
ಸುಮಾರು 22 ವರ್ಷಗಳ ಕಾಲ ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಬ್ಯುಸಿಯಾಗಿದ್ದ ನಟ ರಮೇಶ್ ವಾಲಿಯಸಾಲ ನಿಧನರಾಗಿದ್ದಾರೆ. ತಿರುವನಂತಪುರಂ ನಿವಾಸಿಯಾಗಿರುವ ರಮೇಶ್ ದೇಹ ಇಂದು ಮನೆಯ ಸೀಲಿಂಗ್ಗೆ ನೇಣು ಬಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಅಸಹಜ ಸಾವು ಎಂದು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಬಣ್ಣದ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿದ್ದ ರಮೇಶ್ ಅವರಿಗೆ 54 ವರ್ಷ. ಕೊರೋನಾ ಪ್ಯಾಂಡಮಿಕ್ ಸಮಯದಲ್ಲಿ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆದರೆ ಎರಡು ದಿನಗಳ ಹಿಂದೆಯಷ್ಟೇ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಆದರೆ ಪೊಲೀಸರು ಅಸಹಜ ಸಾವಿನ ಬಗ್ಗೆ ಈಗಾಗಲೇ ತನಿಖೆ ಆರಂಭಿಸಿದ್ದಾರೆ. ರಮೇಶ್ ಸಾವಿನ ಸುದ್ದಿ ಕೇಳಿ ಇಡೀ ಮಾಲಿವುಡ್ ಚಿತ್ರರಂಗ ಶಾಕ್ ಆಗಿದೆ. ನಟನ ಸಾವಿನ ಹಿಂದೆ ಏನೋ ರಹಸ್ಯವಿದೆ ಎಂದು ಎಲ್ಲೆಡೆ ಹೇಳಲಾಗುತ್ತಿದೆ.
ರಮೇಶ್ ಅವರ ಮೃತದೇಹವನ್ನು ಪತ್ನಿ ಮೊದಲು ನೋಡಿದ್ದು, ಕೂಡಲೇ morgue ಮೆಡಿಕಲ್ ಕಾಲೇಜ್ಗೆ ಶಿಫ್ಟ್ ಮಾಡಿದ್ದಾರೆ. ಹಲವು ವರ್ಷಗಳಿಂದ ತಮ್ಮ ಎರಡನೇ ಪತ್ನಿ ಹಾಗೂ ಪುತ್ರನೊಟ್ಟಿಗೆ ಇವರು ವಾಸವಿದ್ದರಂತೆ.
'ಜೀವನದಲ್ಲಿ ಬಹಳಷ್ಟು ಸಮಸ್ಯೆಗಳಿರುತ್ತದೆ ಆದರೆ ಅದರಿಂದ ತಪ್ಪಿಸಿಕೊಂಡು ಓಡಿ ಹೋಗುವುದರಲ್ಲಿ ಅರ್ಥವಿಲ್ಲ. ನನ್ನ ಆತ್ಮೀಯ ಗೆಳೆಯ ರಮೇಶ್ಗೆ ಶ್ರದ್ಧಾಂಜಲಿಗಳು' ಎಂದು ನಿರ್ಮಾಪಕ ಬಾದುಷಾ ಬರೆದುಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.