ರೈತರನ್ನು ಟೆರರಿಸ್ಟ್ ಎಂದ ಕಂಗನಾ ವಿರುದ್ಧ ಕ್ರಿಮಿನಲ್ ಕೇಸ್

Published : Sep 26, 2020, 05:33 PM IST
ರೈತರನ್ನು ಟೆರರಿಸ್ಟ್ ಎಂದ ಕಂಗನಾ ವಿರುದ್ಧ ಕ್ರಿಮಿನಲ್ ಕೇಸ್

ಸಾರಾಂಶ

ಹೈ ಕೋರ್ಟ್ ವಕೀಲ, ತುಮಕೂರು ನಿವಾಸಿ ರಮೇಶ್ ನಾಯಕ್ ಎಲ್., ಅವರು ಕಂಗನಾ ವಿರುದ್ಧ ಪಿಸಿಆರ್(ಪ್ರೈವೇಟ್ ಕಂಪ್ಲೇಂಟ್) ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ತುಮಕೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ ವಿರುದ್ಧ ಖಾಸಗಿ ದೂರು ದಾಖಲಾಗಿದೆ. ಕಂಗನಾ ಅವರು ರೈತರನ್ನು ನಿಂದಿಸಿದ್ದಾರೆಂದು ಆರೋಪಿಸಿ ಹೈಕೋರ್ಟ್‌ ವಕೀಲ ಹಾಗೂ ತುಮಕೂರು ನಿವಾಸಿ ರಮೇಶ್‌ ನಾಯಕ್‌ ಎಂಬುವರು ದೂರು ದಾಖಲಿಸಿದ್ದಾರೆ.

ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕಂಗನಾ ರಣಾವತ್‌ ಅವರು ಟ್ವೀಟ್‌ನಲ್ಲಿ ಭಯೋತ್ಪಾದಕರು ಎಂದು ದೂರಿದ್ದರು. ಈ ಹೇಳಿಕೆಯಿಂದ ಸ್ವತಃ ರೈತರು ಆಗಿರುವ ವಕೀಲ ರಮೇಶ್‌ ನಾಯಕ್‌ ನೇರವಾಗಿ ನ್ಯಾಯಾಲಯದಲ್ಲೇ ದೂರು ದಾಖಲಿಸಿದ್ದಾರೆ.

ತನ್ನ ಮಕ್ಕಳು ಮಲಯಾಳೀಸ್ ಆಗ್ತಾರಂತ ಹೆದರಿದ್ರು ಕರಣ್ ಜೋಹರ್..!

ಕಂಗನಾ ರಣಾವತ್ ರೈತರನ್ನು ನಿಂದಿಸಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದು, ಐಪಿಸಿ ಸೆಕ್ಷನ್  44,108,153,153A, 504 ಅಡಿಯಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.

ಇದಕ್ಕೂ ಮುನ್ನ ಅವರು ಈ ವಿಷಯಕ್ಕೆ ಸಂಬಂಧಿಸಿ ಡಿಜಿಪಿ ಮತ್ತು ಜಿಲ್ಲಾ ಪೊಲೀಸರಿಗೆ ಇ- ಮೇಲ್‌ನಲ್ಲಿ ದೂರು ನೀಡಿದ್ದರು. ಪೊಲೀಸರು ದೂರು ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಮಾಲ್ಡೀವ್ಸ್‌ನಲ್ಲಿ ಮೌನಿ ರಾಯ್: ಇಲ್ನೋಡಿ ಫೋಟೋಸ್

ದೂರುದಾರರು ಕ್ಯಾತ್ಸಂದ್ರ ಪೊಲೀಸ್‌ ಠಾಣೆ ವ್ಯಾಪ್ತಿ ಕದರನಹಳ್ಳಿ ತಾಂಡ್ಯ ನಿವಾಸಿಯಾಗಿರುವುದರಿಂದ ಕ್ಯಾತ್ಸಂದ್ರ ಪೊಲೀಸರಿಗೆ ಎಫ್‌ಐಆರ್‌ ದಾಖಲಿಸುವಂತೆ ನಿರ್ದೇಶನ ನೀಡಲು ಕೋರಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?
10 ಭಾಷೆಗಳಲ್ಲಿ 90 ಸಿನಿಮಾಗಳು, ಗಂಗೂಲಿ ಜೊತೆ ಅಫೇರ್ ವದಂತಿ.. 50 ವರ್ಷವಾದರೂ ಮದುವೆಯಾಗದ ನಟಿ ಯಾರು?