
ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲಿ ಕಳ್ಳತನವಾಗಿದೆ. ಈ ಸಂಬಂಧ ವಿಜಯಲಕ್ಷ್ಮೀ ದರ್ಶನ್ ಅವರ ಮ್ಯಾನೇಜರ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನಲೆ CK ಅಚ್ಚುಕಟ್ಟು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮನೆಕೆಲಸದವರ ಮೇಲೆ ಶಂಕೆ ವ್ಯಕ್ತಪಡಿಸಿ ಮ್ಯಾನೇಜರ್ ನಾಗರಾಜ್ ಈ ದೂರನ್ನು ದಾಖಲಿಸಿದ್ದಾರೆ. ದೂರಿನಲ್ಲಿ 3 ಲಕ್ಷ ರೂಪಾಯಿ ಕಳ್ಳತನವಾಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸೆಪ್ಟೆಂಬರ್ 4ರಂದು ಕೆಲಸದ ನಿಮಿತ್ ವಿಜಯಲಕ್ಷ್ಮೀ ದರ್ಶನ್ ಮೈಸೂರಿಗೆ ತೆರಳಿದ್ದರು. ಮೈಸೂರಿಗೆ ತೆರಳುವ ಮುನ್ನ ಮನೆಯ ವಾಡ್ರೂಬ್ ಕಾಟನ್ ಬಾಕ್ಸ್ ನಲ್ಲಿ ಹಣ ತೆಗೆದುಕೊಡಲು ಮ್ಯಾನೇಜರ್ಗೆ ಹೇಳಿದ್ದರು. ಅದರಲ್ಲಿನ ಸ್ವಲ್ಪ ಹಣ ತೆಗೆದು ಉಳಿದ ಹಣವನ್ನು ವಾಡ್ರೂಬ್ ಕಾಟನ್ ಬಾಕ್ಸ್ ನಲ್ಲಿಯೇ ಮ್ಯಾನೇಜರ್ ಇರಿಸಿದ್ದರು. ನಂತರ ಮನೆ ಬೀಗವನ್ನು ತಾಯಿಗೆ ನೀಡಿದ್ದ ವಿಜಯಲಕ್ಷ್ಮೀ ಅವರ ಮ್ಯಾನೇಜರ್ ಹೊರಗಡೆ ತೆರಳಿದ್ದರು.
ಇದನ್ನೂ ಓದಿ: ದರ್ಶನ್ ಅಭಿಮಾನಿಗಳಿಂದ ಅಭಿಮಾನಿಗಳಿಗೇ ಮನವಿ; ಏನಿದು ವಿಚಿತ್ರ ಬೆಳವಣಿಗೆ..? ಇಲ್ನೋಡಿ..!
ಸೆಪ್ಟೆಂಬರ್ 7 ರಂದು ಬೆಂಗಳೂರಿಗೆ ವಿಜಯಲಕ್ಷ್ಮಿ ವಾಪಸ್ ಬಂದಿದ್ದಾರೆ. ಸೆಪ್ಟೆಂಬರ್ 8ರಂದು ವಾಡ್ರೂಬ್ ಕಾಟನ್ ಬಾಕ್ಸ್ ನೋಡಿದಾಗ ಅಲ್ಲಿರಿಸಿದ್ದ ಹಣ ಇರಲಿಲ್ಲ. ಹಣ ಸಿಗದಿದ್ದಾಗ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ಮನೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಹಣ ಸಿಗದಿದ್ದಾಗ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಜಯಲಕ್ಷ್ಮೀ ದರ್ಶನ್ ವಾಸವಾಗಿರುವ ಹೊಸಕೆರೆಹಳ್ಳಿ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ಫ್ಲಾಟ್ ನಲ್ಲಿ ಈ ಕಳ್ಳತನ ನಡೆದಿದೆ.
ಇದನ್ನೂ ಓದಿ: 'ಕಾರ್ಯೇಷು ದಾಸಿ, ಕರಣೇಷು ಮಂತ್ರಿ' ಎನ್ನುವಂತೆ ನಡೆದುಕೊಳ್ತಿರೋ Darshan Thoogudeepa ಪತ್ನಿ ವಿಜಯಲಕ್ಷ್ಮೀ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.