ರಾವಣಾಸುರನಾಗಿ ಯಶ್ ನೋಡಲು ದಿನಾಂಕ ಸನ್ನಿಹಿತ

Published : Nov 06, 2024, 02:04 PM ISTUpdated : Nov 07, 2024, 06:45 PM IST
ರಾವಣಾಸುರನಾಗಿ ಯಶ್ ನೋಡಲು ದಿನಾಂಕ ಸನ್ನಿಹಿತ

ಸಾರಾಂಶ

ಲವರ್ ಬಾಯ್, ಮಾಸ್ ಹಿರೋ ಆಗಿ ಕಾಣಿಸಿಕೊಂಡಿದ್ದ ರಾಕಿಂಗ್ ಸ್ಟಾರ್ ಯಶ್ ಅನ್ನು ರಾವಣಾಸುರನಾಗಿ ನೋಡಲು ದಿನಾಂಕ ಸನ್ನಿಹಿತವಾಗಿದೆ. ಬಾಲಿವುಡ್‌ನ ಮೋಸ್ಟ್ ಸೆನ್ಸೇಷನಲ್ ಮೂವಿ ರಾಮಾಯಣ ಚಿತ್ರ ಬಿಡುಗಡೆಗೆ ದಿನಾಂಕ ಘೋಷನೆ ಮಾಡಲಾಗಿದೆ.

ಬೆಂಗಳೂರು (ಅ.06): ಕನ್ನಡ ಚಿತ್ರರಂಗದಲ್ಲಿ ಲವರ್ ಬಾಯ್ ಆಗಿ, ಮಾಸ್ ಹೀರೋ ಆಗಿ ಜೊತೆಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೆಳೆದ ರಾಕಿಂಗ್ ಸ್ಟಾರ್ ಯಶ್ ಅವರನ್ನು ರಾವಣಾಸುರನಾಗಿ ನೋಡುವುದಕ್ಕೆ ದಿನಾಂಕ ಸನ್ನಿಹಿತವಾಗಿದೆ. ಭಾರತೀಯ ಚಿತ್ರರಂಗವು ಕಾತರದಿಂದ ಎದುರು ನೋಡುತ್ತಿರುವ ಚಿತ್ರ 'ರಾಮಾಯಣ' ಆಗಿದೆ. ಈ ಸಿನಿಮಾ ನಿರ್ದೇಶಿಸುತ್ತಿರುವ ನಿತೇಶ್ ತಿವಾರಿ ಅವರು ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.

ಭಾರತದಲ್ಲಿ ಅತ್ಯಂತ ಶ್ರೀಮಂತ ಚಿತ್ರರಂಗವಾದ ಬಾಲಿವುಡ್‌ ಸಿನಿಮಾ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ. ಎರಡು ಭಾಗಗಳಲ್ಲಿ ಬರಲಿರುವ ರಾಮಾಯಣದ ಮೊದಲ ಭಾಗವು 2026 ರ ದೀಪಾವಳಿಗೆ ಮತ್ತು ಎರಡನೇ ಭಾಗವು 2027 ರ ದೀಪಾವಳಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅವರು ಸಿನಿಮಾ ಬಿಡುಗಡೆ ದಿನಾಂಕವನ್ನು ಹೊಸ ಪೋಸ್ಟರ್ ಮೂಲಕ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ: ಯಶ್ ಟಾಕ್ಸಿಕ್ ಚಿತ್ರದ ಬಗ್ಗೆ ಕಿಂಗ್‌ಖಾನ್ ಶಾರುಖ್ ಮಾತು

