400 ಬುಡಕಟ್ಟು ಕುಟುಂಬಗಳಿಗೆ ನೆರವಾದ ನಟ ರಾಣಾ ದಗ್ಗುಬಾಟಿ!

Suvarna News   | Asianet News
Published : Jun 10, 2021, 11:35 AM ISTUpdated : Jun 10, 2021, 12:04 PM IST
400 ಬುಡಕಟ್ಟು ಕುಟುಂಬಗಳಿಗೆ ನೆರವಾದ ನಟ ರಾಣಾ ದಗ್ಗುಬಾಟಿ!

ಸಾರಾಂಶ

ತೆಲಂಗಾಣದ ಜಿಲ್ಲೆ ಒಂದರಲ್ಲಿರುವ 400 ಬುಡಕಟ್ಟು ಕುಟುಂಬಗಳಿಗೆ ಉಚಿತ ದಿನಸಿ ಹಾಗೂ ಔಷಧಿಗಳನ್ನು ನೀಡಿದ ನಟ ರಾಣಾ ದಗ್ಗುಬಾಟಿ.

ಟಾಲಿವುಡ್‌ ಹ್ಯಾಂಡ್ಸಮ್ ನಟ ರಾಣಾ ದಗ್ಗುಬಾಟಿ ಕಳೆದ ಲಾಕ್‌ಡೌನ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ರಾಣಾ ಕಾಲ್‌ಶೀಟ್ ಕೂಡ ಫುಲ್ ಆಗಿದ್ದು, ಚಿತ್ರೀಕರಣ ಮಾಡಿ ಮುಗಿಸುವಷ್ಟು ತುದಿಗಾಲಿನಲ್ಲಿ ನಿಂತಿದ್ದಾರೆ. 

ಚಿತ್ರರಂಗದ ಕಾರ್ಮಿಕರಿಗೆ ಉಚಿತ ಅಕ್ಕಿ ನೀಡಿ 

ಲಾಕ್‌ಡೌನ್‌ ಸಡಿಲಿಕೆ ಆಯ್ತು, ಚಿತ್ರರಂಗದ ಚಟುವಟಿಕೆಗಳು ಸುಧಾರಿಸಿಕೊಳ್ಳುತ್ತಿವೆ ಎನ್ನುವಷ್ಟರಲ್ಲಿ ಮತ್ತೊಂದು ಲಾಕ್‌ಡೌನ್‌ ಘೋಷಣೆ ಆಗಿತ್ತು. ಈ ಲಾಕ್‌ಡೌನ್‌‌ನಿಂದ ಅನೇಕರಿಗೆ ಪೆಟ್ಟು ಬಿದ್ದಿದೆ. ಅದರಲ್ಲೂ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿರುವ ಸುಮಾರು 400 ಕುಟುಂಬಗಳು ಸಂಕಷ್ಟ ಎದುರಿಸುತ್ತಿದೆ. ಈ ಕುಟುಂಬಗಳಿಗೆ ನೆರವಾಗಿ ರಾಣಾ ನಿಂತಿದ್ದಾರೆ. 

ಪಾಲ ರೇಗಡಿ, ಅಡ್ಡಾಲ ತಿಮ್ಮಾಪುರ, ಕಾಹಿ ತಾಂಡಾ, ಗಗನ್ ಪೇಟ್ ಇನ್ನೂ ಹಲವು ಹಳ್ಳಿಗಳಿಗೆ ರಾಣಾ ದಗ್ಗುಬಾಟಿ ತಂಡ ಉಚಿತ ದಿನಸಿ ಮತ್ತು ಔಷಧಿ ವಿತರಣೆ ಮಾಡಿದ್ದಾರೆ. ರಾಣಾ  ಇತ್ತೀಚಿಗೆ ಅಭಿನಯಿಸಿದ  'ಅರಣ್ಯ' ಸಿನಿಮಾದಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದಾರೆ. ಹೀಗಾಗಿ ರಾಣಾ ಬುಡಕಟ್ಟು ಜನರಿಗಾಗಿ ಈ ಸೇವಾಕಾರ್ಯ ಮಾಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

3 idiots 2 : ಬಾಕ್ಸ್ ಆಫೀಸ್ ನಲ್ಲಿ ಸುನಾಮಿ, ಬರ್ತಿದೆ 3 ಈಡಿಯಟ್ಸ್ ಸೀಕ್ವೆಲ್
ಚಿರಂಜೀವಿ ನಂತರ ಜೂ.ಎನ್‌ಟಿಆರ್ ಟಾರ್ಗೆಟ್? ಸಂಚಲನ ಮೂಡಿಸಿದ ನಿರ್ಧಾರ, ಇನ್ಮುಂದೆ ಹೀಗೆ ಮಾಡಿದ್ರೆ ಕಷ್ಟ!