
ಚೆನ್ನೈ(ಸೆ. 07) ಅಸಂಖ್ಯ ಅಭಿಮಾನಿಗಳ ಹಾರೈಕೆ ಫಲಿಸಿದೆ. ಒಂದು ತಿಂಗಳಿಂದ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ(74) ಕೊರೋನಾ ಮುಕ್ತರಾಗಿದ್ದಾರೆ.
ಪುತ್ರ ಎಸ್ಪಿ ಚರಣ್ ಮಾಹಿತಿ ನೀಡಿದ್ದು, ತಂದೆಯವರ ಆರೋಗ್ಯದಲ್ಲಿ ಸುಧಾರಿಸುತ್ತಿದೆ. ಅಪ್ಪನ ಕರೊನಾ ವರದಿ ನೆಗೆಟಿವ್ ಬಂದಿದ್ದು, ಸಮಾಧಾನ ತಂದಿದೆ. ಅಷ್ಟೇ ಅಲ್ಲ ಅಪ್ಪ ತನಗೇನು ಬೇಕು ಎಂಬುದನ್ನು ಬರಹದ ಮೂಲಕ ತಿಳಿಸುತ್ತಿದ್ದಾರೆ ಎಂದಿದ್ದಾರೆ.
ಹದಿನಾಲ್ಕು ಗಂಟೆಯಲ್ಲಿ 24 ಹಾಡು ಹಾಡಿದ್ದ ಎಸ್ಪಿಬಿ
ಐಪಿಎಲ್ ಆರಂಭವಾಗುತ್ತಿದ್ದು ಅದರ ಅಪ್ ಡೇಟ್ ಗಳನ್ನು ಐಪ್ಯಾಡ್ನಲ್ಲಿ ನೋಡುತ್ತಿದ್ದಾರೆ. ನೆಗೆಟಿವ್ ಬಂದಿದೆ ಎಂಬುದು ಖುಷಿಯ ವಿಚಾರವಾದರೂ, ಅವರ ಶ್ವಾಸ ಮೊದಲಿನಂತಾಗಬೇಕು. ಅವರೇ ಉಸಿರಾಡುವಂತಾಗಬೇಕು. ಸದ್ಯಕ್ಕೆ ನಮಗೆಲ್ಲ ಅದೇ ಮಹತ್ವದ್ದು ಎಂದು ಚರಣ್ ಹೇಳಿದ್ದಾರೆ.
ನಿಮ್ಮೆಲ್ಲರ ಪ್ರಾರ್ಥನೆ ಹೀಗೆ ಮುಂದುವರಿಯಲಿ. ಇನ್ನೊಂದು ವಾರದಲ್ಲಿ ಅಪ್ಪನ ವಿವಾಹ ವಾರ್ಷಿಕೋತ್ಸವ ಬರಲಿದ್ದು ಆ ಕ್ಷಣ ಸುಮಧುರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವೆಂಟಿಲೇಟರ್ ನಲ್ಲೇ ಹಿರಿಯ ಗಾಯಕನಿಗೆ ಚಿಕಿತ್ಸೆ ಮುಂದುವರಿದಿದೆ. ಶೀಘ್ರ ಚೇತರಿಕೆಗಾಗಿ ಕನ್ನಡ ಚಿತ್ರರಂಗ ಸಹ ಒಂದು ಕಡೆ ಸೇರಿ ಪ್ರಾರ್ಥನೆ ಮಾಡಿತ್ತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.