ಸುಶಾಂತ್ ಕೇಸ್ ಸಿಬಿಐಗೆ: ನಟಿ ರಿಯಾಳನ್ನು ಫಿಲ್ಮ್‌ನಿಂದ ಕೈಬಿಟ್ಟ ನಿರ್ದೇಶಕ

Published : Aug 21, 2020, 12:18 PM ISTUpdated : Aug 21, 2020, 01:02 PM IST
ಸುಶಾಂತ್ ಕೇಸ್ ಸಿಬಿಐಗೆ: ನಟಿ ರಿಯಾಳನ್ನು ಫಿಲ್ಮ್‌ನಿಂದ ಕೈಬಿಟ್ಟ ನಿರ್ದೇಶಕ

ಸಾರಾಂಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೊಲೆ ಪ್ರಕರಣವನ್ನು ಸುಪ್ರಿಂ ಕೋರ್ಟ್‌ ಸಿಬಿಐಗೆ ಹಸ್ತಾಂತರಿಸಿದ ಬೆನ್ನಲ್ಲೇ ಇದೀಗ ನಟಿ ರಿಯಾ ಚಕ್ರವರ್ತಿ ಫಿಲ್ಮ್ ಆಫರ್ ಕಳೆದುಕೊಂಡಿದ್ದಾರೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೊಲೆ ಪ್ರಕರಣವನ್ನು ಸುಪ್ರಿಂ ಕೋರ್ಟ್‌ ಸಿಬಿಐಗೆ ಹಸ್ತಾಂತರಿಸಿದ ಬೆನ್ನಲ್ಲೇ ಇದೀಗ ನಟಿ ರಿಯಾ ಚಕ್ರವರ್ತಿ ಫಿಲ್ಮ್ ಆಫರ್ ಕಳೆದುಕೊಂಡಿದ್ದಾರೆ.

ಚಿಕನ್ ಬಿರಿಯಾನಿ ಹಾಗೂ ಯೇ ಹೇ ಇಂಡಿಯಾ ಖ್ಯಾತಿಯ ಲೋಮ್ ಹರ್ಷ ತಮ್ಮ ಪ್ರಾಜೆಕ್ಟ್‌ನಿಂದ ರಿಯಾ ಚಕ್ರವರ್ತಿಯನ್ನು ಕೈಬಿಟ್ಟಿದ್ದಾರೆ. ನಟ ಸುಶಾಂತ್ ಅಭಿಮಾನಿಗಳ ಭಾವನೆಗಳಿಗೆ ನೋವು ಮಾಡುವುದು ನನಗೆ ಇಷ್ಟವಿಲ್ಲ ಎಂದಿರುವ ಹರ್ಷ ರಿಯಾಳನ್ನು ಕೈಬಿಡುತ್ತಿರುವುದಾಗಿ ಹೇಳಿದ್ದಾರೆ.

ಸುಶಾಂತ್ ಕೇಸ್ CBIಗೆ: ಸುಪ್ರೀಂ ತೀರ್ಪು ಸ್ವಾಗತಿಸಿದ ಬಾಲಿವುಡ್ ಸ್ಟಾರ್ಸ್‌

ಈಗಾಗಲೇ ಪ್ರಾಜೆಕ್ಟ್ ಸ್ಥಗಿತವಾಗಿದ್ದು, ದಿನ ಕಳೆದಂತೆ ರಿಯಾ ಸುತ್ತ ವಿವಾದಗಳು ಹುಟ್ಟುತ್ತಲೇ ಇರುವ ನಿಟ್ಟಿನಲ್ಲಿ ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಜೂನ್ 14ರಂದು ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದರು. ಸುಶಾಂತ್ ತಂದೆ ಕೆಕೆ ಸಿಂಗ್ ಪಾಟ್ನಾದಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರಿಂ ಕೋರ್ಟ್‌ ತೀರ್ಪು ನೀಡಿದೆ. ನಟಿ ರಿಯಾ ಚಕ್ರವರ್ತಿ ಸುಶಾಂತ್ ಸಾವಿನ ತನಿಖೆಯನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ರಿಯಾ ಚಕ್ರವರ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ನೀಡಿದೆ. ಸುಶಾಂತ್ ಸಾವಿಗೆ ಸಂಬಂಧಿಸಿ ಮುಂಬೈ ಪೊಲೀಸರು ಕಲೆ ಹಾಕಿದ ಎಲ್ಲ ಸಾಕ್ಷ್ಯಾಧಾರಗಳನ್ನು ಸಿಬಿಐಗೆ ನೀಡಬೇಕೆಂದು ನ್ಯಾಯಾಲಯ ಸೂಚಿಸಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?
ಸಾವಿರ ಕೋಟಿ ಕುಬೇರ 'ಮಹಾಪುರುಷ'ನಿಗೆ ಡಿವೋರ್ಸ್ ಕೊಡ್ತಾರಾ ಈ ನಟಿ? ಇದೆಂಥ ಶಾಕಿಂಗ್ ಮ್ಯಾಟರ್!