ಸಂಕಷ್ಟಕ್ಕೆ ಸಿಲುಕಿದ್ದ ರೈತರ ನೆರವಿಗೆ ನಟ ಉಪೇಂದ್ರ : ತರಕಾರಿ ಖರೀದಿಸಿ ಉಚಿತ ಹಂಚಿಕೆ

By Kannadaprabha NewsFirst Published May 18, 2021, 7:59 AM IST
Highlights
  • ಸೆಮಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿದ್ದ ರೈತರಿಗೆ ನೆರವು 
  • ರೈತರು ಬೆಳೆದ ಬೆಳೆಗಳನ್ನು ತಾವೇ ನೇರವಾಗಿ ಖರೀದಿಸುತ್ತಾರೆ ನಟ
  • ಕೂಲಿ ಕಾರ್ಮಿಕರು ಸೇರಿದಂತೆ ಕಷ್ಟದಲ್ಲಿರುವ ಜನರಿಗೆ ವಿತರಣೆ

ಬೆಂಗಳೂರು (ಮೇ.18):  ಸೆಮಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿದ್ದ ರೈತರಿಗೆ ನೆರವು ನೀಡಲು ನಟ ಉಪೇಂದ್ರ ಮುಂದಾಗಿದ್ದಾರೆ. ರೈತರು ಬೆಳೆದ ಬೆಳೆಗಳನ್ನು ತಾವೇ ನೇರವಾಗಿ ಖರೀದಿಸುತ್ತಾರೆ. ಬಳಿಕ ಕೂಲಿ ಕಾರ್ಮಿಕರು ಸೇರಿದಂತೆ ಕಷ್ಟದಲ್ಲಿರುವ ಜನರಿಗೆ ವಿತರಿಸುತ್ತಿದ್ದಾರೆ.

ಚಿತ್ರನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ರೈತರ ಬೆಳೆ ಖರೀದಿ ಮಾಡಿ ಅಗತ್ಯವಿರುವ ಜನರಿಗೆ ಉಚಿತವಾಗಿ ಹಂಚುವ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. 

3,000 ಸಿನಿ ಕಾರ್ಮಿಕರ ಕುಟುಂಬಕ್ಕೆ ಉಪ್ಪಿ ನೆರವು ...

 

ಮಂಜುನಾಥ್ ಬಿ. ಸಿ. 3,640 kg ಸಿಹಿ ಕುಂಬಳಕಾಯಿ 23,000 ರೂ ಗೆ ನೀಡಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯಹಸ್ತ ಚಾಚಿದ್ದಾರೆ. ಧನ್ಯವಾದಗಳು 🙏🙏 pic.twitter.com/YhyVbwkD0T

— Upendra (@nimmaupendra)

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಯುವ ರೈತ ಮಹೇಶ್‌ ತಂದೆ ಯಲ್ಲಪ್ಪ ಅವರು ತಾವು ಬೆಳೆದ ಈರುಳ್ಳಿಯನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಬಳಿಕ ಉಪೇಂದ್ರ ಅವರನ್ನು ಸಂಪರ್ಕಿಸಿದ್ದಾರೆ. ಉಪೇಂದ್ರ ಅವರು ತಮ್ಮ ಬೆಂಗಳೂರಿನ ಕತ್ರಗುಪ್ಪೆ(ಬನಶಂಕರಿ) ಮೊದಲನೇ ಕ್ರಾಸ್‌ನಲ್ಲಿರುವ ನಿವಾಸಕ್ಕೆ ಈರುಳ್ಳಿಯನ್ನು ತರಿಸಿಕೊಂಡು 37 ಸಾವಿರ ಹಣವನ್ನು ರೈತನ ಕೈಗಿಟ್ಟಿದ್ದಾರೆ. 

 

ಈರುಳ್ಳಿ 3 ಸಾವಿರ ಕೇಜಿ ಮತ್ತು ಸಾರಿಗೆ ವೆಚ್ಚ ಸೇರಿ 37,000 ರೂ ಗೆ ತಂದು ಹಂಚುವುದರಲ್ಲೂ ಸಹಾಯ ಮಾಡಿದ ರೈತರು ಮಹೇಶ್ ಹಿರಿಯೂರು ಮತ್ತು ಸಂಗಡಿಗರಿಗೆ ಧನ್ಯವಾದಗಳು 🙏 pic.twitter.com/FPj7gZHDQJ

— Upendra (@nimmaupendra)

ಇನ್ನು ಚಿಕ್ಕಬಳ್ಳಾಪುರದ ರೈತ ಶಿವಕುಮಾರ್‌ ಅವರು ತಾವು ಬೆಳೆದ ಟೊಮೆಟೋಗೆ ಕೇವಲ ಅಸಲು ಮತ್ತು ಸಾಗಣೆ ವೆಚ್ಚ ಸೇರಿ 10 ಸಾವಿರ ಮಾತ್ರ ಪಡೆದಿದ್ದಾರೆ. ಇನ್ನು ಮತ್ತೊಬ್ಬ ರೈತ ಮಂಜುನಾಥ್‌ ಅವರು 3,640 ಕೇಜಿ ಸಿಹಿ ಕುಂಬಳವನ್ನು 23 ಸಾವಿರಕ್ಕೆ ಉಪೇಂದ್ರ ಖರೀದಿಸಿದ್ದಾರೆ. ಅಲ್ಲದೆ ಇನ್ನೂ ಹಲವು ರೈತರಿಂದ ಉಪೇಂದ್ರ ತರಕಾರಿಗಳನ್ನು ಖರೀದಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!