ರಾಮಾಯಣ ಸಿನಿಮಾದಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಹಾಗೂ ಸಿಂಪಲ್ ನಟಿ ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದಾರೆ. ಬಾಲಿವುಡ್ ಲವರ್ ಬಾಯ್ ರಣಬೀರ್ ಕಪೂರ್ ರಾಮನಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಸೂಪರ್‌ಸ್ಟಾರ್ ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ನಟಿಸುತ್ತಿದ್ದಾರೆ. ಇನ್ನು ತಾನು ರಾಮಾಯಣ ಸಿನಿಮಾದಲ್ಲಿ 10 ತಲೆಯ ರಾವಣನಾಗಿ ನಟಿಸುತ್ತಿರುವುದನ್ನು ಯಶ್ ಇತ್ತೀಚೆಗೆ ದೃಢಪಡಿಸಿದ್ದರು. ಒಬ್ಬ ನಟನಾಗಿ ರಾವಣನ ಪಾತ್ರವು ಅತ್ಯಂತ ರೋಮಾಂಚಕಾರಿ ಪಾತ್ರವಾಗಿದೆ. ಆ ಪಾತ್ರವನ್ನು ನಿರ್ವಹಿಸಲು ತುದಿಗಾಲಿನಲ್ಲಿ ನಿಂತಿದ್ದೇನೆ ಎಂದು ಯಶ್ ಹೇಳಿದ್ದರು. ಬೇರೆ ಯಾವುದೇ ಪಾತ್ರವನ್ನು ತನಗೆ ನೀಡಿದ್ದರೆ, ಬಹುಶಃ ಅದನ್ನು ತಿರಸ್ಕರಿಸುತ್ತಿದ್ದೆ ಎಂದು ಯಶ್ ಹೇಳಿದ್ದಾರೆ. 

ಇನ್ನು ರಾಮಾಯಣ ಸಿನಿಮಾದಲ್ಲಿ ಸನ್ನಿ ಡಿಯೋಲ್ ಚಿತ್ರದಲ್ಲಿ ಹನುಮಂತನ ಪಾತ್ರ ನಿರ್ವಹಿಸುತ್ತಿದ್ದಾರೆ. ರಾಮಾಯಣದ ಬಜೆಟ್ 700 ಕೋಟಿ ಎಂದು ವರದಿಯಾಗಿದೆ. ವಿಭೀಷಣನ ಪಾತ್ರಕ್ಕಾಗಿ ನಿರ್ಮಾಪಕರು ವಿಜಯ್ ಸೇತುಪತಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಮೇ ತಿಂಗಳಲ್ಲಿ ಚಿತ್ರೀಕರಣಕ್ಕೆ ಕೆಲವು ಅಡಚಣೆಗಳು ಉಂಟಾಗಿದ್ದವು. ಆರಂಭದಲ್ಲಿ ಚಿತ್ರದ ನಿರ್ಮಾಪಕ ಮಧು ಮಂಟೇನಾ. ನಂತರ ಅವರು ಹಿಂದೆ ಸರಿದರು. ಆದರೆ, ಕಾರಣ ನೀಡದೇ ಸಿನಿಮಾ ನಿರ್ಮಾಣದಿಂದ ಹಿಂದೆ ಸರಿದಿದ್ದರಿಂದ ಅವರಿಗೆ ನೋಟಿಸ್ ನೀಡಲಾಗಿತ್ತು. ಇದರಿಂದಾಗಿ ಚಿತ್ರೀಕರಣ  ಕೆಲ ದಿನಗಳ ಕಾಲ ಸ್ಥಗಿತಗೊಂಡಿತು ಎಂಬ ಮಾಹಿತಿ ಇದೆ.

ಕೋಟಿ ಕೋಟಿ ಕಲೆಕ್ಷನ್ ಮಾಡಿದೆ ಶ್ರೀಮುರಳಿ 'ಬಘೀರ' ಸಿನಿಮಾ; ವಾರ ಕಳೆಯುತ್ತಿದ್ದಂತೆ ಇಳಿಕೆ ಆಯ್ತಾ ಗಳಿಕೆ ಆಯ್ತಾ?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅಖಂಡ 2 ಪ್ರೀಮಿಯರ್ ಶೋಗಳು ರದ್ದು, ನಿರ್ಮಾಪಕರಿಗೆ ಸಂಕಷ್ಟ.. ಬಾಲಯ್ಯ ಸಿನಿಮಾ ರಿಲೀಸ್ ಕಥೆಯೇನು?
ಮೋಹನ್ ಬಾಬು ಮಾಡಿದ ಸಣ್ಣ ತಪ್ಪಿನಿಂದ ಸೌಂದರ್ಯ ಪ್ರಾಣ ಕಳೆದುಕೊಂಡ್ರಾ? ನಿರ್ದೇಶಕರು ಹೇಳಿದ ಸತ್ಯವೇನು?