
ನವದೆಹಲಿ (ಡಿ. 17): ಪೌರತ್ವ ನಿಷೇಧ ಕಾಯ್ದೆ ( CAA) ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಾಮಿಯಾ ಆವರಣ ಅಕ್ಷರಶಃ ರಣಾಂಗಣವಾಗಿದೆ. ಸಾಕಷ್ಟು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ಪ್ರತಿಭಟನೆ ದೇಶಾದ್ಯಂತ ಪರ- ವಿರೋಧ ಚರ್ಚೆ ಹುಟ್ಟುಹಾಕಿದೆ.
ಪ್ರತಿಭಟನೆ ಕಾವಿನಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಿದ ಜಾಮಿಯಾ ವಿದ್ಯಾರ್ಥಿಗಳು!
ಜಾಮಿಯಾ ಪ್ರತಿಭಟನೆ ಬಗ್ಗೆ ಬಾಲಿವುಡ್ ಸೆಲಬ್ರಿಟಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಕ್ಷಯ್ ಕುಮಾರ್, ಆಯುಷ್ಮಾನ್ ಖುರಾನಾ, ಅಜಯ್ ದೇವಗನ್, ಅನುರಾಗ್ ಕಶ್ಯಪ್, ರಿತೇಶ್ ದೇಶ್ಮುಖ್, ಅನುಭವ್ ಸಿಂಹ ಸೇರಿದಂತೆ ಸಾಕಷ್ಟು ಮಂದಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನಟ ಅಕ್ಷಯ್ ಕುಮಾರ್ ಜಾಮಿಯಾ ವಿದ್ಯಾರ್ಥಿಗಳ ಟ್ವೀಟನ್ನು ಲೈಕ್ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದರು. ಕೂಡಲೇ 'ನಾನು ಆಕಸ್ಮಿಕವಾಗಿ 'ಲೈಕ್' ಒತ್ತಿಬಿಟ್ಟೆ. ಗೊತ್ತಾದಕೂಡಲೇ ಅನ್ಲೈಕ್ ಮಾಡಿದ್ದೇನೆ. ಇಂತಹ ಕಾಯ್ದೆಗೆ ನಾನು ಬೆಂಬಲ ಸೂಚಿಸುವುದಿಲ್ಲ' ಎಂದು ಬರೆದುಕೊಂಡರು.
ನಟ ಆಯುಷ್ನಾನ್ ಖುರಾನ್ ವಿದ್ಯಾರ್ಥಿಗಳಲ್ಲಿ ಶಾಂತಿ ಕಾಪಾಡುವಂತೆ ಕೇಳಿಕೊಂಡಿದ್ದಾರೆ. ಈ ಟ್ವೀಟ್ಗೆ ನೆಟ್ಟಿಗರು ಗರಂ ಆಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.