ಕೊರೋನಾ ಗೆದ್ದ ಐಶ್ವರ್ಯಾ, ಆರಾಧ್ಯ; ಆಸ್ಪತ್ರೆಯಿಂದ ಮನೆಗೆ

Published : Jul 27, 2020, 06:31 PM ISTUpdated : Jul 27, 2020, 06:34 PM IST
ಕೊರೋನಾ ಗೆದ್ದ ಐಶ್ವರ್ಯಾ, ಆರಾಧ್ಯ; ಆಸ್ಪತ್ರೆಯಿಂದ ಮನೆಗೆ

ಸಾರಾಂಶ

ಕೊರೋನಾ ಗೆದ್ದ ಐಶ್ವರ್ಯಾ ರೈ, ಆರಾಧ್ಯ/ ವಿಚಾರ ತಿಳಿಸಿದ ಪತಿ ಅಭಿಷೇಕ್ ಬಚ್ಚನ್/ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಗೆ ಮುಂದುವರಿದ ಚಿಕಿತ್ಸೆ/ 

ಮುಂಬೈ(ಜು. 27)  ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ್ದ ಐಶ್ವರ್ಯಾ ರೈ ಬಚ್ಚನ್ ಮತ್ತು  ಆರಾಧ್ಯ ಕೊರೋನಾದಿಂದ ಗುಣಮುಖರಾಗಿದ್ದಾರೆ.  ಜಯಾ ಬಚ್ಚನ್ ಹೊರತು ಪಡಿಸಿ ಕುಟುಂಬದ ಎಲ್ಲರಿಗೂ ಕೊರೋನಾ ಪಾಸಿಟಿವ್ ಆಗಿತ್ತು. 

ನಟ ಅಭಿಷೇಕ್ ಬಚ್ಚನ್ ಕೊರೋನಾದಿಂದ  ಐಶ್ವರ್ಯಾ ಗುಣಮುಖವಾದ ವಿಚಾರ ಹಂಚಿಕೊಂಡಿದ್ದಾರೆ. ನಟಿ ಐಶ್ವರ್ಯಾ ರೈ ಮತ್ತು ಪುತ್ರಿ ಆರಾಧ್ಯಗೆ ಜುಲೈ 12ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. 

ಬಿಗ್ ಬಿ ಕುಟುಂಬಕ್ಕೆ ಕೊರೋನಾ ಕಾಟ, ಕಾರಣ ಏನು?

ನಿಮ್ಮ ಪ್ರೀತಿ ಮತ್ತು ಹಾರೈಕೆಗೆ ಧನ್ಯವಾದಗಳು. ಐಶ್ವರ್ಯಾ ಮತ್ತು ಆರಾಧ್ಯ ಗುಣಮುಖರಾಗಿದ್ದಾರೆ. ಅವರಿಬ್ಬರ ಕೊರೊನಾ ವರದಿ ನೆಗೆಟಿವ್ ಆಗಿದ್ದುಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಯಲ್ಲಿದ್ದಾರೆ. ನಾನು ಮತ್ತು ತಂದೆ ಟ್ರೀಟ್ ಮೆಂಟ್ ಪಡೆದುಕೊಳ್ಳುತ್ತಿದ್ದೇವೆ ಎಂದು ಅಭಿಷೇಕ್ ಅಭಿಮಾನಿಗಳಿಗೆ   ತಿಳಿಸಿದ್ದಾರೆ.

ಜುಲೈ 11ರಂದು ಅಮಿತಾಭ್ ಬಚ್ಚನ್‌ ಮತ್ತು ಅಭಿಷೇಕ್‌ ಬಚ್ಚನ್‌ಗೆ ಕೊರೊನಾ ವೈರಸ್ ಇರುವುದು ಖಚಿತವಾಗಿತ್ತು. ತಕ್ಷಣವೇ ಅವರಿಬ್ಬರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನವೇ ಐಶ್ವರ್ಯಾ ರೈ ಮತ್ತು ಪುತ್ರಿ ಆರಾಧ್ಯಗೂ ಕೊರೊನಾ ಇರುವುದು ದೃಢಪಟ್ಟಿತ್ತು. ಆದರೆ, ಅವರನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲ ದಿನಗಳ ನಂತರ ಐಶ್ವರ್ಯಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?