ಮಾಜಿ ಪತಿ ನಾಗ ಚೈತನ್ಯ ಬಗ್ಗೆ ನಾನು ಹಾಗೆ ಹೇಳಿಯೇ ಇಲ್ಲ; ನಟಿ ಸಮಂತಾ ಸ್ಪಷ್ಟನೆ

By Shruthi KrishnaFirst Published Apr 5, 2023, 1:26 PM IST
Highlights

ಮಾಜಿ ಪತಿ ನಾಗ ಚೈತನ್ಯ ಮತ್ತು ಶೋಭಿತಾ ಡೇಟಿಂಗ್ ವದಂತಿ ಬಗ್ಗೆ ನಾನು ಪ್ರತಿಕ್ರಿಯೆ ನೀಡಿಲ್ಲ ಎಂದ ನಟಿ ಸಮಂತಾ ಸ್ಪಷ್ಟನೆ ನೀಡಿದ್ದಾರೆ. 

ಟಾಲಿವುಡ್ ಸ್ಟಾರ್ ಸಮಂತಾ ಮತ್ತು ನಟ ನಾಗ ಚೈತನ್ಯ ದೂರ ಆಗಿ ವರ್ಷವೇ ಕಳೆಯಿತು. ಟಾಲಿವುಡ್‌ನ ಈ ಕ್ಯೂಟ್ ಕಪಲ್ ವಿಚ್ಛೇದನ ಸುದ್ದಿ ಅಭಿಮಾನಿಗಳಿಗೆ ದೊಡ್ಡ ಶಾಕ್ ಆಗಿತ್ತು. ಇದೆಲ್ಲ ಈಗ ಹಳೆಯ ವಿಚಾರ. ಸಮಂತಾ ಮತ್ತು ನಾಗ ಚೈತನ್ಯ ಇಬ್ಬರೂ ಈ ಕಹಿ ಘಟನೆಯಿಂದ ತುಂಬಾ ದೂರ ಸಾಗಿದ್ದಾರೆ. ಇಬ್ಬರೂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮಮ್ಮ ಜೀವನ ಸಾಗಿಸುತ್ತಿದ್ದಾರೆ. ಈ ನಡುವೆ ನಾಗ ಚೈತನ್ಯ ಡೇಟಿಂಗ್ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಸಮಂತಾ ಅವರಿಂದ ದೂರ ಆದ ಮೇಲೆ ನಾಗ ಚೈತನ್ಯ ನಟಿ ಶೋಭಿತಾ ಜೊತೆ ಪ್ರೀತಿಯಲ್ಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇಬ್ಬರೂ ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಡೇಟಿಂಗ್ ವದಂತಿಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ ಮಾಜಿ ಪತಿಯ ಡೇಟಿಂಗ್ ವಿಚಾರದ ಬಗ್ಗೆ ಮಾತನಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. 

ಸಮಂತಾ ಮಾಜಿ ಪತಿ ಡೇಟಿಂಗ್ ವಿಚಾರವಾಗಿ, ಪ್ರೀತಿಯ ಮೌಲ್ಯವನ್ನು ತಿಳಿದಿಲ್ಲದವರು ಎಷ್ಟು ಜನರೊಂದಿಗೆ ಡೇಟ್ ಮಾಡಿದರೂ ಕಣ್ಣೀರು ಹಾಕುತ್ತಾರೆ. ಕನಿಷ್ಠ ಆ ಹುಡುಗಿಯಾದರೂ ಸಂತೋಷವಾಗಿರಲಿ ಎಂದು ಹೇಳಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೀಗ ಸಮಂತಾ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ವೈರಲ್ ಸುದ್ದಿಯನ್ನು ಶೇರ್ ಮಾಡಿ, 'ಸಮಂತಾ ನಾನು ಹೀಗೆ ಹೇಳಿಯೇ ಇಲ್ಲ' ಎಂದು ಹೇಳಿದ್ದಾರೆ. ಈ ಮೂಲಕ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಸಮಂತಾ ತೆರೆ ಎಳಿದ್ದಾರೆ. 

ಎಷ್ಟು ಜನರ ಜೊತೆ ಡೇಟ್ ಮಾಡಿದ್ರೂ ಕಣ್ಣೀರು ಹಾಕ್ತಾರೆ: ಶೋಭಿತಾ-ನಾಗ ಚೈತನ್ಯ ಡೇಟಿಂಗ್‌ಗೆ ಸಮಂತಾ ರಿಯಾಕ್ಷನ್

Latest Videos

ವೈರಲ್ ಆಗಿರುವ ಸಮಂತಾ ಹೇಳಿಕೆ  

ವೆಬ್‌ಸೈಟ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಟಿ ಸಮಂತಾ, 'ಯಾರು ಯಾರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಪ್ರೀತಿಯ ಮೌಲ್ಯವನ್ನು ತಿಳಿದಿಲ್ಲದವರು ಎಷ್ಟು ಜನರೊಂದಿಗೆ ಡೇಟ್ ಮಾಡಿದರೂ ಕಣ್ಣೀರು ಹಾಕುತ್ತಾರೆ. ಕನಿಷ್ಠ ಆ ಹುಡುಗಿಯಾದರೂ ಸಂತೋಷವಾಗಿರಲಿ. ತನ್ನ ನಡವಳಿಕೆಯನ್ನು ಬದಲಾಯಿಸಿಕೊಂಡು ಹುಡುಗಿಯನ್ನು ನೋಯಿಸದಂತೆ ನೋಡಿಕೊಂಡರೆ ಎಲ್ಲರಿಗೂ ಒಳ್ಳೆಯದಾಗುತ್ತದೆ' ಎಂದು ಸಮಂತಾ ಹೇಳಿದ್ದಾರೆ ಎಂದು ವೈರಲ್ ಆಗಿತ್ತು. 

ಬಚ್ಚಿಟ್ಟಿಕೊಳ್ಳಲು ತಪ್ಪು ಮಾಡಿಲ್ಲ, ಮದುವೆ ಉಳಿಸಿಕೊಳ್ಳಲು 100% ಪ್ರಯತ್ನ ಮಾಡಿದ್ದೆ: ಸಮಂತಾ

ಶಾಕುಂತಲಂ ಸಿನಿಮಾ ಬಗ್ಗೆ

ಸಮಂತಾ ಸದ್ಯ ಶಾಕುಂತಲಂ ಸಿನಿಮಾದ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಅನೇಕ ವಾಹಿನಿಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಸಿನಿಮಾದಲ್ಲಿ ಸಮಂತಾ ಮೇನಕಾ ಮತ್ತು ವಿಶ್ವಾಮಿತ್ರ ಪುತ್ರಿ ಶಕುಂತಲಾ ಪಾತ್ರದಲ್ಲಿ ನಟಿಸಿದ್ದಾರೆ. ಮಲಯಾಳಂ ನಟ ದೇವ್ ಮೋಹನ್ ದುಷ್ಯಂತ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹನ್ ಬಾಬು ದುರ್ವಾಸ ಮಹರ್ಷಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ತೆಲುಗು ಜೊತೆಗೆ ದಕ್ಷಿಣ ಭಾರತದ ಎಲ್ಲಾ ಭಾಷೆ ಮತ್ತು ಹಿಂದಿಯಲ್ಲೂ ರಿಲೀಸ್ ಆಗುತ್ತಿದೆ. ಇತ್ತೀಚಿಗಷ್ಟೆ ಸಿನಿಮಾ ವೀಕ್ಷಿಸಿದ್ದ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದರು. 

click me!