ಸೂಪರ್‌ಸ್ಟಾರ್ ಬಿಪಿ ಏರು ಪೇರು: ಡಿಸ್ಚಾರ್ಜ್ ಯಾವಾಗ..?

Kannadaprabha News   | Asianet News
Published : Dec 27, 2020, 07:58 AM ISTUpdated : Dec 27, 2020, 08:06 AM IST
ಸೂಪರ್‌ಸ್ಟಾರ್ ಬಿಪಿ ಏರು ಪೇರು: ಡಿಸ್ಚಾರ್ಜ್ ಯಾವಾಗ..?

ಸಾರಾಂಶ

 ಮೊನ್ನೆಗಿಂತ ಪರಿಸ್ಥಿತಿ ಸುಧಾರಣೆ: ವೈದ್ಯರು | ಡಿಸ್ಚಾಜ್‌ರ್‍ ಕುರಿತು ಇಂದು ನಿರ್ಧಾರ

ಪಿಟಿಐ ಹೈದರಾಬಾದ್‌/ ಚೆನ್ನೈ(ಡಿ.27): ರಕ್ತದೊತ್ತಡದಲ್ಲಿ ತೀವ್ರ ಏರಿಳಿತವಾಗಿ ಆಸ್ಪತ್ರೆಗೆ ದಾಖಲಾಗಿರುವ ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ (70) ಅವರ ರಕ್ತದೊತ್ತಡ ಇನ್ನೂ ಇಳಿಕೆಯಾಗಿಲ್ಲ, ಆದರೆ ಶುಕ್ರವಾರಕ್ಕಿಂತ ಪರಿಸ್ಥಿತಿ ಸುಧಾರಿಸಿದೆ. ಡಿಸ್ಚಾಜ್‌ರ್‍ ಕುರಿತು ಭಾನುವಾರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ರಜನಿಕಾಂತ್‌ ಅವರಿಗೆ ಶನಿವಾರ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ರಜನಿ ಸೆಟ್‌ನಲ್ಲಿ ನಾಲ್ವರಿಗೆ ಕೊರೋನಾ: ಬಿಪಿ ಏರುಪೇರು, ಸೌತ್‌ ಸೂಪರ್‌ಸ್ಟಾರ್ ಆಸ್ಪತ್ರೆಗೆ ದಾಖಲು

ಶನಿವಾರ ಇನ್ನಷ್ಟುವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅವುಗಳ ವರದಿ ನೋಡಿಕೊಂಡು ಮುಂದಿನ ಚಿಕಿತ್ಸೆ ನೀಡಲಾಗುತ್ತದೆ. ಇಲ್ಲಿಯವರೆಗಿನ ಯಾವುದೇ ಪರೀಕ್ಷೆಯಲ್ಲಿ ದೊಡ್ಡ ಸಮಸ್ಯೆಗಳೇನೂ ಕಾಣಿಸಿಲ್ಲ. ರಕ್ತದೊತ್ತಡ ಈಗಲೂ ಹೆಚ್ಚೇ ಇದೆ. ಆದರೆ, ರಾತ್ರಿ ಏನೂ ಸಮಸ್ಯೆಯಾಗಲಿಲ್ಲ. ಆರೋಗ್ಯ ಸುಧಾರಿಸುತ್ತಿದೆ ಎಂದು ಆಸ್ಪತ್ರೆಯ ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

ರಕ್ತದೊತ್ತಡ ನಿಯಂತ್ರಣಕ್ಕೆ ಔಷಧಿಗಳನ್ನು ನೀಡಲಾಗಿದೆ. ಅವರನ್ನು ಸತತವಾಗಿ ನಿಗಾದಲ್ಲಿಡಲಾಗುವುದು. ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗಿದ್ದು, ಅವರನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡುತ್ತಿಲ್ಲ. ಶನಿವಾರ ನಡೆಸಿದ ಪರೀಕ್ಷೆಗಳ ಫಲಿತಾಂಶ ಹಾಗೂ ಅವರ ಆರೋಗ್ಯದಲ್ಲಿನ ಪ್ರಗತಿ ನೋಡಿಕೊಂಡು ಡಿಸ್‌ಚಾಜ್‌ರ್‍ ಮಾಡುವ ಬಗ್ಗೆ ನಂತರ ನಿರ್ಧರಿಸಲಾಗುವುದು ಎಂದೂ ಬುಲೆಟಿನ್‌ನಲ್ಲಿ ಹೇಳಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದವರು: ನಟ ಶಿವಣ್ಣ ಹೇಳಿದ್ದೇನು?