
ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಕನ್ನಡದಲ್ಲೇ ಕನ್ನಡಿಗರಿಗೆ ಕೊರೋನಾ ವಿರುದ್ಧ ಟಿಪ್ಸ್ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ದೈನಂದಿನ ಪ್ರಕರಣ 40 ಸಾವಿರಕ್ಕೂ ಮೇಲ್ಪಟ್ಟು ಏರಿಕೆಯಾಗುತ್ತಿದ್ದು ಈ ಸಂದರ್ಭದಲ್ಲಿ ನಟ ಕಾಳಜಿ ವ್ಯಕ್ತಪಡಿಸಿದ್ದಾರೆ.
"
ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್ ದೊಡ್ಡ ಅಸ್ತ್ರವಾಗಿದೆ. ಮಾಸ್ಕ್ ಸದಾ ಧರಿಸಿ, ಕೈಗಳನ್ನು ಸ್ವಚ್ಛಗೊಳಿಸಿ. ಪಬ್ಲಿಕ್ನಲ್ಲಿ ಓಡಾಡುವಾಗ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳಿ ಎಂದಿದ್ದಾರೆ.
AIADMK ಪಕ್ಷದ ಚಿಹ್ನೆ ಡಿಸೈನ್ ಮಾಡಿದ್ದ ನಟ ಪಾಂಡು ಕೊರೋನಾದಿಂದ ಸಾವು
ಆಲಿಯಾ ಭಟ್ ತೆಲುಗಿನಲ್ಲಿ, ರಾಮ್ ಚರಣ್ ತಮಿಳಿನಲ್ಲಿ, ಅಜಯ್ ದೇವಗನ್ ಹಿಂದಿಯಲ್ಲಿ, ಜೂನಿಯರ್ ಎನ್ಟಿಆರ್ ಕನ್ನಡದಲ್ಲಿ, ಎಸ್ಎಸ್ ರಾಜಮೌಳಿ ಮಲಯಾಳಂನಲ್ಲಿ ಕೊರೋನಾ ಕುರೊತು ವಿಡಿಇಯೋ ಮೂಲಕ ಜಾಗೃತಿ ಮೂಡಿಸಿದ್ದಾರೆ.
ಕರ್ನಾಟಕದಲ್ಲಿ ಬುಧವಾರ 50112 ಕೊರೋನಾ ಪಾಸಿಟಿವ್ ಪ್ರಕರನಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ ಮಾತ್ರ 23106 ಪ್ರಕರಣ ದೃಢಪಟ್ಟಿದೆ. ದಾಖಲೆಯ 346 ಸಾವು ದಾಖಲೆಯಾಗಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.