ಭಾರತದಿಂದ ಎಸ್ಕೇಪ್ ಆಗಲು ಪ್ರಯತ್ನ, ಸಾಕ್ಷ್ಯ ನಾಶ; ಜಾಕ್ವೆಲಿನ್ ಬಗ್ಗೆ ಶಾಕಿಂಗ್ ವಿಚಾರ ಬಿಚ್ಚಿಟ್ಟ ED

Published : Oct 23, 2022, 11:33 AM IST
ಭಾರತದಿಂದ ಎಸ್ಕೇಪ್ ಆಗಲು ಪ್ರಯತ್ನ, ಸಾಕ್ಷ್ಯ ನಾಶ; ಜಾಕ್ವೆಲಿನ್ ಬಗ್ಗೆ ಶಾಕಿಂಗ್ ವಿಚಾರ ಬಿಚ್ಚಿಟ್ಟ ED

ಸಾರಾಂಶ

200ಕೋಟಿ ರೂಪಾಯಿಗೂ ಅಧಿಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್  ಭಾರತದಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದರು, ಮೊಬೈಲ್‌ನಲ್ಲಿದ್ದ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ED) ಆರೋಪ ಮಾಡಿದೆ.

200ಕೋಟಿ ರೂಪಾಯಿಗೂ ಅಧಿಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್  ಭಾರತದಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ್ದರು, ಮೊಬೈಲ್‌ನಲ್ಲಿದ್ದ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ED) ಆರೋಪ ಮಾಡಿದೆ. ನಟಿ ಜಾಕ್ವೆಲಿನ್ ಜಾಮೀನು ಅರ್ಜಿ ವಿರೋಧಿಸಿ ಇಡಿ ಶಾಕಿಂಗ್ ವಿಚಾರ ಬಿಟ್ಟಿದೆ. 

ಇತ್ತೀಚೆಗೆ ಜಾಕ್ವೆಲಿನ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಅರ್ಜಿಯ ಅಂತಿಮ ವಾದಕ್ಕಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ನಟಿಗೆ ಮಧ್ಯಂತರ ಜಾಮೀನು ವಿಸ್ತರಿಸಲಾಗಿದೆ. ಆದರೆ ಜಾರಿ ನಿರ್ದೇಶನಾಲಯವು ಜಾಮೀನು ಅರ್ಜಿಯ ಪ್ರತಿಕ್ರಿಯೆಯಲ್ಲಿ ಆಘಾತಕಾರಿ ವಿಚಾರಗಳನ್ನು ಬಹಿರಂಗಪಡಿಸಿದೆ.

ಪಿಟಿಐ ವರದಿಯ ಪ್ರಕಾರ, ನಟಿ ಜಾಕ್ವೆಲಿನ್ ಫರ್ನಾಂಡಿಸ್ ಭಾರತದಿಂದ ಎಸ್ಕೇಪ್ ಆಗಲು ಪ್ಲಾನ್ ಮಾಡಿದ್ದರು, ಆದರೆ ಲುಕ್‌ಔಟ್ ಸುತ್ತೋಲೆಯಲ್ಲಿ ಅವರ ಹೆಸರು ಇರುವುದರಿಂದ ಹಾಗೆ ಮಾಡಲು ಸಾಧ್ಯವಾಗಲಿಲ್ಲ ಎಂದು ಇಡಿ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ಜಾಕ್ವೆಲಿನ್ ತನ್ನ ಮೊಬೈಲ್ ಫೋನ್‌ನಲ್ಲಿದ್ದ ಸಾಕ್ಷ್ಯವನ್ನು ನಾಶಮಾಡಿದ್ದಾರೆ ಎಂದು ಇಡಿ ನ್ಯಾಯಾಲಕ್ಕೆ ತಿಳಿಸಿದೆ. 

