಸ ಮಾಡಲು ಡಾಕ್ಟರ್​ ಏನಾದ್ರೂ ರಿಸ್ಟ್ರಿಕ್ಷನ್​ ಹಾಕಿದ್ದಾರಾ ಅಂತ ನಟ ಆಮೀರ್​ ಖಾನ್​ ಗರಂ ಆಗಿದ್ದೇಕೆ?   

ಬಾಲಿವುಡ್​ ಮಿಸ್ಟರ್​ ಪರ್ಫೆಕ್ಟ್​ ಎಂದೇ ಖ್ಯಾತಿ ಪಡೆದಿರುವ ಆಮೀರ್​ ಖಾನ್​ ಅವರು, ಕೆಲವು ಬಾಲಿವುಡ್ ನಟರಂತೆ   ಹಿಂದೂ ಯುವತಿಯರನ್ನೇ ಮದ್ವೆಯಾದವರು. ಇವರ ಇಬ್ಬರು  ಪತ್ನಿಯರೂ ಹಿಂದೂಗಳೇ ಎನ್ನುವುದು ವಿಶೇಷ, ಈಗ  ಇಬ್ಬರಿಗೂ ಡಿವೋರ್ಸ್​ ಕೊಟ್ಟಿದ್ದಾರೆ. ಮೊದಲ ಪತ್ನಿ ರೀನಾ ದತ್ತಾ ಅವರಿಂದ ಇರಾ ಖಾನ್​ ಮತ್ತು ಜುನೈದ್​ ಖಾನ್​ ಎಂಬ ಇಬ್ಬರು ಮಕ್ಕಳನ್ನು ಪಡೆದಿದ್ದು, ಎರಡನೆಯ ಪತ್ನಿ ಕಿರಣ್​ ರಾವ್​ ಅವರಿಂದ ಆಜಾದ್​ ರಾವ್​ ಖಾನ್​ರನ್ನು ಪಡೆದಿದ್ದಾರೆ. ಮೊದಲ ಪತ್ನಿ ರೀನಾ ದತ್ತಾ ಜೊತೆ 1986–2002ರವರೆಗೆ ಸಂಸಾರ ನಡೆಸಿದ್ದ ಆಮೀರ್​ 2005ರಲ್ಲಿ ಕಿರಣ್​ ರಾವ್​ ಅವರನ್ನು ಮದುವೆಯಾಗಿದ್ದು, 2021ರಲ್ಲಿ ಅವರಿಗೂ ಡಿವೋರ್ಸ್​ ಕೊಟ್ಟಿದ್ದಾರೆ.  ವಿಚ್ಛೇದನ ಕೊಟ್ಟರೂ ಇಬ್ಬರೂ ಪತ್ನಿಯರ ಜೊತೆ ನಟನ ಸಂಬಂಧ ಚೆನ್ನಾಗಿಯೇ ಇದೆ. ಕಳೆದ  ಡಿಸೆಂಬರ್​ 3ರಂದು ಮೊದಲ ಪತ್ನಿ ರೀನಾ ದತ್ತಾ ಅವರಿಂದ ಪಡೆದಿರುವ ಮಗಳು, ನಟಿ ಇರಾ ಖಾನ್​ ಅವರ ಮದುವೆ ಸಮಾರಂಭಕ್ಕೆ ಕಿರಣ್​ ಅವರು ಕೂಡ ಹಾಜರಿದ್ದುದು ಇದಕ್ಕೆ ಸಾಕ್ಷಿ.
 
