ಕನ್ನಡದಲ್ಲಿ ರಿಷಬ್‌ ಶೆಟ್ಟಿ ಮಾತು: ತೆಲುಗು ಪ್ರೇಕ್ಷಕರಿಂದ ಟ್ರೋಲ್‌, ಕಾಂತಾರ ಸಿನಿಮಾಗೆ ಬಹಿಷ್ಕಾರದ ಕರೆ

Published : Sep 30, 2025, 05:55 AM IST
Kantara

ಸಾರಾಂಶ

ಇತ್ತೀಚೆಗೆ ನಡೆದ ‘ಕಾಂತಾರ 1’ ಚಿತ್ರದ ಪ್ರೀ ರಿಲೀಸ್‌ ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡದಲ್ಲಿ ಮಾತನಾಡಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ವಿರುದ್ಧ ತೆಲುಗು ಪ್ರೇಕ್ಷಕರು ಸೋಷಿಯಲ್‌ ಮೀಡಿಯಾದಲ್ಲಿ ಸಿಟ್ಟು ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು (ಸೆ.30): ಹೈದರಾಬಾದ್‌ನಲ್ಲಿ ಇತ್ತೀಚೆಗೆ ನಡೆದ ‘ಕಾಂತಾರ 1’ ಚಿತ್ರದ ಪ್ರೀ ರಿಲೀಸ್‌ ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡದಲ್ಲಿ ಮಾತನಾಡಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ವಿರುದ್ಧ ತೆಲುಗು ಪ್ರೇಕ್ಷಕರು ಸೋಷಿಯಲ್‌ ಮೀಡಿಯಾದಲ್ಲಿ ಸಿಟ್ಟು ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ‘ಕಾಂತಾರ 1’ ಚಿತ್ರ ಬಹಿಷ್ಕರಿಸಲು ಕರೆ ನೀಡಿದ್ದು, #BoycottKantaraChapter1, #RespectTelugu ಎನ್ನುವ ಹ್ಯಾಷ್‌ ಟ್ಯಾಗ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ ಆಗುತ್ತಿವೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜೂ.ಎನ್‌ಟಿಆರ್‌ ಕೂಡ ಟ್ರೋಲ್‌ಗೆ ತುತ್ತಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳು ‘ರಿಷಬ್‌ ಶೆಟ್ಟಿ ಮಾಡಿದ್ದು ಸರಿನಾ? ಜೂ.ಎನ್‌ಟಿಆರ್‌ ಮೌನವಾಗಿದ್ದು ತಪ್ಪಾ?’ ಎನ್ನುವಂತೆ ಸುದ್ದಿ ಮಾಡಿವೆ. ಹೈದರಾಬಾದ್‌ನಲ್ಲಿ ನಡೆದ ಕಾಂತಾರ-1 ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ರಿಷಬ್‌ ಶೆಟ್ಟಿ ಬಹುತೇಕ ಕನ್ನಡದಲ್ಲಿ ಮಾತನಾಡಿದ್ದೇ ವಿರೋಧಕ್ಕೆ ಕಾರಣವಾಗಿದೆ.

ಕಾಂತಾರ ವಿವಾದಕ್ಕೆ ಪವನ್‌, ಅಲ್ಲು ಫ್ಯಾನ್ಸ್‌

ಈ ವಿವಾದಕ್ಕೆ ನಟ ಹಾಗೂ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಹಾಗೂ ಅಲ್ಲು ಅರ್ಜುನ್‌ ಅಭಿಮಾನಿಗಳು ಕೂಡ ಜೊತೆಯಾಗಿದ್ದಾರೆ. ‘ಕನ್ನಡ ಚಿತ್ರರಂಗ, ಕನ್ನಡ ಭಾಷೆ ಮತ್ತು ಕನ್ನಡ ಪ್ರೇಕ್ಷಕರ ಹೆಸರಿನಲ್ಲಿ ನಮ್ಮ ತೆಲುಗು ಚಿತ್ರಗಳಾದ ಪುಷ್ಪ 2, ಹರಿಹರ ವೀರಮಲ್ಲು ಚಿತ್ರಗಳ ಬ್ಯಾನರ್‌ಗಳನ್ನು ಹರಿದು ಹಾಕಿದ್ದರು. ಓಜಿ ಚಿತ್ರದ ಬ್ಯಾನರ್‌ ಕೂಡ ಹರಿದಿದ್ದು, ಪ್ರದರ್ಶನಗಳಿಗೆ ಅಡ್ಡಿಪಡಿಸಿದ್ದಾರೆ. ಕರ್ನಾಟಕದಲ್ಲಿ ತೆಲುಗು ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿಪಡಿಸುತ್ತಿರುವಾಗ ಅದೇ ಕರ್ನಾಟಕದವರ ಚಿತ್ರವನ್ನು ನಾವು ಯಾಕೆ ಸ್ವಾಗತಿಸಬೇಕು’ ಎನ್ನುವ ಮೂಲಕ ಕಾಂತಾರ 1 ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?
ಹೀರೋ ಆಗುವ ಮುನ್ನ ಶಾಕ್ ಕೊಟ್ಟ ಅಕೀರಾ ನಂದನ್: ರೇಣು ದೇಸಾಯಿ ಫೋನ್ ಮಾಡಿದಾಗ ಪವನ್ ನಕ್ಕಿದ್ದೇಕೆ?