ಇಸ್ರೇಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ತಲುಪಿದ ಬಾಲಿವುಡ್ ನಟಿ ನುಶ್ರತ್‌ ಭರುಚಾ

Published : Oct 08, 2023, 11:39 AM ISTUpdated : Oct 08, 2023, 04:00 PM IST
 ಇಸ್ರೇಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ತಲುಪಿದ ಬಾಲಿವುಡ್ ನಟಿ ನುಶ್ರತ್‌ ಭರುಚಾ

ಸಾರಾಂಶ

ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರ ಗುಂಪು ಸಾವಿರಾರು ರಾಕೆಟ್‌ಗಳ ಸುರಿಮಳೆ ಸುರಿಸಿ, ದಿಢೀರ್‌ ಯುದ್ಧ ಸಾರಿದೆ. ಇಸ್ರೇಲ್‌–ಪ್ಯಾಲೆಸ್ತೇನ್‌ ಅಕ್ಷರಶಃ ಯುದ್ಧ ಭೂಮಿಯಾಗಿದೆ. ಇಸ್ರೇಲ್‌ಗೆ ತೆರಳಿದ್ದ ಬಾಲಿವುಡ್‌ ನಟಿಯೊಬ್ಬರ ಸಂಪರ್ಕ ಕಡಿತಗೊಂಡಿತ್ತು. ಸದ್ಯ ಅವರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವೆ ಸಂಘರ್ಷ ಏರ್ಪಟ್ಟಿದೆ. ಪ್ಯಾಲೆಸ್ತೀನಿ ಉಗ್ರರು ಶನಿವಾರ 5000ಕ್ಕೂ ಹೆಚ್ಚು ರಾಕೆಟ್‌ಗಳನ್ನು ಹಾರಿಸಿ, ಇಸ್ರೇಲ್‌ಗೆ ಪ್ರವೇಶಿಸುವುದರೊಂದಿಗೆ ಎರಡೂ ದೇಶಗಳ ನಡುವಣ ಸಂಘರ್ಷ ಮತ್ತೊಮ್ಮೆ ತಾರಕಕ್ಕೇರುವಂತಾಗಿದೆ. ಪರಸ್ಪರ ದಾಳಿಯಲ್ಲಿ ಅಪಾರ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಿಕ್ಕ ಸಿಕ್ಕವರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇದೆಲ್ಲದರ ಮಧ್ಯೆ ಇಸ್ರೇಲ್‌ಗೆ ತೆರಳಿದ್ದ ಬಾಲಿವುಡ್‌ ನಟಿಯೊಬ್ಬರ ಸಂಪರ್ಕ ಕಡಿತಗೊಂಡಿತ್ತು. ಸದ್ಯ ಅವರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಹೈಫಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ಇಸ್ರೇಲ್‌ಗೆ ತೆರಳಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚ ಅವರು ಇಸ್ರೇಲ್‌ನಲ್ಲಿ  ಸಿಲುಕಿಕೊಂಡಿದ್ದರು. 'ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ನುಶ್ರತ್‌, ಇಸ್ರೇಲ್‌ಗೆ ತೆರಳಿದ್ದರು. ದುರದೃಷ್ಟವಶಾತ್ ಅಲ್ಲಿ ಸಿಲುಕಿಕೊಂಡಿದ್ದಾರೆ. ಇವತ್ತು ಕೊನೆಯ ಬಾರಿ ಮಾತನಾಡಿದ್ದೆವು. ನಾವು ಕರೆ ಮಾಡಿದ್ದ ವೇಳೆ ಅವರು ಸುರಕ್ಷಿತ ಸ್ಥಳದಲ್ಲಿದ್ದರು. ಆ ಬಳಿಕ ಸಂಪರ್ಕ ಸಾಧ್ಯವಾಗಿಲ್ಲ. ನಾವು ನುಶ್ರತ್‌ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ. ಯಾವುದೇ ಅಪಾಯಕ್ಕೆ ಸಿಲುಕದೆ ಅವರು ಹಿಂತಿರುಗುತ್ತಾರೆ ಎಂದು ಭಾವಿಸುತ್ತೇವೆ' ಎಂದು ನಟಿಯ ತಂಡದ ಸದಸ್ಯರು ಹೇಳಿದ್ದರು.

ಇಸ್ರೇಲ್ - ಪ್ಯಾಲೆಸ್ತೀನ್‌ ಯುದ್ಧಕ್ಕೆ 500ಕ್ಕೂ ಹೆಚ್ಚು ಜನ ಮಾರಣಹೋಮ: ಎಲ್ಲೆಲ್ಲೂ ಬೆಂಕಿಯ ಜ್ವಾಲೆ, ನಾಗರಿಕರ ಸ್ಥಿತಿ ಅಯೋಮಯ!

