ಸೆಲ್ಫಿ ವಿಚಾರಕ್ಕೆ ಹಲ್ಲೆ; ಏರ್ಪೋರ್ಟ್ ನಲ್ಲಿ ಕಾಣಿಸಿಕೊಂಡ ಸೋನು ನಿಗಮ್ ಹೇಳಿದ್ದೇನು?

Published : Feb 21, 2023, 12:45 PM ISTUpdated : Feb 21, 2023, 05:48 PM IST
ಸೆಲ್ಫಿ ವಿಚಾರಕ್ಕೆ ಹಲ್ಲೆ; ಏರ್ಪೋರ್ಟ್ ನಲ್ಲಿ ಕಾಣಿಸಿಕೊಂಡ ಸೋನು ನಿಗಮ್ ಹೇಳಿದ್ದೇನು?

ಸಾರಾಂಶ

ಮೇಲೆ ಹಲ್ಲೆ ನಡೆದ ಬಳಿಕ ಮೊದಲ ಖ್ಯಾತ ಗಾಯಕ ಸೋನು ನಿಗಮ್ ಮುಂಬೈ ಏರ್ಪೋರ್ಟ್ ನಲ್ಲಿ ಕಾಣಿಸಿಕೊಂಡರು. ಪಾಪರಾಜಿಗಳ ಜೊತೆ ಮಾತನಾಡಿದ ಸೋನು ಎಲ್ಲಾ ಓಕೆ ಎಂದು ಹೇಳಿದರು. 

ಸೆಲ್ಫಿ ವಿಚಾರಕ್ಕೆ ಪ್ರಾರಂಭವಾದ ಜಗಳ ಸೋನು ನಿಗಂ ಮತ್ತು ಅವರ ತಂಡದ ಮೇಲೆ ಹಲ್ಲೆ ಮಾಡುವ ಮಟ್ಟಕ್ಕೆ ಹೋಗಿದೆ. ಮುಂಬೈನ ಚೆಂಬೂರಿನಲ್ಲಿ ಈ ಘಟನೆ ಸಂಭವಿಸಿದ್ದು ಖ್ಯಾತ ಗಾಯಕ ಸೋನು ನಿಗಂ ದೂರು ನೀಡಿದ್ದಾರೆ. ಈ ಘಟನೆ ಬಳಿಕ ಸೋನು ನಿಗಂ ಕ್ಯಾಮರಾ ಮುಂದೆ ಕಾಣಿಸಿಕೊಂಡಿದ್ದು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾತ್ರಿ (ಫೆಬ್ರವರಿ 20) ಈ ಘಟನೆ ನಡೆದಿದೆ. ಸದ್ಯ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.     

ಈ ಘಟನೆ ಬಳಿಕ ಮುಂಬೈ ಏರ್ಪೋರ್ಟ್ ನಲ್ಲಿ ಕಾಣಿಸಿಕೊಂಡ ಸೋನು ನಿಗಮ್ ಅವರನ್ನು ಪಾಪರಾಜಿಗಳು ಪ್ರಶ್ನಿಸಿದರು.  ಯೋಗಕ್ಷೇಮ ವಿಚಾರಿಸಿದ ಪಾಪರಾಜಿಗಳ ಜೊತೆ ಮಾತನಾಡಿದ ಸೋನು ನಿಗಮ್ 'ಎಲ್ಲಾ ಓಕೆ' ಎಂದು ಹೇಳಿದ್ದಾರೆ.  ಬಳಿಕ ಕ್ಯಾಮರಾ ಮುಂದೆ ಕಿಸ್ ಮಾಡಿ ಅಲ್ಲಿಂದ ಹೊರಟರು.  

ಸೋಮವಾರ ತಡರಾತ್ರಿ ಚೆಂಬೂರಿನಲ್ಲಿ ನಡೆದ ಸಂಗೀತೋತ್ಸವದಲ್ಲಿ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಸೋನು ನಿಗಮ್ ಅವರನ್ನು ತಳ್ಳಲಾಯಿತು ಮತ್ತು ಅವರ ತಂಡದ ಸದಸ್ಯ ರಬ್ಬಾನಿ ಅವರನ್ನು ಮೆಟ್ಟಿಲುಗಳಿಂದ ಕಳಗೆ ಎಸೆಯಲಾಯಿತು. ಸೆಲ್ಫಿಗೆ ಪೋಸ್ ನೀಡುವಂತೆ ಒತ್ತಾಯಿಸಿ ಜಗಳ ಪ್ರಾರಂಭಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಆರೋಪಿಗಳಲ್ಲಿ ಒಬ್ಬರು ಸ್ಥಳೀಯ ಶಾಸಕರೊಬ್ಬರ ಪುತ್ರ ಎಂದು ತಿಳಿದುಬಂದಿದೆ.

ಹಿಂದಿ ಹೇರಿಕೆಯಿಂದ ದೇಶದಲ್ಲಿ ಬಿರುಕು: ಸೋನು ನಿಗಮ್‌

ಘಟನೆಯ ನಂತರ ಸೋನು ನಿಗಮ್ ಚೆಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರು ದಾಖಲಿಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಗಾಯಕ, ಸಂಗೀತ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ವ್ಯಕ್ತಿಯೊಬ್ಬರು ನನ್ನನ್ನು ಗಟ್ಟಿಯಾಗಿ ಹಿಡಿದರು. ನಂತರ ನನ್ನನ್ನು ರಕ್ಷಿಸಲು ಬಂದ ಹರಿ ಮತ್ತು ರಬ್ಬಾನಿಯನ್ನು ಕೆಳಗೆ ತಳ್ಳಿದರು. ಆಗ ನಾನು ಮೆಟ್ಟಿಲುಗಳ ಮೇಲೆ ಬಿದ್ದೆ. ಕಬ್ಬಿಣದ ಸರಳುಗಳ ಮೇಲೆ ಬಿದ್ದಿದ್ದರೆ ರಬ್ಬಾನಿ ಸಾಯುತ್ತಿದ್ದರು. ನೀವು ವೀಡಿಯೋದಲ್ಲಿ ನೋಡಬಹುದು' ಎಂದು ಹೇಳಿದರು.

ಸೆಲ್ಫಿಗೆ ಒತ್ತಾಯಿಸಿ ಉದ್ಧವ್‌ ಠಾಕ್ರೆ ಬಣದ ಶಾಸಕನ ಪುತ್ರನಿಂದ ಸೋನು ನಿಗಮ್ ಹಾಗೂ ತಂಡದ ಮೇಲೆ ಹಲ್ಲೆ: ಕೇಸ್‌ ದಾಖಲು

ಸೋನು ಮತ್ತು ಅವರ ತಂಡದ ಮೇಲೆ ಹಲ್ಲೆ ನಡೆಸಿದ್ದು ಉದ್ಧವ್‌ ಠಾಕ್ರೆ ಬಣದ ಶಾಸಕನ ಪುತ್ರ ಎಂದು ಹೇಳಲಾಗುತ್ತಿದೆ. ಶಾಸಕ ಪ್ರಕಾಶ್ ಫತೇರ್‌ಪೇಕರ್ ಅವರ ಪುತ್ರ ಎಂದು ವರದಿಯಾಗಿದೆ. ಅವರ ಹೆಸರನ್ನು ಸಹ ತನ್ನ ದೂರಿನಲ್ಲಿ ಸೋನು ನಿಗಮ್ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಇದು ವರೆಗೂ ಪೊಲೀಸರು ಯಾರನ್ನು ಬಂಧಿಸಿಲ್ಲ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?