
ಮುಂಬೈ(ಮೇ.02): ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ಕೋವಿಡ್ -19 ಪರಿಹಾರ ಕಾರ್ಯಗಳಿಗಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 7 ಲಕ್ಷ ರೂಪಾಯಿ ನೀಡಿದ್ದಾರೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗೇಶ್ಕರ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿ, ಭಾರತ್ ರತ್ನ ಲತಾ ಮಂಗೇಶ್ಕರ್ ಅವರಿಂದ 7 ಲಕ್ಷ ರೂ. ದೇಣಿಗೆ ನೀಡಿದ್ದನ್ನು ನಾವು ಕೃತಜ್ಞತೆಯಿಂದ ಸ್ವೀಕರಿಸುತ್ತೇವೆ. ಕೋವಿಡ್ -19 ವಿರುದ್ಧದ ನಮ್ಮ ಹೋರಾಟಕ್ಕೆ ಈ ಮೊತ್ತವನ್ನು ಬಳಸಲಾಗುತ್ತದೆ ಎಂದಿದ್ದಾರೆ.
ಆಕ್ಸಿಜನ್ ಕಾನ್ಸನ್ಟ್ರೇಟರ್ಗಾಗಿ ಬೈಕ್ ಮಾರ್ತಿದ್ದಾರೆ ನಟ ಹರ್ಷವರ್ಧನ್
ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಕೊಡುಗೆ ನೀಡಲು ಬಯಸುವ ಎಲ್ಲರಿಗೂ ರಾಜ್ಯವು ಸಿಎಂ ರಿಲೀಫ್ ಫಂಡ್ ಅನ್ನು ಸ್ಥಾಪಿಸಿದೆ. ನಿಧಿಗೆ ಕೊಡುಗೆ ನೀಡುವ ಮೂಲಕ ಜನರು ಮುಂದೆ ಬರಬೇಕೆಂದು ಸಿಎಂ ಒತ್ತಾಯಿಸಿದ್ದಾರೆ.
2021-22ನೇ ಸಾಲಿನ ರಾಜ್ಯ ವಿಪತ್ತು ನಿರ್ವಹಣಾ ನಿಧಿಯ (ಎಸ್ಡಿಆರ್ಎಫ್) ಕೇಂದ್ರದ ಪಾಲಿನ ಮೊದಲ ಕಂತನ್ನು ಕೇಂದ್ರ ಈಗಾಗಲೇ ಬಿಡುಗಡೆ ಮಾಡಿದೆ. 2021-22ನೇ ಸಾಲಿನ ಸಾಮಾನ್ಯ ವೇಳಾಪಟ್ಟಿಗಿಂತ ಮುಂಚಿತವಾಗಿ ಕೇಂದ್ರವು ಶನಿವಾರ ಈ ಫಂಡ್ ಬಿಡುಗಡೆ ಮಾಡಿದ್ದು ಇದರ ಶೇ.50ರಷ್ಟು ಮೊತ್ತವನ್ನು ಕೊರೋನಾ ಪರಿಹಾರ ಕಾರ್ಯಕ್ಕೆ ಬಳಸಲು ಸೂಚಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.