ಶೂಟಿಂಗ್ ವೇಳೆ ಅವಘಡ: ಮಲಯಾಳಂ ನಟ ಪೃಥ್ವಿರಾಜ್ ಆಸ್ಪತ್ರೆಗೆ ದಾಖಲು, ಇಂದು ಸರ್ಜರಿ

Published : Jun 26, 2023, 10:51 AM ISTUpdated : Jun 26, 2023, 10:55 AM IST
ಶೂಟಿಂಗ್ ವೇಳೆ ಅವಘಡ: ಮಲಯಾಳಂ ನಟ ಪೃಥ್ವಿರಾಜ್ ಆಸ್ಪತ್ರೆಗೆ ದಾಖಲು, ಇಂದು ಸರ್ಜರಿ

ಸಾರಾಂಶ

ಶೂಟಿಂಗ್ ವೇಳೆ ಅವಘಡ: ಮಲಯಾಳಂ ನಟ ಪೃಥ್ವಿರಾಜ್ ಕಾಲಿಗೆ ಏಟು ಬಿದ್ದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸರ್ಜರಿಗೆ ಒಳಗಾಗಿದ್ದಾರೆ.  

ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಪೃಥ್ವಿರಾಜ್ ಬಹುನಿರೀಕ್ಷೆಯ ವಿಲಾಯತ್ ಬುದ್ಧ ಎನ್ನುವ ಮಲಯಾಳಂ ಸಿನಿಮಾದ ಚಿತ್ರೀಕರಣದಲ್ಲಿದ್ದ ನಿರತಾಗಿದ್ದರು. ಆಕ್ಷನ್ ದೃಶ್ಯ ಚಿತ್ರೀಕರಣ ವೇಳೆ ಕಾಲಿಗೆ ಬಲವಾದ ಏಟು ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸಮೀಪದಲ್ಲಿದ್ದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಿನ್ನೆ (ಜೂನ್ 25) ಭಾನುವಾರ ಅವಘಡ ಸಂಭವಿಸಿದೆ. ಇಂದು (ಜೂನ್ 26) ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ವರದಿಗಳು ಸೂಚಿಸಿವೆ. ಶಸ್ತ್ರಿ ಚಿಕಿತ್ಸೆಯ ನಂತರ ಕೆಲವು ವಾರುಗಳು ಪೃಥ್ವಿರಾಜ್ ಸಂಪೂರ್ಣ ವಿಶ್ರಾಂತಿ ಪಡೆಯಲಿದ್ದು ಚಿತ್ರೀಕರಣಕ್ಕೆ ಬ್ರೇಕ್ ಬೀಳಲಿದೆ. 

ಪೃಥ್ವಿರಾಜ್ ಸುಕುಮಾರನ್ ಕೊನೆಯದಾಗಿ ಕಾಪ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ರು. ಶಾಜಿ ಕೈಲಾಸ್ ನಿರ್ದೇಶನದಲ್ಲಿ ಆ ಸಿನಿಮಾ ಮೂಡಿ ಬಂದಿತ್ತು. ವಿಭಿನ್ನ ಪಾತ್ರಗಳ ಮೂಲಕ ಅಭಿಮಾನಿಗಳ ಮುಂದೆ ಬರ್ತಿರುವ ನಟ ಪೃಥ್ವಿರಾಜ್ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಸದ್ಯ ವಿಲಾಯತ್ ಬುದ್ಧ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಕೊಚ್ಚಿಯ ಮರಯೂರಿನಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಹೈ ವೋಲ್ಟೇಜ್ ಆಕ್ಷನ್ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಆಗ ಈ ಅಪಘಾತ ಸಂಭವಿಸಿದೆ. ಸದ್ಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ಬಳಿಕ ಸಂಪೂರ್ಣ ಗುಣಮುಖರಾದ ಬಳಿಕ ಮತ್ತೆ ಶೂಟಿಂಗ್‌ಗೆ  ಮರಳಿದ್ದಾರೆ.

ನಟ ಪೃಥ್ವಿರಾಜ್ ಜೊತೆ ಲಿಪ್‌ಲಾಕ್ ದೃಶ್ಯ ವೈರಲ್; ಮೌನ ಮುರಿದ 'ಹೆಬ್ಬುಲಿ' ನಟಿ ಅಮಲಾ ಪೌಲ್

ಪೃಥ್ವಿರಾಜ್ ಕನ್ನಡ ನಿರ್ದೇಶಕ, ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಲಾರ್ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಪೃಥ್ವಿರಾಜ್ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಪ್ರಭಾಸ್ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಪೃಥ್ವಿರಾಜ್ ಪಾತ್ರ ಕೂಡ ಗಮನಾರ್ಹವಾಗಿದೆ. ಇಡೀ ದೇಶವೇ ಸಲಾರ್ ಸಿನಿಮಾಗಾಗಿ ಎದುರು ನೋಡುತ್ತಿದೆ. ಬಹಿನೀರಕ್ಷೆಯ ಸಿನಿಮಾ ಸೆಪ್ಟಂಬರ್ 28ಕ್ಕೆ ವಿಶ್ವದಾದ್ಯಂತ ತೆರೆಗೆ ಬರುತ್ತಿದೆ. ಇದಲ್ಲದೆ ಇನ್ನು ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ವಿಲಾಯತ್ ಬುದ್ಧ ಚಿತ್ರವನ್ನು ಜಯನ್ ನಂಬಿಯಾರ್ ನಿರ್ದೇಶಿಸುತ್ತಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಾಜ್ ನಿಧಿಮೋರುಗಾಗಿ ಧರ್ಮ ಬದಲಾಯಿದ್ರಾ ಸಮಂತಾ? ಮದುವೆಯ ರಹಸ್ಯ ರಿವೀಲ್!
ಧುರಂಧಾರ್ ಚಿತ್ರೀಕರಣ ಪಾಕಿಸ್ತಾನದಲ್ಲಿ ಆಗಿತ್ತಾ? ಸಿನಿಮಾದಲ್ಲಿನ ದೃಶ್ಯಗಳ ರಹಸ್ಯ ಬಯಲು ಮಾಡಿದ ನಟ!