ಸುಶಾಂತ್ ಸಾವಿನ ತನಿಖೆ ವೇಗ ಹೆಚ್ಚಿಸಲು 5 ವಿಶೇಷ ತಂಡ ರಚಿಸಿದ CBI

Suvarna News   | Asianet News
Published : Aug 21, 2020, 03:15 PM ISTUpdated : Aug 21, 2020, 04:15 PM IST
ಸುಶಾಂತ್ ಸಾವಿನ ತನಿಖೆ ವೇಗ ಹೆಚ್ಚಿಸಲು 5 ವಿಶೇಷ ತಂಡ ರಚಿಸಿದ CBI

ಸಾರಾಂಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸುಪ್ರಿಂ ಕೋರ್ಟ್ ಸಿಬಿಐಗೆ ವಹಿಸಿದೆ. ಗುರುವಾರ ಮುಂಬೈಗೆ ಬಂದಿಳಿದ ಸಿಬಿಐ ತಂಡ ತನಿಖೆಯ ವೇಗ ಹೆಚ್ಚಿಸಲು 5 ವಿಶೇಷ ತಂಡ ರಚಿಸಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸುಪ್ರಿಂ ಕೋರ್ಟ್ ಸಿಬಿಐಗೆ ವಹಿಸಿದೆ. ಗುರುವಾರ ಮುಂಬೈಗೆ ಬಂದಿಳಿದ ಸಿಬಿಐ ತಂಡ ತನಿಖೆಯ ವೇಗ ಹೆಚ್ಚಿಸಲು 5 ವಿಶೇಷ ತಂಡ ರಚಿಸಿದೆ.

ಸಿಬಿಐ ಅಧಿಕಾರಿಗಳಿಗೆ ಕ್ವಾರೆಂಟೈನ್ ವಿನಾಯಿತಿ ನೀಡಲಾಗಿದೆ. ಈ ಹಿಂದೆ ಬಿಹಾರದಿಂದ ಸುಶಾಂತ್ ಸಾವಿನ ಪ್ರಕರಣ ತನಿಖೆಗೆ ಬಂದ ಐಪಿಎಸ್ ಅಧಿಕಾರಿಯನ್ನು ಮುಂಬೈ ಮಹಾನಗರ ಪಾಲಿಕೆ ಕ್ವಾರೆಂಟೈನ್ ಮಾಡಿದ್ದು ವಿವಾದ ಸೃಷ್ಟಿಯಾಗಿತ್ತು.

ಸುಶಾಂತ್ ಕೇಸ್ ಸಿಬಿಐಗೆ: ನಟಿ ರಿಯಾಳನ್ನು ಫಿಲ್ಮ್‌ನಿಂದ ಕೈಬಿಟ್ಟ ನಿರ್ದೇಶಕ

ಇದೀಗ ಸಿಬಿಐ ಅಧಿಕಾರಿಗಳಿಗೆ ಕ್ವಾರೆಂಟೈನ್ ವಿನಾಯಿತಿ ನೀಡಲಾಗಿದೆ. ಸಿಬಿಐ ಅಧಿಕಾರಿಗಳ ತಂಡ ರಚಿಸಿ, ಅವುಗಳಲ್ಲಿಯೂ ಉಪ ವಿಭಾಗ ಮಾಡಲಾಗಿದೆ. ಈ ಮೂಲಕ ಕೆಲಸವನ್ನು ಹಂಚಿ, ತನಿಖೆಯ ವೇಹ ಹೆಚ್ಚಿಸಲು ಉದ್ದೇಶಿಸಲಾಗಿದೆ.

ಮೊದಲ ತಂಡ ಸಂಶಯಾಸ್ಪದರನ್ನು ವಿಚಾರಣೆ ನಡೆಸಲಿದ್ದು, ಎರಡನೇ ತಂಡ ಕೇಸ್‌ ಫೈಲ್‌ಗಳನ್ನು ಪರಿಶೀಲಿಸಲಿದೆ. ಮೂರನೇ ಹಾಗೂ ನಾಲ್ಕನೇ ತಂಡ ಎಲ್ಲ ಸಾಧ್ಯತೆಗಳನ್ನು ತನಿಖೆ ಮಾಡಿ ಪ್ರಕರಣವನ್ನು ರಿ ಕ್ರಿಯೇಟ್ ಮಾಡಿ ಫೊರೆನ್ಸಿಕ್‌ ಸುಳಿವುಗಳನ್ನು ತನಿಖೆ ಮಾಡಲಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?
ಸಾವಿರ ಕೋಟಿ ಕುಬೇರ 'ಮಹಾಪುರುಷ'ನಿಗೆ ಡಿವೋರ್ಸ್ ಕೊಡ್ತಾರಾ ಈ ನಟಿ? ಇದೆಂಥ ಶಾಕಿಂಗ್ ಮ್ಯಾಟರ್!