ದಲಿತ ಸಮುದಾಯ ಅವಹೇಳನ: ‘ಕಾಂತಾರ’ ಚಿತ್ರಪ್ರದರ್ಶನ ಸ್ಥಗಿತಕ್ಕೆ ಜಿಲ್ಲಾ ಮ್ಯಾಜಿಸ್ಪ್ರೇಟ್‌ಗೆ ಮನವಿ

Published : Nov 11, 2022, 09:39 PM ISTUpdated : Nov 11, 2022, 09:40 PM IST
ದಲಿತ ಸಮುದಾಯ ಅವಹೇಳನ: ‘ಕಾಂತಾರ’ ಚಿತ್ರಪ್ರದರ್ಶನ ಸ್ಥಗಿತಕ್ಕೆ ಜಿಲ್ಲಾ ಮ್ಯಾಜಿಸ್ಪ್ರೇಟ್‌ಗೆ ಮನವಿ

ಸಾರಾಂಶ

'ಕಾಂತಾರ’ ಸಿನಿಮಾದ ಸಾಕಷ್ಟುಕಡೆಗಳಲ್ಲಿ ದಲಿತ ಸಮುದಾಯ ಮತ್ತು ಮಹಿಳೆಯರನ್ನು ಅವಹೇಳನ ಮಾಡಲಾಗಿದೆ  ಕೂಡಲೇ ಕಾಂತಾರ ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಮತಾ ಸೈನಿಕ ದಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮನವಿ ಸಲ್ಲಿಸಿದೆ.

ಮಂಗಳೂರು (ನ.11) :\ ಕಾಂತಾರ’ ಸಿನಿಮಾದ ಸಾಕಷ್ಟುಕಡೆಗಳಲ್ಲಿ ದಲಿತ ಸಮುದಾಯ ಮತ್ತು ಮಹಿಳೆಯರನ್ನು ಅವಹೇಳನ ಮಾಡಲಾಗಿದೆ. ಈ ದೃಶ್ಯಗಳಿಗೆ ಕತ್ತರಿ ಹಾಕುವಲ್ಲಿ ಸೆನ್ಸಾರ್‌ ಮಂಡಳಿ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ ಕೂಡಲೇ ಕಾಂತಾರ ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಮತಾ ಸೈನಿಕ ದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಅವರು ಜಿಲ್ಲಾ ಮ್ಯಾಜಿಸ್ಪ್ರೇಟ್‌ಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತಾರ ಸಿನಿಮಾ ತಂಡ ಉತ್ತಮ ಸಿನಿಮಾ ಮಾಡಿದ್ದು, ಕಲಾವಿದರ ಅಭಿನಯ ನಿಜಕ್ಕೂ ಚೆನ್ನಾಗಿದೆ. ಆದರೆ ಚಿತ್ರದಲ್ಲಿ ಯುವಕರನ್ನು ಪೋಲಿಯಂತೆ ಬಿಂಬಿಸಲಾಗಿದೆ. ದೈವಗಳ ವಿಧಿ ವಿಧಾನವನ್ನು ವಿಕೃತಗೊಳಿಸಲಾಗಿದೆ. ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ. ಈ ಸೂಕ್ಷ್ಮತೆಗಳಿರುವ ದೃಶ್ಯಗಳಿಗೆ ಸೆನ್ಸಾರ್‌ ಮಂಡಳಿ ಕಾನೂನು ಚೌಕಟ್ಟಿನೊಳಗೆ ಸೆನ್ಸಾರ್‌ ಹಾಕಬೇಕಿತ್ತು. ಆದರೆ ಆ ಕೆಲಸ ಮಾಡುವಲ್ಲಿ ಸೆನ್ಸಾರ್‌ ಮಂಡಳಿ ಸಂಪೂರ್ಣ ವಿಫಲವಾಗಿದೆ. ಈ ಕಾರಣದಿಂದ ಕೂಡಲೇ ಚಲನಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಿಯಲ್ ಕಾಂತರಾಗೆ ಒಲಿದು ಬಂದ ರಾಜ್ಯೋತ್ಸವ ಪ್ರಶಸ್ತಿ; ದೈವನರ್ತಕ ಗುಡ್ಡಪಾಣಾರಗೆ ರಾಜ್ಯೋತ್ಸವದ ಗರಿ

ಪಾಣಾರ ಸಂಘದ ಜಿಲ್ಲಾಧ್ಯಕ್ಷ ಪದ್ಮನಾಭ, ಬಾಕುಡ ಸಮಾಜ ಜಿಲ್ಲಾ ಮುಖಂಡ ಎನ್‌. ಪದ್ಮನಾಭ, ದ.ಸಂ.ಸ. ಸಮಿತಿ ಸಂಚಾಲಕ ಉಮೇಶ್‌, ದ.ಸಂ.ಸ. ಜಿಲ್ಲಾ ಸಂಚಾಲಕ ಲಕ್ಷ್ಮಣ್‌ ಕಾಂಚನ್‌, ಕ.ದ.ಸಂ. ಸಮಿತಿ ಸಂಚಾಲಕ ನಾಗೇಶ್‌, ಸಾಮಾಜಿಕ ಚಿಂತಕ ಕಾಂತಪ್ಪ ಅಲಂಗಾರ್‌ ಇದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಾಜಮೌಳಿ ಚಿತ್ರಕ್ಕೆ ಹಾಲಿವುಡ್‌ ಬೂಸ್ಟ್‌: ಅವತಾರ್‌ 3ನಲ್ಲಿ ವಾರಣಾಸಿ ಟೀಸರ್‌
ಅರೆರೆ! ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ಇದೇನಾಯ್ತು.. ಇದ್ದಕ್ಕಿದ್ದಂತೆ ಇಬ್ಬರು ನಟಿಯರ ಜೊತೆ ಬಾಲಿವುಡ್‌ಗೆ ಹೊರಟಿದ್ಯಾಕೆ?