
ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಬಂದ ಬಾಲಿವುಡ್ ಬಿಗ್ಬಿ ಅಮಿತಾಭ್ ಬಚ್ಚನ್ ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯ ತಿಳಿಸಿದ್ದಾರೆ. ತಮ್ಮ ದೈನಂದಿನ ಚಟುವಟಿಗಳ ಬಗ್ಗೆ ಮಾಹಿತಿ ನೀಡುತ್ತಲೇ ಇರುವ ಹಿರಿಯ ನಟಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್.
ದೇಶ 74ನೇ ವರ್ಷದ ಸ್ವಾಂತ್ರ್ಯೋತ್ಸವದ ಸಂಭ್ರಮದಲ್ಲಿರುವಾಗ ಅಮಿತಾಭ್ ಇನ್ಸ್ಟಾಗ್ರಾಂನಲ್ಲಿ ಶುಭಾಶಯ ಕೋರಿದ್ದಾರೆ. ಕೊರೋನಾ ವಿರುದ್ಧ ಹೋರಾಡುತ್ತಿರುವ ನಿಜವಾದ ವಾರಿಯರ್ಸ್ಗೆ ಸೆಲ್ಯೂಟ್. ಈ ಸಂದರ್ಭ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಬರೆದಿದ್ದಾರೆ.
ಸ್ವಾತಂತ್ರ್ಯೋತ್ಸವ: ನೀವು ನೋಡಲೇಬೇಕಾದ 5 ವೆಬ್ಸಿರೀಸ್ಗಳಿವು..!
ಇತ್ತೀಚೆಗಷ್ಟೇ ಅಮಿತಾಭ್ ಬಚ್ಚನ್ ಕೊರೋನಾ ಸೋಂಕಿನಿಂದ ಗುಣಮುಖರಾಗಿ ನನಾವತಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಅಭಿಷೇಕ್, ಐಶ್ವರ್ಯಾ, ಆರಾಧ್ಯಗೂ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.
ಅಮಿತಾಭ್ ಅಯನ್ ಮುಖರ್ಜಿಯ ಬ್ರಹ್ಮಾಸ್ತ್ರ ಸಿನಿಮಾದಲ್ಲಿ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಜೊತೆ ಕಾಣಿಸಿಕೊಳ್ಳಲಿದ್ದಾರೆ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.