
ಮುಂಬೈ (ಜೂ. 15) ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಶವದ ಫೋಟೋ ಯಾವುದೇ ಕಾರಣಕ್ಕೂ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಬಾರದು. ಹಂಚಿಕೊಂಡಿದ್ದು ಕಂಡುಬಂದರೆ ಕ್ರಮ ಜರುಗಿಸಲಾಗುತ್ತದೆ ಎಂದು ಮುಂಬೈ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮುಂಬೈನ ಬಾಂದ್ರಾದಲ್ಲಿರುವ ತನ್ನದೇ ನಿವಾಸದಲ್ಲಿ ನಟ ಸುಶಾಂತ್ ಸಿಂಗ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಸುಶಾಂತ್ ಶವವನ್ನು ಕೆಳಗೆ ಇಳಿಸಿದ್ದ ಸಂದರ್ಭ ತೆಗೆಯಲಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇದೆ.
ಸುಶಾಂತ್ ಸಿಂಗ್ ರಜಪೂತ ಮಾಜಿ ಗೆಳತಿ ಆಡಿದ ಮಾತುಗಳಿವು
ಪೋಟೋ ಹಂಚಿಕೊಳ್ಳಿವುದು ಸೈಬರ್ ಅಪರಾಧವಾಗುತ್ತದೆ. ಈಗಾಗಲೇ ಪೋಟೋ ವೈರಲ್ ಆಗಿದ್ದು ಶೇರ್ ಮಾಡಿದವರು ಡಿಲೀಟ್ ಮಾಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿಯೂ ಮುಗಿದಿದ್ದು, ಇದರಲ್ಲೂ ಆತ್ಮಹತ್ಯೆ ಎಂದು ಖಚಿತವಾಗಿದೆ. ಆದರೆ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಅವರನ್ನು ಕೊಲೆ ಮಾಡಲಾಗಿದೆ ಎಂದು ಸುಶಾಂತ್ ಚಿಕ್ಕಪ್ಪ ಆರ್.ಸಿ. ಸಿಂಗ್ ಗಂಭೀರ ಆರೋಪ ಮಾಡಿದ್ದರು. ಧೋನಿ ಅನ್ ಟೋಲ್ಡ್ ಸ್ಟೋರಿ ಮೂಲಕ ಮನೆ ಮಾತಾಗಿದ್ದ ನಟ ಮುಂಬೈನ ಬಾಂದ್ರಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.