ಕೊರೋನಾ ವಿರುದ್ಧ ಹೋರಾಡ್ತಿರೋರು ನಿಜವಾದ ವಾರಿಯರ್ಸ್: ಬಿಗ್‌ಬಿ ಶುಭಾಶಯ

By Suvarna NewsFirst Published Aug 15, 2020, 11:47 AM IST
Highlights

ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಬಂದ ಬಾಲಿವುಡ್ ಬಿಗ್‌ಬಿ ಅಮಿತಾಭ್‌ ಬಚ್ಚನ್ ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯ ತಿಳಿಸಿದ್ದಾರೆ. ತಮ್ಮ ದೈನಂದಿನ ಚಟುವಟಿಗಳ ಬಗ್ಗೆ ಮಾಹಿತಿ ನೀಡುತ್ತಲೇ ಇರುವ ಹಿರಿಯ ನಟಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್.

ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಬಂದ ಬಾಲಿವುಡ್ ಬಿಗ್‌ಬಿ ಅಮಿತಾಭ್‌ ಬಚ್ಚನ್ ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯ ತಿಳಿಸಿದ್ದಾರೆ. ತಮ್ಮ ದೈನಂದಿನ ಚಟುವಟಿಗಳ ಬಗ್ಗೆ ಮಾಹಿತಿ ನೀಡುತ್ತಲೇ ಇರುವ ಹಿರಿಯ ನಟಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್.

ದೇಶ 74ನೇ ವರ್ಷದ ಸ್ವಾಂತ್ರ್ಯೋತ್ಸವದ ಸಂಭ್ರಮದಲ್ಲಿರುವಾಗ ಅಮಿತಾಭ್ ಇನ್‌ಸ್ಟಾಗ್ರಾಂನಲ್ಲಿ ಶುಭಾಶಯ ಕೋರಿದ್ದಾರೆ. ಕೊರೋನಾ ವಿರುದ್ಧ ಹೋರಾಡುತ್ತಿರುವ ನಿಜವಾದ ವಾರಿಯರ್ಸ್‌ಗೆ ಸೆಲ್ಯೂಟ್. ಈ ಸಂದರ್ಭ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಬರೆದಿದ್ದಾರೆ.

ಸ್ವಾತಂತ್ರ್ಯೋತ್ಸವ: ನೀವು ನೋಡಲೇಬೇಕಾದ 5 ವೆಬ್‌ಸಿರೀಸ್‌ಗಳಿವು..!

ಇತ್ತೀಚೆಗಷ್ಟೇ ಅಮಿತಾಭ್ ಬಚ್ಚನ್ ಕೊರೋನಾ ಸೋಂಕಿನಿಂದ ಗುಣಮುಖರಾಗಿ ನನಾವತಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಅಭಿಷೇಕ್, ಐಶ್ವರ್ಯಾ, ಆರಾಧ್ಯಗೂ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.

ಅಮಿತಾಭ್‌ ಅಯನ್ ಮುಖರ್ಜಿಯ ಬ್ರಹ್ಮಾಸ್ತ್ರ ಸಿನಿಮಾದಲ್ಲಿ ರಣಬೀರ್ ಕಪೂರ್‌ ಹಾಗೂ ಆಲಿಯಾ ಭಟ್ ಜೊತೆ ಕಾಣಿಸಿಕೊಳ್ಳಲಿದ್ದಾರೆ. 

74 ನೇ ಸ್ವತಂತ್ರೋತ್ಸವ ಸಂಭ್ರಮ: ಕರುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟದ ಹೆಜ್ಜೆಗುರುತುಗಳು

"

click me!