ಬಾಲಿವುಡ್​ ಕ್ವೀನ್​ ಜಯಪ್ರದಾಗೆ ಭಾರಿ ಸಂಕಷ್ಟ! ಕೂಡಲೇ ಅರೆಸ್ಟ್​ ಮಾಡಲು ಕೋರ್ಟ್​ ಆದೇಶ

Published : Feb 13, 2024, 09:02 PM IST
ಬಾಲಿವುಡ್​ ಕ್ವೀನ್​ ಜಯಪ್ರದಾಗೆ ಭಾರಿ ಸಂಕಷ್ಟ! ಕೂಡಲೇ ಅರೆಸ್ಟ್​ ಮಾಡಲು ಕೋರ್ಟ್​ ಆದೇಶ

ಸಾರಾಂಶ

ಬಾಲಿವುಡ್​ ಕ್ವೀನ್​ ಜಯಪ್ರದಾಗೆ ಭಾರಿ ಸಂಕಟ! ಕೂಡಲೇ ಅರೆಸ್ಟ್​ ಮಾಡುವಂತೆ  ಆದೇಶ ಹೊರಡಿಸಿದೆ ಕೋರ್ಟ್​. ಆಗಿದ್ದೇನು?   

ನಟಿ ಹಾಗೂ ಸಮಾಜವಾದಿ ಪಕ್ಷದ  ಮಾಜಿ ಸಂಸದೆ ಜಯಪ್ರದಾ (Jaya Prada)  ಎರಡು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದಾರೆ. ಎರಡೂ ಪ್ರಕರಣಗಳಲ್ಲಿ ಮಧ್ಯಪ್ರದೇಶ ಕೋರ್ಟ್ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.  ಆದರೆ ಸದ್ಯ ಯಾರ ಕೈಗೂ ಸಿಗದೇ ನಟಿ ತಲೆ ಮರೆಸಿಕೊಂಡಿದ್ದಾರೆ. ರಾಂಪುರ ಪೊಲೀಸರು ನಟಿಯ  ಹುಡುಕಾಟಕ್ಕೆ ತಂಡವನ್ನು ರಚಿಸಿದ್ದರು. ಆದರೆ ಅವರಿಗೆ ಜಯಪ್ರದಾ ಅವರನ್ನು ಈವರೆಗೆ ಹುಡುಕಲು ಆಗಿಲ್ಲ. ಕೋರ್ಟ್​ ಆದೇಶದ ಅನ್ವಯ ಜನವರಿ 10ರೊಳಗೆ  ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಆದರೆ, ಇದುವರೆಗೆ ಅವರು ಹಾಜರಾಗದ ಹಿನ್ನೆಲೆಯಲ್ಲಿ ಕೂಡಲೇ ಅರೆಸ್ಟ್​ ಮಾಡುವಂತೆ ಕೋರ್ಟ್​ ಆದೇಶಿಸಿದೆ. ಜಯಪ್ರದಾ ಅವರನ್ನು ಬಂಧಿಸಿ ಫೆಬ್ರವರಿ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಕೋರ್ಟ್​ ಆದೇಶಿಸಿದ್ದು,  ವಿಶೇಷ ತಂಡ ರಚಿಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನಿರ್ದೇಶಿಸಿದೆ.

ಅಂದಹಾಗೆ ಈ ಎರಡೂ ಪ್ರಕರಣಗಳು  2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿವೆ. 2019 ರ ಏಪ್ರಿಲ್ 19 ರಂದು ನೂರ್ಪುರ್ ಗ್ರಾಮದಲ್ಲಿ ಕೋಡ್ ಅನ್ನು ಉಲ್ಲಂಘಿಸಿ ರಸ್ತೆಯನ್ನು ಉದ್ಘಾಟಿಸಿದ ಆರೋಪದ ಮೇಲೆ ಕ್ಷೇತ್ರದ ಸ್ವರ್ ಪ್ರದೇಶದಲ್ಲಿ ಅವರ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ.   ಎರಡನೇ ಪ್ರಕರಣವು ಕೆಮ್ರಿ ಪೊಲೀಸ್ ಠಾಣೆಯದ್ದಾಗಿದ್ದು, ಪಿಪ್ಲಿಯಾ ಮಿಶ್ರಾ ಗ್ರಾಮದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪ ನಟಿಯ ಮೇಲಿದೆ.

ಸುಕೇಶ್‌ ಮೋಹಪಾಶದಲ್ಲಿ ರಾ ರಾ ರಕ್ಕಮ್ಮ ಬೆಡಗಿ! ಇನ್ನಷ್ಟು, ಮತ್ತಷ್ಟು ಎಂದಾಕೆಯ ಪಾಡು ಇದೇನಾಗೋಯ್ತು?

ನಟಿ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಮತ್ತು ಯುಪಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತು. ಇದರ ನಂತರ, ರಾಂಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಅವರರ ನೇತೃತ್ವದಲ್ಲಿ  ಜಯಪ್ರದಾ ಅವರನ್ನು ಪತ್ತೆಹಚ್ಚಲು   ವಿಶೇಷ ತಂಡವನ್ನು ರಚಿಸಿ ಆದರೆ ಈವರೆಗೆ ಪೊಲೀಸರಿಗೆ ಸಿಗದೆ ನಟಿ ಚಳ್ಳೆ ಹಣ್ಣು ತಿನ್ನಿಸಿದ್ದಾರೆ.

ವಿಶೇಷ ಪೊಲೀಸ್‌ ತಂಡವು ದೆಹಲಿ ಮತ್ತು ಹೈದರಾಬಾದ್‌ನಲ್ಲಿರುವ ಮನೆಯಲ್ಲಿ ಜಯಾ ಅಡಗಿರಬಹುದೆಂದು ಶೋಧಿಸಿ ಮುಂಬೈಗೆ ತೆರಳಿ ನಟಿಯ ಮನೆ ಮೇಲೆ ದಾಳಿ ನಡೆಸಿತು, ಆದರೆ ಅಲ್ಲಿಯೂ ಯಾವುದೇ ಕುರುಹು ಸಿಗಲಿಲ್ಲ. ಒಂದು ವಾರದ ಹುಡುಕಾಟದ ನಂತರ ತಂಡವು ಬರಿಗೈಯಲ್ಲಿ ಮರಳಿತು.  ಜನವರಿ 10ರಂದು ಜಯಪ್ರದಾ ಅವರನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ರಾಂಪುರ ಪೊಲೀಸರಿಗೆ ಕೋರ್ಟ್ ಆದೇಶ ನೀಡಿತ್ತು. ಆದರೆ, ನಟಿ ಪತ್ತೆಯಾಗದಿದ್ದಲ್ಲಿ ಹಿನ್ನೆಲೆಯಲ್ಲಿ ಅರೆಸ್ಟ್​ ಮಾಡುವಂತೆ ಆದೇಶಿಸಲಾಗಿದೆ.  ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿ ಚಿತ್ರರಂಗವನ್ನು ತೊರೆದ ನಟಿ 1994 ರಲ್ಲಿ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ಸೇರಿದರು.

ಒಳ್ಳೆ ನಟಿ ಆಗ್ಬೇಕು ಎಂದ್ರೆ ಸ್ವಲ್ಪ ಅಡ್ಜಸ್ಟ್‌ ಮಾಡ್ಕೋ ಎಂದ್ರು... ಆದ್ರೆ... ಕಾಸ್ಟಿಂಗ್‌ ಕೌಚ್‌ ಅನುಭವ ಹೇಳಿದ ನಯನತಾರಾ
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?