ಕುಂಭಮೇಳ ಸಾಂಕೇತಿಕವಾದರೆ, ರಂಜಾನ್‌ಗೆ ಜನ ಸೇರುವುದನ್ನು ನಿಲ್ಲಿಸಿ; ಮೋದಿಗೆ ಕಂಗನಾ ಮನವಿ!

Published : Apr 17, 2021, 08:31 PM IST
ಕುಂಭಮೇಳ ಸಾಂಕೇತಿಕವಾದರೆ, ರಂಜಾನ್‌ಗೆ ಜನ ಸೇರುವುದನ್ನು ನಿಲ್ಲಿಸಿ; ಮೋದಿಗೆ ಕಂಗನಾ ಮನವಿ!

ಸಾರಾಂಶ

ಕೊರೋನಾ ವೈರಸ್ ಹೆಚ್ಚಾದ ಕಾರಣ ಪ್ರಧಾನಿ ನರೇಂದ್ರ ಮೋದಿ ಮನವಿ ಮೇರೆಗೆ ಕುಂಭಮೇಳ ಆಚರಣೆಗೆ ತೆರೆ ಎಳೆಯಲಾಗಿದೆ. ಇದೀಗ ಬಾಲಿವುಡ್ ನಟಿ ಕಂಗನಾ ರನಾವತ್ ಹಾಗಾದರೆ ರಂಜಾನ್ ಕತೆ ಏನು? ಎಂದು ಪ್ರಶ್ನಿಸಿದ್ದಾರೆ. ಇಷ್ಟೇ ಅಲ್ಲ ಮೋದಿಗೆ ವಿಶೇಷ ಮನವಿ ಮಾಡಿದ್ದಾರೆ. 

ಮುಂಬೈ(ಏ.17): ಕೊರೋನಾ ವೈರಸ್ ಪ್ರಕರಣ ಭಾರತ ಕಂಡು ಕೇಳರಿಯದ ರೀತಿಯಲ್ಲಿ ಸಾಗುತ್ತಿದೆ. ಕಳೆದ 24 ಗಂಟೆಯಲ್ಲಿ 2.34 ಲಕ್ಷ ಪ್ರಕರಣ ದಾಖಲಾಗಿದೆ. ಹೀಗಾಗಿ ಪ್ರಧಾ ನರೇಂದ್ರ ಮೋದಿ, ಕುಂಭ ಮೇಳ ಸಾಂಕೇತಿಕವಾಗಿ ಆಚರಿಸುವಂತೆ ಮನವಿ ಮಾಡಿದ್ದರು. ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ ಎಳೆಯಲಾಗಿದೆ. ಇದೀಗ ರಂಜಾನ್‌ ಪಾರ್ಥನೆಗೆ ಜನ ಸೇರುವುದನ್ನು ನಿಲ್ಲಿಸಿ ಎಂದು ಬಾಲಿವುಡ್ ನಟಿ ಕಂಗನಾ ರನಾವತ್ ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸುವುದಾದರೆ, ರಂಜಾನ್‍ ಪ್ರಾರ್ಥನೆಗೆ ಜನ ಸೇರುವುದನ್ನೂ ನಿಲ್ಲಿಸಿ ಎಂದು ಕಂಗನಾ ರನಾವತ್ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ರಣಾವತ್ ಟ್ವೀಟ್‌ಗೆ ಪರ ವಿರೋಧ ವ್ಯಕ್ತವಾಗಿದೆ. 

ಹಲವರು ಕಂಗನಾ ಅಭಿಪ್ರಾಯವನ್ನ ಬೆಂಬಲಿಸಿದರೆ, ಇನ್ನೂ ಕೆಲವರು ವಿರೋಧಿಸಿದ್ದಾರೆ. ಕೊರೋನಾ ಹರಡಲು ಸಾಧ್ಯತೆ ಇರುವ ಎಲ್ಲಾ ಕಾರ್ಯಕ್ರಮ, ಹಬ್ಬ ರದ್ದು ಮಾಡಿ, ಆರೋಗ್ಯ ಮುಖ್ಯ ಎಂದು ಪ್ರತಿಕ್ರಿಯೆಗಳು ವ್ಯಕ್ತವಾಗಿದೆ

ಕೊರೋನಾ ಹೆಚ್ಚಳ, ಸಾಂಕೇತಿಕ ಕುಂಭಮೇಳ: ಮೋದಿ

ಕುಂಭಮೇಳದಿಂದ ಕೊರೋನಾ ಹರಡಿದರೆ, ರಂಜಾನ್ ಪ್ರಾರ್ಥನೆಗೆ ಜನ ಸೇರಿದಾಗಲೂ ಹರಡಲಿದೆ. ಹೀಗಾಗಿ ಕುಂಭಮೇಳ ಜೊತೆಗೆ ರಂಜಾನ್ ಪ್ರಾರ್ಥನೆಗೆ ಜನ ಸೇರುವುದನ್ನು ನಿಲ್ಲಿಸಿ ಎಂದು ಕಂಗನಾ ಹೇಳಿದ್ದಾರೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಸ್ಮೃತಿ ಮಂಧಾನ ನಂತರ ಖ್ಯಾತ ನಟಿಯ ಮದುವೆ ಕ್ಯಾನ್ಸಲ್? ಇನ್ಸ್ಟಾದಿಂದ ಫೋಟೋ ಡಿಲೀಟ್ ಮಾಡಿದ್ದಕ್ಕೆ ಡೌಟ್!
The Devil Movie Review: ದರ್ಶನ್‌ ತೂಗುದೀಪ 'ಡೆವಿಲ್‌' ಹೇಗಿದೆ? ಡೆವಿಲ್‌ನಲ್ಲೂ ಗಿಲ್ಲಿ ನಟನ ಭರ್ಜರಿ ಕಾಮಿಡಿ