ಆದರೆ ಇಡಿ ಆರೋಪಗಳನ್ನು ಜಾಕ್ವೆಲಿನ್ ಪರ ವಕೀಲರಾದ ಪ್ರಶಾಂತ್ ಪಾಟೀಲ್ ತಳ್ಳಿಹಾಕಿದ್ದಾರೆ. ಜಾಕ್ವೆಲಿನ್ ಯಾವಾಗಲೂ ತನಿಖಾ ಸಂಸ್ಥೆಯೊಂದಿಗೆ ಸಹಕರಿಸಿದ್ದಾರೆ ಮತ್ತು ಇಲ್ಲಿಯವರೆಗಿನ ಎಲ್ಲಾ ಸಮನ್ಸ್‌ಗಳಿಗೂ ಹಾಜರಾಗಿದ್ದಾರೆ ಎಂದು ಹೇಳಿದ್ದಾರೆ. 'ಜಾಕ್ವೆಲಿನ್  ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಎಲ್ಲಾ ಮಾಹಿತಿಯನ್ನು ಇಡಿಗೆ ಹಸ್ತಾಂತರಿಸಿದ್ದಾರೆ' ಎಂದು ಜಾಕ್ವೆಲಿನ್ ಪರ ವಕೀಲರು ಹೇಳಿದರು.

Jacqueline Fernandezಗೆ ಮಧ್ಯಂತರ ಜಾಮೀನು: 200 ಕೋಟಿ ವಂಚನೆ ಪ್ರಕರಣದಲ್ಲಿ ಕೊಂಚ ರಿಲೀಫ್‌

ಆರೋಪಗಳ ಪ್ರಕಾರ ಜಾಕ್ವೆಲಿನ್‌ ಫರ್ನಾಂಡೆಸ್‌ ಸುಕೇಶ್‌ ಚಂದ್ರಶೇಖರ್‌ರಿಂದ 7 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಉಡುಗೊರೆಯಾಗಿ ಪಡೆದಿದ್ದರು. ದುಬಾರಿ ಬ್ಯಾಗ್‌, ಕಾರು, ಬಟ್ಟೆಗಳು, ವಾಚ್‌ ಮತ್ತಿತರ ವಸ್ತುಗಳನ್ನೂ ಉಡುಗೊರೆಯಾಗಿ ಪಡೆದಿದ್ದರು ಎನ್ನಲಾಗಿದೆ. ಜತೆಗೆ ಸುಕೇಶ್‌ ಚಂದ್ರಶೇಖರ್‌ ಮೋಸದ ದುಡ್ಡಿನಲ್ಲಿ ಈ ಉಡುಗೊರೆಗಳನ್ನು ಕೊಡುತ್ತಿರುವುದು ಗೊತ್ತಿದ್ದರೂ ನಟಿ ಉಡುಗೊರೆ ಸ್ವೀಕರಿಸಿದ್ದರು ಎಂಬುದೇ ಅವರ ಮೇಲಿರುವ ಗುರುತರ ಆರೋಪ. 

ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ಗೆ ಹೆಚ್ಚಿದ ಸಂಕಷ್ಟ; ನಟಿಯ ಸ್ಟೈಲಿಸ್ಟ್‌ನಿಂದ ಹೊಸ ಮಾಹಿತಿ ರಿವೀಲ್‌

ಇತ್ತೀಚಿಗಷ್ಟೆ ದೆಹಲಿಯ ಪಟಿಯಾಲಾ ಕೋರ್ಟ್‌ ಜಾಕ್ವೆಲಿನ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಮೂಲಕ ಕೊಂಚ ರಿಲೀಫ್ ಸಿಕ್ಕಿತ್ತು. ರೂ 50,000 ಭದ್ರತಾ ಬಾಂಡ್‌ ಪಡೆದು ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ವಂಚನೆ ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ ಚಂದ್ರಶೇಖರ್‌ ನ್ಯಾಯಾಂಗ ಬಂಧನದಲ್ಲೇ ಮುಂದುವರೆದಿದ್ದಾರೆ. ಸೆಪ್ಟಂಬರ್‌ನಲ್ಲಿ ಜಾಕ್ವೆಲಿನ್‌ ಫರ್ನಾಂಡೆಸ್‌ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಂಟು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ್ದರು. ಆಗಸ್ಟ್‌ 17ರಂದು ಸಲ್ಲಿಸಿದ್ದ ಹೆಚ್ಚುವರಿ ದೋಷಾರೋಪ ಪಟ್ಟಿಯಲ್ಲಿ ಜಾಕ್ವೆಲಿನ್‌ರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯ ಪರಿಗಣಿಸಿತ್ತು. ಅದಾದ ನಂತರ ನಟಿಯ ಸ್ಟೈಲಿಸ್ಟ್‌ರನ್ನು ಕೂಡ ವಿಚಾರಣೆಗೊಳಪಡಿಸಲಾಗಿತ್ತು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?