ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ, ಡೆತ್‌ನೋಟ್‌ ಪತ್ತೆ!

Published : Sep 30, 2021, 01:59 PM ISTUpdated : Sep 30, 2021, 03:39 PM IST
ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ, ಡೆತ್‌ನೋಟ್‌ ಪತ್ತೆ!

ಸಾರಾಂಶ

* ನೇಣು ಬಿಗಿದುಕೊಂಡು ನಟಿ ಸೌಜನ್ಯ ಆತ್ಮಹತ್ಯೆ * ಬೆಂಗಳೂರಿನ ಕುಂಬಳಗೋಡಿನಲ್ಲಿ ಘಟನೆ * ಸೌಜನ್ಯ ಪಿಎಗೆ ಬೆಳಗ್ಗೆ ತಿಂಡಿ ತರಲು ಹೇಳಿ ಆತ್ಮಹತ್ಯೆ * ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ನಟಿ ಸೌಜನ್ಯ

ಬೆಂಗಲೂರು(ಸೆ.30): ಕನ್ನಡದ ಕಿರುತೆರೆ(Kannada Tv Actress) ನಟಿ ಸೌಜನ್ಯ(Soujanya) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಕುಂಬಳಗೋಡುವಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ ನೇಣಿಗೆ ಶರಣಾಗಿದ್ದಾರೆ. 

"

ಮೂಲತಃ ಕೊಡಗು(Kodagu) ಜಿಲ್ಲೆಯ ಕುಶಾಲನಗರದವರಾಗಿರುವ ಉದಯೋನ್ಮುಖ ನಟಿ ಸೌಜನ್ಯ ಅನೇಕ ಧಾರವಾಹಿಗಳಲ್ಲಿ ನಟಿಸಿದ್ದರು. ಅಲ್ಲದೇ ಚೌಕಟ್ಟು, ಫನ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ಸಾವಿಗೂ ಮೊದಲು ಡೆತ್​ನೋಟ್(Suicide Note) ಬರೆದಿರುವ ಸೌಜನ್ಯ 'ನನ್ನ ಸಾವಿಗೆ ಯಾರೂ ಕಾರಣರಲ್ಲ. ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನಾನು ಸಾವಿನ ಮನೆಗೆ ಹೋಗುತ್ತಿದ್ದೇನೆ. ಕ್ಷಮಿಸಿ ಎಂದು ಸ್ನೇಹಿತರು ಮತ್ತು ಸಹೋದರರ ಹೆಸರನ್ನೂ ಬರೆದಿದ್ದಾರೆ. ಇಂಗ್ಲಿಷ್​ನಲ್ಲಿ ಬರೆದಿರುವ ಡೆತ್​ನೋಟ್​ 4 ಪುಟ ಇದೆ. ಸೌಜನ್ಯರವರು ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ.

ಇನ್ನು ಆತ್ಮಹತ್ಯೆಗೂ ಮುನ್ನ ಸೌಜನ್ಯ ತನ್ನ ಪಿಎಯನ್ನು ತಿಂಡಿ ತರಲು ಕಳುಹಿಸಿದ್ದರು. ಆತ ಹೊರಗೆ ತೆರಳುತ್ತಿದ್ದಂತೆಯೇ ನಟಿ ನೇಣಿಗೆ ಶರಣಾಗಿದ್ದಾರೆ. 

ಮೂರು ದಿನದ ಹಿಂದೆ ಡೆತ್‌ನೋಟ್‌

ಇನ್ನು ನಟಿ ಮೂರು ದಿನಗಳ ಹಿಂದೆಯೇ ಸೆಪ್ಟೆಂರ್‌ 27ರಂದು ಡೆತ್ ನೋಟ್ ಬರೆದಿಟ್ಟಿದ್ದರು. ಇನ್ನು ಇದರಲ್ಲಿ ಅವರು ತಮ್ಮ ಮಾನಸಿಕ ಆರೋಗ್ಯ ಚೆನ್ನಾಗಿಲ್ಲ ಎಂಬುವುದನ್ನು ಉಲ್ಲೇಖಿಸಿದ್ದಾರೆ. 

ಸ್ಥಳಕ್ಕೆ ಹಿರಿಯ ಪೋಲೀಸ್ ಆಧಿಕಾರಿಗಳು ಭೇಟಿ ನೀಡಿ‌‌ ಪರಿಶೀಲನೆ ನಡೆಸಿದ್ದು, ಕುಂಬಳಗೋಡು ಪೋಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದವರು: ನಟ ಶಿವಣ್ಣ ಹೇಳಿದ್ದೇನು?