ಶುರುವಾಯ್ತು ಹಾಸ್ಯ ನಟನ ಆರ್ಭಟ; 2021ಕ್ಕೆ ನಾನೇ ಸಿಎಂ ಎಂದ ವಡಿವೇಲು!

Suvarna News   | Asianet News
Published : Mar 15, 2020, 10:51 AM IST
ಶುರುವಾಯ್ತು ಹಾಸ್ಯ ನಟನ ಆರ್ಭಟ; 2021ಕ್ಕೆ ನಾನೇ ಸಿಎಂ ಎಂದ ವಡಿವೇಲು!

ಸಾರಾಂಶ

ಕಾಮಿಡಿ ಕಿಂಗ್ ವಡಿವೇಲು 2021ರ ಚುನಾವಣೆಯಲ್ಲಿ ಸ್ಪರ್ಧಿಸಿ ಮುಖ್ಯಮಂತ್ರಿ ಆಗಬೇಕೆಂದು ಮಾಧ್ಯಮಗಳ ಎದುರು ಅಭಿಲಾಷೆ ವ್ಯಕ್ತ ಪಡಿಸಿದ್ದಾರೆ.....

ಕಾಲಿವುಡ್ ಜನಪ್ರಿಯ ಹಾಸ್ಯನಟ ವಡಿವೇಲು ಇತ್ತೀಚಿಗೆ ತೂತ್ತುಕುಡಿ ಜಿಲ್ಲೆಯ ತಿರುಚೊಂದೂರು ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭೀಟಿ ನೀಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

'ಜಗತ್ತಿನ ಶಾಂತಿಗಾಗಿ ನಾನು ದೇವರ ದರ್ಶನಕ್ಕೆ ಬಂದಿರುವೆ' ಎಂದು ಹೇಳುತ್ತಾ ಮಾತನ್ನು ಶುರು ಮಾಡಿದ್ದಾರೆ. ಪತ್ರಕರ್ತರೊಬ್ಬರು ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಪ್ರಶ್ನಿಸಿದಾಗ 'ರಜನಿಕಾಂತ್ ರಾಜಕೀಯಕ್ಕೆ ಯಾವಾಗ ಬರುತ್ತಾರೆ ಎಂದು ನನಗೂ ಗೊತ್ತಿಲ್ಲ, ನಿಮಗೂ ಗೊತ್ತಿಲ್ಲ ಅಷ್ಟೇ ಯಾಕೆ ಸ್ವತಃ ರಜಿನಿಕಾಂತ್‌ ಅವರಿಗೂ ಗೊತ್ತಿಲ್ಲ' ಎಂದು ಹಾಸ್ಯ ಮಾಡುತ್ತಾ ಹೇಳುತ್ತಾರೆ. 

ಮುಸ್ಲಿಮರಿಗೆ ತೊಂದರೆಯಾಗಲು ಬಿಡಲ್ಲ: ರಜನಿ ಭರವಸೆ

ರಜಿನಿಕಾಂತ್ ಸಿದ್ಧಾಂತ ಪಾಲಿಸುವ ವಡಿವೇಲು 2021ರ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುತ್ತಿದ್ದಾರೆ. 'ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ನೀವು ನನಗೆ ಓಟ್‌ ಹಾಕುತ್ತೀರಾ?' ಎಂದು ಪ್ರತಕರ್ತರನ್ನು ಪ್ರಶ್ನಿದಾಗ ಅವರು ನಿಮಗೆ ಓಟ್‌ ಮಾಡುತ್ತೇವೆ ಎಂದು ಉತ್ತರಿಸಿದ್ದಾರೆ ಅದಕ್ಕೆ ವಡಿವೇಲು 'ಹಾಗಾದರೇ ಖಂಡಿತ 2021ರಲ್ಲಿ ತಮಿಳುನಾಡಿದ ಮುಖ್ಯಮಂತ್ರಿ  ನಾನೇ  ಆಗುತ್ತೇನೆ '  ಎಂದಿದ್ದಾರೆ.

ರಜನಿಕಾಂತ್‌ ಮನೆ ಬಾಗಿಲಿಗೆ ವಿತರಕರು; ಬಾಕ್ಸಾಫೀಸ್‌ನಲ್ಲಿ ಗಳಿಸಿದ ಹಣ ರಜನಿ ಸಂಭಾವನೆಗಿಂತಲೂ ಕಡಿಮೆ!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?
ಸಾವಿರ ಕೋಟಿ ಕುಬೇರ 'ಮಹಾಪುರುಷ'ನಿಗೆ ಡಿವೋರ್ಸ್ ಕೊಡ್ತಾರಾ ಈ ನಟಿ? ಇದೆಂಥ ಶಾಕಿಂಗ್ ಮ್ಯಾಟರ್!