 
 ಮದುವೆಯ ದಿನ ನಡೆದ ಫೋಟೋ ಸೆಷನ್​ನಲ್ಲಿ ಮೊದಲಿಗೆ ಆಮೀರ್​ ಖಾನ್​ ಮತ್ತು ಎರಡನೆಯ ಪತ್ನಿ ಕಿರಣ್​ ರಾವ್​ ನಿಂತಿದ್ದರು. ಫೋಟೋ ಸೆಷನ್​ ನಡೆಯುತ್ತಿದ್ದಂತೆಯೇ ಮೊದಲ ಪತ್ನಿ ಅಂದರೆ ಮದುಮಗಳು ಇರಾ ಖಾನ್​ ತಾಯಿ ರೀನಾ ದತ್ತಾ ಹಾಜರಾದರು. ಅವರು ಅರಿವಿಲ್ಲದೇ ಮೊದಲು ಕಿರಣ್​ ಅವರ ಪಕ್ಕದಲ್ಲಿಯೇ  ನಿಂತರು. ನಂತರ ಆಮೀರ್​ ಖಾನ್​ ಇನ್ನೊಂದು ಮೂಲೆಗೆ ಹೋಗುತ್ತಿದ್ದಂತೆಯೇ ನಿಧಾನವಾಗಿ ಕಿರಣ್​ ರಾವ್​ ಪಕ್ಕದಿಂದ ತಪ್ಪಿಸಿಕೊಂಡ ರೀನಾ ದತ್ತಾ ಆಮೀರ್​ ಖಾನ್​ ಪಕ್ಕದಲ್ಲಿ ಹೋಗಿ ನಿಂತರು. ಆಗ ಕಿರಣ್​ ರಾವ್​ ಅವರ  ಮುಖ ಸಪ್ಪಗಾಯಿತು. ಇದರ ವಿಡಿಯೋ ವೈರಲ್​ ಆಗುತ್ತಿದ್ದಮತೆಯೇ ಇಬ್ಬರು ಮಾಜಿ ಪತ್ನಿಯರ ಗಂಡ ಆಮೀರ್​ ಖಾನ್​ ಕುರಿತು ಥಹರೇವಾರಿ ಕಮೆಂಟ್​ಗಳು ಹರಿದಾಡಿದವು. ಜೊತೆಗೆ ಇಬ್ಬರನ್ನೂ ಡಿವೋರ್ಸ್​ ಕೊಟ್ಟ ಬಗ್ಗೆ ಆಮೀರ್​ ಬಗ್ಗೆ ಇನ್ನಿಲ್ಲದ ಮಾತುಗಳು ಕೇಳಿಬರುತ್ತಿವೆ.

ಶ್ರೀದೇವಿ ಸಾವಿನ ಹಿಂದೆ ಭಾರಿ ರಹಸ್ಯ: ಲೇಡಿ ಯುಟ್ಯೂಬರ್​ ವಿರುದ್ಧ ಸಿಬಿಐ ಚಾರ್ಜ್​ಷೀಟ್​ ಸಲ್ಲಿಕೆ

