ಬಚ್ಚನ್ ದಂಪತಿಗೆ ಭದ್ರತೆ ನೀಡಿದ ಮಹಾರಾಷ್ಟ್ರ ಸರ್ಕಾರ..!

Suvarna News   | Asianet News
Published : Sep 16, 2020, 05:55 PM ISTUpdated : Sep 16, 2020, 06:00 PM IST
ಬಚ್ಚನ್ ದಂಪತಿಗೆ ಭದ್ರತೆ ನೀಡಿದ ಮಹಾರಾಷ್ಟ್ರ ಸರ್ಕಾರ..!

ಸಾರಾಂಶ

ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಹಾಗೂ ಆರಾಧ್ಯ ಬಚ್ಚನ್ ವಾಸಿಸುವ 2 ಬಂಗಲೆಗೆ ಸರ್ಕಾರ ಭದ್ರತೆಯನ್ನು ಒದಗಿಸಿದೆ.

ಮಹಾರಾಷ್ಟ್ರ ಸರ್ಕಾರ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಹಾಗೂ ಅವರ ಪತ್ನಿ ನಟಿ, ಸಂಸದೆ ಜಯಾ ಬಚ್ಚನ್‌ಗೆ ಭದ್ರತೆ ನೀಡಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಬೆದರಿಕೆ ಬಂದುದರಿಂದ ಸೆಲೆಬ್ರಿಟಿ ಕಪಲ್‌ಗೆ ಸರ್ಕಾರ ಪಾರಾಮೀಟರ್ ಭದ್ರತೆ ನೀಡಿದೆ.

ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಹಾಗೂ ಆರಾಧ್ಯ ಬಚ್ಚನ್ ವಾಸಿಸುವ 2 ಬಂಗಲೆಗಳಿಗೆ ಸರ್ಕಾರ ಭದ್ರತೆಯನ್ನು ಒದಗಿಸಿದೆ.

ಡ್ರಗ್ಸ್ ಮಾಫೀಯಾ: ಬಾಲಿವುಡ್ ಪರ ನಿಂತ ಜಯಾ ಬಚ್ಚನ್..! ಬಿಗ್‌ಬಿಗೆ ಟ್ರೋಲಿಗರ ಟೀಕೆ

ಸಂಸತ್ತಿನಲ್ಲಿ ಮುಂಗಾರು ಅಧಿವೇಶನದಲ್ಲಿ ಬಾಲಿವುಡ್ ಡ್ರಗ್ಸ್ ಆರೋಪಗಳ ವಿರುದ್ಧ ಜಯಾ ಬಚ್ಚನ್ ಮಾತನಾಡಿದ ಬೆನ್ನಲ್ಲೇ ಸೆಲೆಬ್ರಟಿಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಬರಲಾರಂಭಿಸಿದೆ.

ಕುಟುಂಬದ ಸುರಕ್ಷತೆ ದೃಷ್ಟಿಯಿಂದ ಅವರ ಮನೆಯ ಸುತ್ತ ಭದ್ರತೆ ಹೆಚ್ಚಿಸಲಾಗಿದೆ. ಯಾವುದೇ ವಿಶೇಷ ಭದ್ರತೆ ನೀಡಲಾಗಿಲ್ಲ ಎಂದಿದ್ದಾರೆ. ಜುಹುವಿನಲ್ಲಿರುವ ಇವರ ಬಂಗಲೆ ಜಲ್ಸಾಗೆ ಮುಂಬೈ ಪೊಲೀಸರು ಹೆಚ್ಚಿನ ಭದ್ರತೆ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಬಂದ ಬೆದರಿಕೆ ಸಂದೇಶಗಳ ಬಗ್ಗೆ ಸೈಬರ್ ಸೆಲಗ ತನಿಖೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?