
ಮೆಗಾಸ್ಟಾರ್ ಅಮಿತಾಭ್ ಬಚ್ಚನ್ 2021ದನ್ನು ಕೆಟ್ಟ ಕಣ್ಣುಗಳಿಂದ ರಕ್ಷಿಸೋಕೆ ನಿಂಬೆ ಮೆಣಸಿನಕಾಯಿ ಕಟ್ಟಿದ್ದಾರೆ. 78 ವರ್ಷದ ಬಾಲಿವುಡ್ ಬಿಗ್ ಬಿ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಹಿರಿಯ ನಟ.
2021ಕ್ಕೆ ನಿಂಬೆ ಮತ್ತು ಮೆಣಸಿನಕಾಯಿ ಕಟ್ಟಿದ ಫೋಟೋವನ್ನು ನಟ ಇನ್ಸ್ಟಾಗ್ರಾಂ ಮತ್ತು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಕೆಟ್ಟ ಕಣ್ಣಿನಿಂದ ಬಚಾವಾಗಲು ನಿಂಬೆ ಮೆಣಸಿನ ಕಾಯಿ ಕಟ್ಟುವ ಸಂಪ್ರದಾಯ ಭಾರತದಾದ್ಯಂತ ಇದೆ.
ಖ್ಯಾತ ನಟಿಯ ಆತ್ಮಹತ್ಯೆ: ಗುಟ್ಟಾಗಿ ಮದುವೆಯಾಗಿದ್ದ ಪತಿ ಅರೆಸ್ಟ್
ಇದನ್ನೇ ಫಾಲೋ ಮಾಡಿದ್ದಾರೆ ನಟ. 2020 ಕೊರೋನಾದಿಂದಾಗಿ ಅತ್ಯಂತ ಕಷ್ಟದ ಸಮಯವಾಗಿತ್ತು. 2021 ಚೆನ್ನಾಗಿರಲಿ, ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಈ ರೀತಿ ಮಾಡಿದ್ದಾರೆ ನಟ.
2020 ಮುಗಿಲು ಕೆಲವೇ ದಿನ ಇದೆ. 2021ಕ್ಕೆ ಕೆಟ್ಟ ದೃಷ್ಟಿ ಬೀಳದಿರಲಿ. ನಿಂಬೆ, ಮೆಣಸು ಕಟ್ಟಿ ರಕ್ಷಿಸಲು ನಾನು ಬಯಸುತ್ತೇನೆ ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ. ಈ ಪೋಸ್ಟ್ಗೆ ಸಿಕ್ಕಾಪಟ್ಟೆ ಕಮೆಂಟ್ಸ್ ಬಂದಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.