Pushpa Movie: ಅಭಿಮಾನಿಗಳಿಗೆ ಎಮೋಷನಲ್ ಪತ್ರ ಬರೆದ ಐಕಾನ್ ಸ್ಟಾರ್ ಅಲ್ಲು ಅರ್ಜುನ್

Suvarna News   | Asianet News
Published : Dec 14, 2021, 08:46 PM IST
Pushpa Movie: ಅಭಿಮಾನಿಗಳಿಗೆ ಎಮೋಷನಲ್ ಪತ್ರ ಬರೆದ ಐಕಾನ್ ಸ್ಟಾರ್ ಅಲ್ಲು ಅರ್ಜುನ್

ಸಾರಾಂಶ

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ಪುಷ್ಪ' ಭಾರಿ ನಿರೀಕ್ಷೆಯೊಂದಿಗೆ ಡಿಸೆಂಬರ್ 17ರಂದು ತೆರೆಗೆ ಬರಲಿದೆ. ಇದೀಗ ಅಭಿಮಾನಿಗಳಿಗೆ ಎಮೋಷನಲ್ ಪತ್ರವನ್ನು ಅಲ್ಲು ಅರ್ಜುನ್ ಬರೆದಿದ್ದಾರೆ.

ಸುಕುಮಾರ್ (Sukumar) ನಿರ್ದೇಶನದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಹಾಗೂ ನ್ಯಾಷನಲ್ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ಪುಷ್ಪ' (Pushpa) ಭಾರಿ ನಿರೀಕ್ಷೆಯೊಂದಿಗೆ ಡಿಸೆಂಬರ್ 17ರಂದು ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಹಾಡುಗಳು, ಟ್ರೈಲರ್‌ನಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟು ಆಗಿದೆ. ಚಿತ್ರದ ನಾಯಕ ಅಲ್ಲು ಅರ್ಜುನ್‌ಗೆ ಬಹುದೊಡ್ಡ ಅಭಿಮಾನಿ (Fans) ಬಳಗವಿದ್ದು, ನಟ ಅಲ್ಲು ಅರ್ಜುನ್‌ಗಾಗಿ ಬಂದ ಅಭಿಮಾನಿಗಳು ಪೆಟ್ಟು ತಿಂದು ಹಿಂದಿರುಗಿದ್ದಾರೆ. ಅದಕ್ಕಾಗಿ ಅಲ್ಲು ಅರ್ಜುನ್ ಕ್ಷಮೆ ಕೋರಿದ್ದಾರೆ.

ಹೌದು! ಅಲ್ಲು ಅರ್ಜುನ್ 'ಪುಷ್ಪ' ಚಿತ್ರದ ಪ್ರಚಾರ ಕಾರ್ಯದಲ್ಲಿ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಲು ನಿರ್ಧರಿಸಿದ್ದರು. ಹಾಗಾಗಿ ಸೋಮವಾರ (ಡಿ.13) ಹೈದರಾಬಾದ್‌ನ ನಾಗಾರ್ಜುನ ಕನ್ವೇನ್ಷನ್‌ ಹಾಲ್‌ನಲ್ಲಿ ಫ್ಯಾನ್ಸ್ ಮೀಟ್ ಏರ್ಪಡಿಸಲಾಗಿತ್ತು. ಅಲ್ಲಿ ಸುಮಾರು 200 ಜನರಿಗೆ ಮಾತ್ರ ಅವಕಾಶಕ್ಕೆ ಅನುಮತಿಯನ್ನು ಪಡೆಯಲಾಗಿತ್ತು. ಆದರೆ, 2 ಸಾವಿರಕ್ಕೂ ಅಧಿಕ ಮಂದಿ ಅಲ್ಲಿ ಸೇರಿದ್ದರು. ಪರಿಸ್ಥಿತಿ ನಿಭಾಯಿಸುವುದು ಪೊಲೀಸರಿಗೂ ಸವಾಲಾಗಿತ್ತು. ಇದೆ ವೇಳೆ ಕೆಲ ಅಭಿಮಾನಿಗಳು ಗಾಯಗೊಂಡಿದ್ದರು. ಇದನ್ನೆಲ್ಲ ಕಂಡ ಅಲ್ಲು ಅರ್ಜುನ್ ಅಲ್ಲಿಂದ ಮರಳಿದ್ದರು. ಈ ಹಿನ್ನಲೆಯಲ್ಲಿ ಅಭಿಮಾನಿಗಳಿಗೆ ಎಮೋಷನಲ್ ಪತ್ರವನ್ನು (Emotional Letter) ಅಲ್ಲು ಅರ್ಜುನ್ ಬರೆದಿದ್ದಾರೆ.

