
ಬಹುನಿರೀಕ್ಷಿತ ಸೈರಾ ನರಸಿಂಹ ರೆಡ್ಡಿ ಸೆಟ್ ನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು ಸುಮಾರು 2 ಕೋಟಿ ವೆಚ್ಚದ ವಸ್ತುಗಳು ಅಗ್ನಿಗೆ ಆಹುತಿಯಾಗಿದೆ. ಅವಗಢಕ್ಕೆ ಕಾರಣ ತಿಳಿದು ಬಂದಿಲ್ಲ.
ಮೇ 24 ಕ್ಕೆ ಮೋದಿ ಬಯೋಪಿಕ್ ರಿಲೀಸ್
ತೆಲಂಗಾಣದ ಕೋಕೋಪೇಟ್ ನ ಅಲ್ಲು ಅರವಿಂದ್ ಫಾರ್ಮ್ ನಲ್ಲಿ ಸೆಟ್ ಹಾಕಲಾಗಿತ್ತು. ನಿನ್ನೆ ಮಧ್ಯರಾತ್ರಿ ಅಗ್ನಿ ಅವಗಢ ಸಂಭವಿಸಿದ್ದು ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಈ ವೇಳೆ ಶೂಟಿಂಗ್ ನಡೆಯುತ್ತಿರಲಿಲ್ಲವಾದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಧಾ ಮಿಸ್ ಪಾತ್ರಕ್ಕೆ ಕಿರುತೆರೆ ರಾಧಿಕಾ ಪಂಡಿತ್!
ಉಯ್ಯಲವಾಡ ನರಸಿಂಹ ರೆಡ್ಡಿ ಜೀವನಾಧಾರಿತ ಐತಿಹಾಸಿಕ ಚಿತ್ರ ಇದಾಗಿದೆ. ತಮಿಳು, ತೆಲುಗು ಮಲಯಾಳಂನಲ್ಲಿ ಈ ಚಿತ್ರ ತೆರೆ ಕಾಣಲಿದೆ. ಚಿರಂಜೀವಿ, ಅಮಿತಾಬ್ ಬಚ್ಚನ್, ಜಗಪತಿ ಬಾಬು, ನಯನತಾರಾ ಸೇರಿದಂತೆ ಸ್ಟಾರ್ ನಟರ ತಾರಾಗಣವೇ ಈ ಚಿತ್ರಕ್ಕಿದೆ. ವಿಶೇಷ ಎಂದರೆ ಕನ್ನಡದ ನಟ ಕಿಚ್ಚ ಸುದೀಪ್ ಕೂಡಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.