ಇದರ ನಡುವೆಯೇ, Laapataa ಎಂಬ ಚಿತ್ರದಲ್ಲಿ ಆಮೀರ್​ ಖಾನ್​ ಮತ್ತು ಕಿರಣ್​ ಅವರು ಒಟ್ಟಿಗೇ ಕೆಲಸ ಮಾಡುತ್ತಿದ್ದಾರೆ.  ಈ ವರ್ಷದ ಮಾರ್ಚ್‌ನಲ್ಲಿ ಬಿಡುಗಡೆಯಾಗಲಿರುವ ಚಿತ್ರವು ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (TIFF) ಪ್ರದರ್ಶನಗೊಂಡಿತು. 15 ವರ್ಷಗಳ ದಾಂಪತ್ಯದ ಬಳಿಕ  ಆಮೀರ್ ಮತ್ತು ಕಿರಣ್ ಬೇರೆ ಬೇರೆಯಾದವರು. ಇದೀಗ ಡಿವೋರ್ಸ್​ ಬಳಿಕ ಮತ್ತೆ ಪತಿ-ಪತ್ನಿ ಒಂದೇ ಕಡೆ ಕೆಲಸ ಮಾಡುತ್ತಿರುವುದನ್ನು ಕಂಡ ಹಲವರು ಹುಬ್ಬೇರಿಸಿದ್ದಾರೆ. ಆದ್ದರಿಂದ ವಿಚ್ಛೇದನದ ಬಳಿಕ ಒಟ್ಟಿಗೆ ಅದ್ಹೇಗೆ ಕೆಲಸ ಮಾಡುತ್ತೀರಿ ಎಂಬ ಪ್ರಶ್ನೆ ಆಮೀರ್​ ಖಾನ್​ ಅವರಿಗೆ ಎದುರಾಗುತ್ತಿದ್ದಂತೆಯೇ, ಆಮೀರ್​ ಸ್ವಲ್ಪ ಗರಂ ಆದರು. ಪಾಪರಾಜಿಗಳು ಈ ಪ್ರಶ್ನೆ ಕೇಳಿದಾಗ ಸ್ವಲ್ಪ ಸಿಟ್ಟುಕೊಂಡರೂ ಸುಧಾರಿಸಿಕೊಂಡ ಆಮೀರ್​ ಖಾನ್​, ಯಾಕೆ ಪತಿ-ಪತ್ನಿ ದೂರದೂರವಾದ ಮೇಲೆ ಒಟ್ಟಿಗೇ ಕೆಲಸ ಮಾಡಬಾರದು ಎಂದು ಯಾವುದಾದ್ರೂ ಡಾಕ್ಟರ್​ ಹೇಳಿದ್ದಾರಾ ಎಂದು ಪ್ರಶ್ನಿಸಿದರು. 

ಇದೇ ವೇಳೆ ತಮ್ಮ ಮಾಜಿ ಪತ್ನಿ ಕಿರಣ್ ಅವರನ್ನು ಹೊಗಳಿದ ಅವರು, ಕಿರಣ್​ ನನ್ನ ಜೀವನದಲ್ಲಿ ಬಂದಿದ್ದು ನನ್ನ ಅದೃಷ್ಟವೆಂದು ಪರಿಗಣಿಸುತ್ತೇನೆ ಮತ್ತು ಆಕೆಯಿಂದ ನಾನು ಸಾಧನೆ ಮಾಡಿದ್ದೇನೆ.  ನಾವು ಬೇರೆ ಬೇರೆಯಾಗಿರಬಹುದು. ಆದರೆ ಮಾನವೀಯ ನೆಲೆಗಟ್ಟಿನಲ್ಲಿ ಮತ್ತು ಭಾವನಾತ್ಮಕವಾಗಿ ಒಟ್ಟಿಗೇ ಇದ್ದೇವೆ ಎಂದಿದ್ದಾರೆ. ಈ ಮಾತಿಗೂ ಟ್ರೋಲಿಗರು ಸಕತ್​ ಕಮೆಂಟ್​ ಮಾಡುತ್ತಿದ್ದಾರೆ. ಅವರು ನಿಮ್ಮ ಜೀವನದಲ್ಲಿ ಬಂದದ್ದು ಅದೃಷ್ಟ ಎಂದು 15 ವರ್ಷದ ದಾಂಪತ್ಯದಿಂದ ಡಿವೋರ್ಸ್​ ಪಡೆದ ಬಳಿಕ ಗೊತ್ತಾಯ್ತಾ ಎಂದು ಪ್ರಶ್ನಿಸುತ್ತಿದ್ದಾರೆ. ಒಟ್ಟಿನಲ್ಲಿ ಆಮೀರ್​ ಖಾನ್​ ಸದ್ಯ ಈ ರೀತಿಯಾಗಿ ಸುದ್ದಿಯಲ್ಲಿದ್ದಾರೆ. 

ಚಿತ್ರ ಬಿಡುಗಡೆ ದಿನ ನಾಯಕಿಯ ಬೆಡ್​ರೂಂ ದೃಶ್ಯಗಳೇ ಮಾಯ! ನಿರ್ಮಾಪಕರಿಗೆ ಶಾಕ್​- ದೂರು ದಾಖಲು

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?