ಸುರಕ್ಷಿತವಾಗಿ ವಿಮಾನ ನಿಲ್ದಾಣ ತಲುಪಿದ ಬಾಲಿವುಡ್ ನಟಿ
ನಟಿಯ ತಂಡ ನೀಡಿರುವ ಇತ್ತೀಚಿನ ಅಪ್‌ಡೇಟ್‌ನ ಪ್ರಕಾರ, ನಟಿ ಸುರಕ್ಷಿತವಾಗಿ ಭಾರತಕ್ಕೆ ತಲುಪಿದ್ದಾರೆ. ನುಶ್ರತ್ ಬರೂಚಾ ತಾಯಿ, 'ಮಗಳು ವಾಪಸ್ ಬರುತ್ತಿದ್ದು, ಸುರಕ್ಷಿತವಾಗಿದ್ದಾರೆ' ಎಂದು ತಿಳಿಸಿದ್ದಾರೆ. 

ನಟಿಯ ತಂಡ ಈ ಬಗ್ಗೆ ಮಾತನಾಡಿ, 'ನಾವು ಅಂತಿಮವಾಗಿ ನುಶ್ರತ್ ಅವರನ್ನು ಸಂಪರ್ಕಿಸಲು ಯಶಸ್ವಿಯಾಗಿದ್ದೇವೆ. ಭಾರತೀಯ ರಾಯಭಾರ ಕಚೇರಿಯ ಸಹಾಯದಿಂದ ಅವಳನ್ನು ಸುರಕ್ಷಿತವಾಗಿ ಮನೆಗೆ ಕರೆತರಲಾಗುತ್ತಿದೆ. ನೇರ ವಿಮಾನ ಸಿಗದ ಕಾರಣ ನಟಿ ಸಂಪರ್ಕ ವಿಮಾನದ ಮೂಲಕ ಬರುತ್ತಿದ್ದಾರೆ. ಆಕೆಯ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದಿಲ್ಲ ಆದರೆ ಅವರು ಭಾರತಕ್ಕೆ ಬಂದ ತಕ್ಷಣ, ನಾವು ನಿಮಗೆ ತಿಳಿಸುತ್ತೇವೆ' ಎಂದಿದ್ದರು.

38 ವರ್ಷದ ನಟಿ ಪ್ರಣಯ್ ಮೆಶ್ರಾಮ್ ನಿರ್ದೇಶನದ ಥ್ರಿಲ್ಲರ್ ಮೂವಿ 'ಅಕೇಲಿ'ಯಲ್ಲಿ ಕೊನೆಯದಾಗಿ ಕಾಣಿಸಿಕೊಂಡರು. ಚಿತ್ರದಲ್ಲಿ, ಅವರು ಸಾಮಾನ್ಯ ಭಾರತೀಯ ಹುಡುಗಿಯ ಪಾತ್ರವನ್ನು ನಿರ್ವಹಿಸಿದ್ದಾರೆ. ಇದರಲ್ಲಿ ಅವರು ಯುದ್ಧ ವಲಯದಲ್ಲಿ ಸಿಕ್ಕಿಹಾಕಿಕೊಂಡು ಸುರಕ್ಷಿತವಾಗಿ ಹೊರಬರಲು ಹೆಣಗಾಡುವ ಪಾತ್ರ ಮಾಡಿದ್ದಾರೆ.

ಭಾರಿ ಪೂರ್ವ ತಯಾರಿಯೊಂದಿಗೆ ಇಸ್ರೇಲ್ ಮೇಲೆ ಮುಗಿಬಿದ್ದಿದ್ದ ಹಮಾಸ್ ಉಗ್ರರು

 ಹಮಾಸ್‌ ಬಂಡುಕೋರರು 5,000ಕ್ಕೂ ಅಧಿಕ ರಾಕೆಟ್‌ ದಾಳಿಯನ್ನು ಇಸ್ರೇಲ್‌ ಮೇಲೆ ನಡೆಸಿದ ಪರಿಣಾಮ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್‌ ಕೂಡ ಪ್ಯಾಲೆಸ್ತೇನ್‌ ಮೇಲೆ ದಾಳಿ ನಡೆಸಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಾಜ್ ನಿಧಿಮೋರುಗಾಗಿ ಧರ್ಮ ಬದಲಾಯಿದ್ರಾ ಸಮಂತಾ? ಮದುವೆಯ ರಹಸ್ಯ ರಿವೀಲ್!
ಧುರಂಧಾರ್ ಚಿತ್ರೀಕರಣ ಪಾಕಿಸ್ತಾನದಲ್ಲಿ ಆಗಿತ್ತಾ? ಸಿನಿಮಾದಲ್ಲಿನ ದೃಶ್ಯಗಳ ರಹಸ್ಯ ಬಯಲು ಮಾಡಿದ ನಟ!