'ನನ್ನ ಮಗಳು ಸತ್ಯದ ಜೊತೆ', ಮಹಾರಾಷ್ಟ್ರ ಸರ್ಕಾರದ ನಡೆ ಖಂಡಿಸಿದ ಕಂಗನಾ ತಾಯಿ

Suvarna News   | Asianet News
Published : Sep 11, 2020, 02:55 PM ISTUpdated : Sep 11, 2020, 02:59 PM IST
'ನನ್ನ ಮಗಳು ಸತ್ಯದ ಜೊತೆ', ಮಹಾರಾಷ್ಟ್ರ ಸರ್ಕಾರದ ನಡೆ ಖಂಡಿಸಿದ ಕಂಗನಾ ತಾಯಿ

ಸಾರಾಂಶ

ನಟಿ ಕಂಗನಾ ರಣಾವತ್ ಜೊತೆ ಮಹಾರಾಷ್ಟ್ರ ಸರ್ಕಾರ ನಡೆದುಕೊಂಡ ರೀತಿಯನ್ನು ನಟಿಯ ತಾಯಿ ತೀವ್ರವಾಗಿ ಖಂಡಿಸಿದ್ದಾರೆ. ಏನ್ ಹೇಳಿದ್ದಾರೆ..? ಇಲ್ಲಿ ಓದಿ.

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ತಾಯಿ ಆಶಾ ರಣಾವತ್ ಪುತ್ರಿಯ ಬೆಂಬಲಕ್ಕೆ ಬಂದಿದ್ದಾರೆ. ಬಿಎಂಸಿ ನಟಿಯ ಮುಂಬೈ ಬಂಗಲೆಯಲ್ಲಿ ಅಕ್ರಮ ಕಟ್ಟಡ ಎಂದು ಕೆಲವು ಭಾಗಗಳನ್ನು ಗುರುತಿಸಿ ಕೆಡವಿದ ನಂತರ ಬಿಎಂಸಿ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಮಹಾರಾಷ್ಟ್ರ ಸರ್ಕಾರ ಏನು ಮಾಡಿದೆಯೋ, ಅದು ಖಂಡನಾರ್ಹ. ನಾನು ಆ ಆಕ್ಷೇಪಾರ್ಹ ಪದಬಳಕೆಯನ್ನು ವಿರೋಧಿಸುತ್ತೇನೆ. ಭಾರತ ನನ್ನ ಮಗಳೊಂದಿಗಿದೆ, ಜನರ ಆಶಿರ್ವಾದ ಆಕೆ ಮೇಲಿದೆ. ನನಗೆ ಅವಳ ಬಗ್ಗೆ ಹೆಮ್ಮೆ ಇದೆ. ಅವಳೂ ಯಾವಾಗಲೂ ಸತ್ಯದ ಜೊತೆ ನಿಂತಿದ್ದಾಳೆ, ಇನ್ನೂ ಇರುತ್ತಾಳೆ ಎಂದಿದ್ದಾರೆ.

ಕಂಗನಾಳನ್ನು ಭಗತ್ ಸಿಂಗ್‌ಗೆ ಹೋಲಿಸಿ Hats Off ಎಂದು ಕೆಜಿಎಫ್‌ ವಿತರಕ

ಇತ್ತೀಚೆಗಷ್ಟೇ ನಟಿಗೆ ವೈ+ ಭದ್ರತೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ನಟಿಯ ತಾಯಿ, ಮಗಳಿಗೆ ಭದ್ರತೆ ಒದಗಿಸಿದ್ದಕ್ಕಾಗಿ ಅಮಿತ್ ಶಾ ಅವರಿಗೆ ಧನ್ಯವಾದ. ಆಕೆಗೆ ಭದ್ರತೆ ನೀಡಿರದಿದ್ದರೆ ಏನಾಗುತ್ತಿತ್ತು ಎಂದು ಊಹಿಸಬಹುದು ಎಂದಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

3 idiots 2 : ಬಾಕ್ಸ್ ಆಫೀಸ್ ನಲ್ಲಿ ಸುನಾಮಿ, ಬರ್ತಿದೆ 3 ಈಡಿಯಟ್ಸ್ ಸೀಕ್ವೆಲ್
ಚಿರಂಜೀವಿ ನಂತರ ಜೂ.ಎನ್‌ಟಿಆರ್ ಟಾರ್ಗೆಟ್? ಸಂಚಲನ ಮೂಡಿಸಿದ ನಿರ್ಧಾರ, ಇನ್ಮುಂದೆ ಹೀಗೆ ಮಾಡಿದ್ರೆ ಕಷ್ಟ!