‘ಫನಿ’ ಸಂತ್ರಸ್ತರಿಗೆ ಅಕ್ಷಯ್ ಕುಮಾರ್ ಆರ್ಥಿಕ ನೆರವು

Published : May 08, 2019, 11:32 AM IST
‘ಫನಿ’  ಸಂತ್ರಸ್ತರಿಗೆ ಅಕ್ಷಯ್ ಕುಮಾರ್ ಆರ್ಥಿಕ ನೆರವು

ಸಾರಾಂಶ

ಒಡಿಸ್ಸಾದಲ್ಲಿ ಫನಿ ಅಬ್ಬರಕ್ಕೆ ಜನಜೀವನ ತತ್ತರ | ನೆರೆ ಸಂತ್ರಸ್ತರಿಗೆ ಅಕ್ಷಯ್ ಕುಮಾರ್ ಆರ್ಥಿಕ ನೆರವು | ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ ಅಕ್ಷಯ್ ಕುಮಾರ್ 

ಫನಿ ಚಂಡಮಾರುತದ ಅಬ್ಬರದಿಂದ ಒಡಿಶಾ ಅಕ್ಷರಶಃ ನಲುಗಿ ಹೋಗಿದೆ. ಸಾಕಷ್ಟು ಮಂದಿ ಮನೆ, ಆಸ್ತಿಯನ್ನು ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. 34 ಮಂದಿ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಮದುವೆ ಬಳಿಕ ಮೇಘನಾ ರಾಜ್ ಹೊಸ ಸಿನಿಮಾ

ಒಡಿಶಾ ಸಂತ್ರಸ್ತರಿಗೆ ನೆರೆ ರಾಜ್ಯದವರು, ಕೇಂದ್ರ ಸರ್ಕಾರ ನೆರವಿನ ಹಸ್ತ ಚಾಚಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೂಡಾ ಸಹಾಯ ಹಸ್ತ ಚಾಚಿದ್ದಾರೆ. ಸಂತ್ರಸ್ತರಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ ದೇಣಿಗೆ ನೀಡಿದ್ದಾರೆ. 

ದೇಹದ ‘ಆ‘ ಅಂಗದ ಬಗ್ಗೆ ಮಾತನಾಡಿದ್ದವನಿಗೆ ಈ ನಟಿ ಕೊಟ್ಟ ಚಾಟಿ ಏಟು!

ಅಕ್ಷಯ್ ಕುಮಾರ್ ಸಾಮಾಜಿಕ ಸೇವೆಯಲ್ಲಿ ಯಾವಾಗಲೂ ಮುಂದು. ಸಹಾಯ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೇರಳ, ಚೆನ್ನೈನಲ್ಲಿ ಪ್ರವಾಹ ಬಂದಾಗ ಅಲ್ಲಿನ ಸಂತ್ರಸ್ತರಿಗೂ ನೆರವು ನೀಡಿದ್ದರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?
ಹೀರೋ ಆಗುವ ಮುನ್ನ ಶಾಕ್ ಕೊಟ್ಟ ಅಕೀರಾ ನಂದನ್: ರೇಣು ದೇಸಾಯಿ ಫೋನ್ ಮಾಡಿದಾಗ ಪವನ್ ನಕ್ಕಿದ್ದೇಕೆ?