Item Song: ಪುಷ್ಪ ಚಿತ್ರದ ಸ್ಪೆಷಲ್ ಹಾಡಿಗೆ ಹಾಟ್ ಆಗಿ ಸೊಂಟ ಬಳುಕಿಸಿದ ಸಮಂತಾ

ಈ ಬಗ್ಗೆ ಟ್ವೀಟರ್‌ನಲ್ಲಿ (Twitter) ಅಲ್ಲು ಅರ್ಜುನ್' ''ಫ್ಯಾನ್‌ ಮೀಟ್‌ ಕಾರ್ಯಕ್ರಮದಲ್ಲಿ ನನ್ನ ಕೆಲವು ಅಭಿಮಾನಿಗಳು ಗಾಯಗೊಂಡಿರುವ ಕಹಿ ಘಟನೆ ಬಗ್ಗೆ ತಿಳಿಯಿತು. ನನ್ನ ತಂಡ ಇದರ ಬಗ್ಗೆ ಕೆಲಸ ಮಾಡುತ್ತಿದೆ. ಮತ್ತು ನನಗೆ ಮಾಹಿತಿ ನೀಡುತ್ತಿದೆ. ಇನ್ನು ಮುಂದೆ ಈ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುತ್ತೇನೆ. ನಿಮ್ಮ ಪ್ರೀತಿ, ಅಭಿಮಾನವೇ ನನ್ನ ದೊಡ್ಡ ಶಕ್ತಿ. ನಾನು ಅದನ್ನು ಲಘುವಾಗಿ ತೆಗೆದುಕೊಳ್ಳುವುದಿಲ್ಲ' ಎಂದು ಅಭಿಮಾನಿಗಳ ಬಗ್ಗೆ ಭಾವನಾತ್ಮವಾಗಿ ಬರೆದುಕೊಂಡಿದ್ದಾರೆ. ಸದ್ಯ ಚೆನ್ನೈನಲ್ಲಿ 'ಪುಷ್ಪ' ಚಿತ್ರತಂಡ ಪ್ರಚಾರವನ್ನು ಮಾಡುತ್ತಿದೆ.



'ಪುಷ್ಪ' ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ಸಂಸ್ಥೆ (Mythri Movie Makers) ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಅಲ್ಲು ಅರ್ಜುನ್ ರಕ್ತ ಚಂದನ ಕಳ್ಳಸಾಗಾಣಿಕೆ ಮಾಡುವ ಲಾರಿ ಚಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಶ್ರೀವಲ್ಲಿಯಾಗಿ ನ್ಯಾಷನಲ್ ಕ್ರಷ್‌ ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್‌ಗೆ ಜೋಡಿಯಾಗಿ ನಟಿಸಿದ್ದಾರೆ. ಮುಖ್ಯವಾಗಿ ಅಲ್ಲು ಅರ್ಜುನ್‌ರ ಗೆಟಪ್ ಬಾಡಿ ಲಾಂಗ್ವೇಜ್ ನೋಡಿದರೆ ನೈಜ ಲಾರಿ ಡ್ರೈವರ್‌ನಂತೆ ಕಂಡುಬರುತ್ತಿದ್ದು, ಪ್ರತಿಯೊಂದು ಪಾತ್ರದ ಲುಕ್ ಕೂಡ ವಿಭಿನ್ನವಾಗಿ  ಮೂಡಿ ಬಂದಿದೆ. ಕನ್ನಡ ಡಾಲಿ ಧನಂಜಯ್ (Dolly Dhananjay) 'ಜಾಲಿ ರೆಡ್ಡಿ' ಹೆಸರಿನ ಪಾತ್ರ ನಿರ್ವಹಿಸಿದ್ದಾರೆ. 

Pushpa Movie: ಚಿತ್ರತಂಡಕ್ಕೆ ಭರ್ಜರಿ ಗಿಫ್ಟ್‌ ನೀಡಿದ ಐಕಾನ್ ಸ್ಟಾರ್ ಅಲ್ಲು ಅರ್ಜುನ್

ಇನ್ನೂ ಮಂಗಲಮ್ ಶ್ರೀನು ಹೆಸರಿನ ಪಾತ್ರದಲ್ಲಿ ನಟ ಸುನೀಲ್ (Sunil) ಕಾಣಿಸಿಕೊಳ್ಳುತ್ತಿದ್ದಾರೆ. ದಾಕ್ಷಾಯಿಣಿ ಪಾತ್ರದಲ್ಲಿ ಅನಸೂಯ ಭಾರಧ್ವಾಜ್ (Anasuya Bharadwaj) ಅಭಿನಯಿಸುತ್ತಿದ್ದು, ಮಲಯಾಳಂ ನಟ ಫಾಹದ್ ಫಾಸಿಲ್ (Fahadh Faasil) ಮುಖ್ಯ ಖಳ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಟಾಲಿವುಡ್ ವಿಲನ್ ಜಗಪತಿ ಬಾಬು (Jagapati Babu), ಪ್ರಕಾಶ್ ರಾಜ್ (Prakash Raj), ವೆನ್ನೆಲ್ಲಾ ಕಿಶೋರ್ ಸೇರಿದಂತೆ ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು, ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ (Devi Sri Prasad) ಸಂಗೀತ ನಿರ್ದೇಶನವಿದೆ. ಮಿರೊಸ್ಲಾವ್ ಬ್ರೊಜೆಕ್‌ರ ಕ್ಯಾಮರಾ ಕೈಚಳಕ, ಕಾರ್ತಿಕ ಶ್ರೀನಿವಾಸ್ ಅವರ ಎಡಿಟಿಂಗ್‌ನಲ್ಲಿ ಚಿತ್ರದ ದೃಶ್ಯ ಅದ್ಭುತವಾಗಿ ಮೂಡಿ ಬಂದಿದೆ. ವಿಶೇಷವಾಗಿ ತೆಲುಗಿನ ಖ್ಯಾತ ನಟಿ ಸಮಂತಾ (Samantha) ಈ ಚಿತ್ರದ ಐಟಂ ಸಾಂಗ್‌ನಲ್ಲಿ ಅಭಿನಯಿಸಿದ್ದು ಇದು ಚಿತ್ರದ ಸ್ಪೆಷಲ್‌ ಅಟ್ರ್ಯಾಕ್ಷನ್‌ ಆಗಿದೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು: Jaya Bachchan ಬಾಯ್ಕಾಟ್‌ ಆಗ್ತಾರಾ?
ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?