ಕಾಂತಾರ 1 ಬಿಡುಗಡೆಗೆ ಮೊದಲೇ ಮತ್ತೊಂದು ಚಿತ್ರ ಒಪ್ಪಿಕೊಂಡ ರಿಷಬ್‌ ಶೆಟ್ಟಿ!

Kannadaprabha News, Ravi Janekal |   | Kannada Prabha
Published : Jul 31, 2025, 10:08 AM ISTUpdated : Jul 31, 2025, 11:59 AM IST
Rishab shetty

ಸಾರಾಂಶ

ರಿಷಬ್ ಶೆಟ್ಟಿ ಅವರು ಮೂರನೇ ಪ್ಯಾನ್ ಇಂಡಿಯಾ ಚಿತ್ರಕ್ಕೆ ಸಹಿ ಹಾಕಿದ್ದಾರೆ.   ಈ ಐತಿಹಾಸಿಕ ಚಿತ್ರವನ್ನು ಎಸ್.ಎಸ್. ರಾಜಮೌಳಿ ಶಿಷ್ಯ ಅಶ್ವಿನ್ ಗಂಗರಾಜು ನಿರ್ದೇಶಿಸುತ್ತಿದ್ದಾರೆ. 'ಸುಟ್ಟ ಭೂಮಿಯಿಂದ ಒಬ್ಬ ಬಂಡುಕೋರ ಹುಟ್ಟಿದ' ಎಂಬ ಟ್ಯಾಗ್‌ಲೈನ್‌ನೊಂದಿಗೆ ಚಿತ್ರದ ಫಸ್ಟ್ ಲುಕ್ 

‘ಕಾಂತಾರ ಅಧ್ಯಾಯ 1’ ಸಿನಿಮಾ ಬಿಡುಗಡೆಗೂ ಮೊದಲೇ ರಿಷಬ್‌ ಶೆಟ್ಟಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಎಸ್‌ಎಸ್‌ ರಾಜಮೌಳಿ ಗರಡಿಯಲ್ಲಿ ಪಳಗಿರುವ ತೆಲುಗಿನ ನಿರ್ದೇಶಕ ಅಶ್ವಿನ್‌ ಗಂಗರಾಜು ನಿರ್ದೇಶನದ ಐತಿಹಾಸಿಕ ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ಅವರು ನಾಯಕನಾಗಿ ನಟಿಸುತ್ತಿದ್ದಾರೆ.

ಇದು ರಿಷಬ್‌ ಶೆಟ್ಟಿ ಒಪ್ಪಿಕೊಂಡಿರುವ ಮೂರನೇ ಪ್ಯಾನ್‌ ಇಂಡಿಯಾ ಸಿನಿಮಾ. ಈಗಾಗಲೇ ಅವರು ‘ಜೈ ಹನುಮಾನ್‌’, ‘ಛತ್ರಪತಿ ಶಿವಾಜಿ ಮಹಾರಾಜ್‌’ ಎಂಬ ಎರಡು ಪ್ಯಾನ್‌ ಇಂಡಿಯಾದಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಹೊಸ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಯಾಗಿದ್ದು, ‘ಸುಟ್ಟ ಭೂಮಿಯಿಂದ ಒಬ್ಬ ಬಂಡುಕೋರ ಹುಟ್ಟಿದ’ ಎಂಬ ಟ್ಯಾಗ್‌ಲೈನ್‌ ನೀಡಲಾಗಿದೆ.

 

‘ಎಲ್ಲ ಬಂಡುಕೋರರೂ ಯುದ್ಧವನ್ನು ಆಯ್ಕೆ ಮಾಡುವುದಿಲ್ಲ. ಕೆಲವರನ್ನು ವಿಧಿ ಆಯ್ಕೆ ಮಾಡುತ್ತದೆ ಮತ್ತು ಈ ಸಿನಿಮಾ ಅಂಥಾ ಒಬ್ಬ ಬಂಡುಕೋರನ ಕಥೆ ಹೇಳುತ್ತದೆ’ ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

18ನೇ ಶತಮಾನದಲ್ಲಿ ಬಂಗಾಳದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಪ್ರಕ್ಷುಬ್ಧತೆಯಲ್ಲಿ ಜನಜೀವನ ದುಸ್ತರವಾಗಿದ್ದಾಗ ಉದಯಿಸಿದ ಬಂಡುಕೋರನ ಕಥೆ ಈ ಚಿತ್ರದ್ದು ಎನ್ನಲಾಗಿದೆ. ಸಿತಾರಾ ಎಂಟರ್‌ಟೇನ್‌ಮೆಂಟ್‌ನ ನಾಗವಂಶಿ ಮತ್ತು ಸಾಯಿ ಸೌಜನ್ಯ ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?