ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನವೇ ಸಿಬ್ಬಂದಿಗೆ ಸಂಬಳ ನೀಡಿದ್ದ ಸುಶಾಂತ್ ಸಿಂಗ್!

Suvarna News   | Asianet News
Published : Jun 19, 2020, 12:53 PM ISTUpdated : Jun 19, 2020, 01:35 PM IST
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನವೇ ಸಿಬ್ಬಂದಿಗೆ ಸಂಬಳ ನೀಡಿದ್ದ ಸುಶಾಂತ್ ಸಿಂಗ್!

ಸಾರಾಂಶ

ನಟ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಮೊದಲೇ  ನಿರ್ಧರಿಸಿದ್ದರೇ? ಸ್ನೇಹಿತರಿಗೆ ಕಾಲ್ ಮಾಡಿದ್ದು ನಿಜವೇ? ಮೂರು ದಿನಗಳ ಮುನ್ನವೇ ತನ್ನ ಸಿಬ್ಬಂದಿಗೆ ಸಂಬಳ ನೀಡಲು ನೀಡಲು ಕಾರಣವೇನು?

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ  ಚುರುಕುಗೊಳ್ಳುತ್ತಿದ್ದಂತೆ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡು ತನ್ನ ಯಂಗ್ ಚಾರ್ಮ್‌ನಿಂದ ಜನಪ್ರಿಯತೆ ಪಡೆದುಕೊಂಡ ಸುಶಾಂತ್ ಇಂಥ ನಿರ್ಧಾರ ತೆಗೆದುಕೊಳ್ಳಲು  ಕಾರಣವೇನು ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದಿದೆ? 

ಸುಶಾಂತ್ ಸಾವಿನ ಬಗ್ಗೆ ಮೊದಲೇ ಗೊತ್ತಿದ್ದರೂ ಆಲಿಯಾ ಭಟ್‌ ತಂದೆ ಮೌನಿ ಆಗಿದ್ದೇಕೆ?

ಸುಶಾಂತ್ ಆತ್ಮಹತ್ಯೆ ಪ್ರಕರಣದ ಬಗ್ಗೆ ವಕೀಲರು ತನಿಖೆ ಶುರು ಮಾಡಿ ಎಂದು ಕೋರ್ಟ್‌ ಮೆಟ್ಟಿಲು ಏರಿದ್ದಾರೆ. ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಚಾರಗಳಲ್ಲಿ  ಯಾವುದು ಸತ್ಯ ಯಾವುದು ಸುಳ್ಳು ಎಂದು ಯಾರಿಗೂ ತಿಳಿಯದಂತಾಗಿದೆ. ಜನರ ಚರ್ಚೆಯನ್ನು ಬದಿಗಿಟ್ಟು ಪೊಲೀಸರು ಈಗ ತನಿಖೆ ಶುರು ಮಾಡಿದ್ದಾರೆ. ಅವರು ಕಲೆಹಾಕಿರುವ ಮಾಹಿತಿ ಪ್ರಕಾರ ಸುಶಾಂತ್ ಸಾವು ಪೂರ್ವ  ನಿರ್ಧಾರಿತವಾಗಿತ್ತು?

ಹೌದು! ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮೂರು ದಿನಗಳ ಮೊದಲೇ ತನ್ನ ಬಳಿ ಕೆಲಸ ಮಾಡುವ ಪ್ರತಿ ಸಿಬ್ಬಂದಿಗಳಿಗೆ ಸಂಬಳ ನೀಡಿದ್ದಾರೆ. ಹಾಗೆ 'ಇನ್ನುಮುಂದೆ ನಾನು ಸಂಬಳ ನೀಡಲು ಆಗುತ್ತೋ ಇಲ್ಲವೋ' ಎಂಬ ಮಾತನ್ನು ಹೇಳಿರುವುದಾಗಿ ಒರ್ವ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಸಿಬ್ಬಂದಿಗಳಿಗೆ  ಈ ಮಾತಿನ ಅರ್ಥ ಇದು ಎಂದು ತಿಳಿದಿರಲಿಲ್ಲ.

ಕಾರಣ ಹೇಳದೆ ಸಿನಿಮಾ ನಿರಾಕರಿಸಿದ ಆಲಿಯಾ; ಸುಶಾಂತ್ ಕೊಟ್ಟ ಟಾಂಗ್ ಹೀಗಿತ್ತು! 

ಇನ್ನು ಸುಶಾಂತ್ ಸಿಂಗ್ ಜತೆ ಹೆಚ್ಚಿನ ಸಂಪರ್ಕ ಹೊಂದಿದ್ದ ನಟಿ ರಿಯಾ ಚಕ್ರಬೂರ್ತಿ ಭಾವುಕ ಪೋಸ್ಟ್‌ ವೈರಲ್ ಆಗುತ್ತಿದ್ದಂತೆ ಜನರಿಗೆ ರೀಯಾ ಹಾಗೂ ಸುಶಾಂತ್ ಆಪ್ತರಾಗಿದ್ದರು ಎಂದು ತಿಳಿದು ಬಂದಿತ್ತು. ಎಷ್ಟೇ ನೋವಿದ್ದರು ಆಕೆಯ ಬಳಿ ಹಂಚಿಕೊಳ್ಳುತ್ತಿದ್ದ ಇವರು ಏನಾದರೂ ಹೇಳಿಕೊಂಡಿರಬಹುದಲ್ವಾ? ರೀಯಾ ಹೇಳಿಕೆ ಪಡೆಯಲು ಮುಂಬೈ ಪೊಲೀಸರು ಗುರುವಾರ ತನಿಖೆ ಮಾಡಿದ್ದಾರೆ. ಬೆಳಗ್ಗೆ ಸುಮಾರು 11.30 ಪೊಲೀಸ್‌ ಠಾಣೆಗೆ ಆಗಮಿಸಿದ ರಿಯಾ ಸಂಜೆ 3.00 ಗಂಟೆವರೆಗೂ ವಿಚಾರಣೆಯಲ್ಲಿ ಪಾಲ್ಗೊಂಡಿದ್ದರು. 

ಈ ಬಗ್ಗೆ ಪೊಲೀಸರ ಪೂರ್ಣ ತನಿಖೆಯ ನಂತರವಷ್ಟೇ ಸತ್ಯಾಂಶ ಏನೆಂದು ತಿಳಿಯಬಹುದಾಗಿದೆ.


"

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?
ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?