'ಕಂಗನಾಗೆ ಪ್ರೊಟೆಕ್ಷನ್ ಕೊಡೋಕೆ ಜನರ ತೆರಿಗೆ ಹಣ ಬೇಕಾ'..?

Published : Sep 08, 2020, 01:29 PM ISTUpdated : Sep 08, 2020, 01:42 PM IST
'ಕಂಗನಾಗೆ ಪ್ರೊಟೆಕ್ಷನ್ ಕೊಡೋಕೆ ಜನರ ತೆರಿಗೆ ಹಣ ಬೇಕಾ'..?

ಸಾರಾಂಶ

ಬಾಲಿವುಡ್ ಕ್ವೀನ್ ