
ಮುಂಬೈ(ಏ.11): ಬಾಲಿವುಡ್ ಹಿರಿಯ ನಟ ಅಕ್ಷಯ್ ಕುಮಾರ್ ದೇಶದ ವಿಚಾರ ಬಂದಾಗ ಹಿಂದೂ ಮುಂದೂ ನೋಡದೆ ಅಖಾಡಕ್ಕೆ ಧುಮುಕತ್ತಾರೆ. ಭಯೋತ್ಪಾದಕರ ದಾಳಿಯಲ್ಲಿ ಮಡಿದ ವೀರ ಯೋಧರ ಕುಟುಂಬಕ್ಕೆ ನೆರವು, ನಿರ್ಗತಿಕರಿಗೆ ನೆರವು ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳಿಂದಲೇ ಅಕ್ಷಯ್ ಕುಮಾರ್ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಇದೀಗ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲೂ ಬಾಲಿವುಡ್ ನಟ ಇತರ ಎಲ್ಲರಿಗಿಂತಲೂ ಮುಂದಿದ್ದಾರೆ.
ಕೊರೋನಾ ಯುದ್ಧಕ್ಕೆ ಅಕ್ಷಯ್ 25 ಕೋಟಿ ರೂ, ಮನ ಗೆದ್ದಿತು ಪತ್ನಿಗೆ ನೀಡಿದ ಉತ್ತರ..
ಕೊರೋನಾ ವೈರಸ್ ವಿರುದ್ಧ ಹೋರಾಟದಲ್ಲಿ ಸರ್ಕಾರದ ಜೊತೆ ಕೈಜೋಡಿಸಿರುವ ಅಕ್ಷಯ್ ಕುಮಾರ್ ಈಗಾಗಲೇ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಬರೋಬ್ಬರಿ 25 ಕೋಟಿ ರೂಪಾಯಿ ನೀಡಿದ್ದಾರೆ. ಇಷ್ಟೇ ಅಲ್ಲ, ಸರ್ಕಾರಕ್ಕೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲು ಬದ್ಧ ಎಂದಿದ್ದಾರೆ. ಇದರ ಬೆನ್ನಲ್ಲೇ ಅಕ್ಷಯ್ ಕುಮಾರ್ ಮುಂಬೈ ಮಹಾನಗರ ಪಾಲಿಕೆಗೆ 3 ಕೋಟಿ ರೂಪಾಯಿ ನೀಡಿದ್ದಾರೆ.
ಉದ್ಯಮಿ ಆನಂದ್ ಮಹೀಂದ್ರ ಗಮನಸೆಳೆದ ಕಿಲಾಡಿ ಅಕ್ಷಯ್ ಕುಮಾರ್ ನಡೆ!
ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳ ಪಿಪಿಇ ಕಿಟ್, ಮಾಸ್ಕ್ ಹಾಗೂ ರ್ಯಾಪಿಡ್ ಟೆಸ್ಟ್ ಕಿಟ್ ಖರೀದಿಗೆ ಅಕ್ಷಯ್ ಕುಮಾರ್ 3 ಕೋಟಿ ರೂಪಾಯಿ ನೀಡಿದ್ದಾರೆ. ಮುಂಬೈ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿದೆ. ದೇಶದಲ್ಲಿ ಅತೀ ಹೆಚ್ಚು ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಇಷ್ಟೇ ಅಲ್ಲ ಕಿಟ್, ಮಾಸ್ಕ್, ಸ್ಯಾನಿಟೈಸರ್ ಇಲ್ಲದೆ ವೈದ್ಯರು, ಆಸ್ಪತ್ರೆ ಸಿಬ್ಬಂದಿಗಳಿಗೂ ಕೊರೋನಾ ವೈರಸ್ ತಗುಲಿದ ಊದಾಹರಣೆ ಮುಂಬೈನಲ್ಲಿದೆ.
ಇದನ್ನು ಅರಿತ ಅಕ್ಷಯ್ ಕುಮಾರ್ ತಕ್ಷಣವೇ 3 ಕೋಟಿ ರೂಪಾಯಿ ನೀಡಿದ್ದಾರೆ. ಈ ಮೂಲಕ ಬಾಲಿವುಡ್ ನಟ ಅಕ್ಕಿಗೆ ಸರಿಸಾಟಿ ಯಾರೂ ಇಲ್ಲ ಅನ್ನೋದನ್ನು ಮತ್ತೆ ಸಾಬೀತು ಮಾಡಿದ್ದಾರೆ. ಹಣ ಮಾತ್ರವಲ್ಲ ಲಾಕ್ಡೌನ್ ಸಮಯದಲ್ಲಿ ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿರುವ ನಿರ್ಗತಿಕರಿಗೆ ಅಕ್ಷಯ್ ಕುಮಾರ್ ನೆರವಾಗುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.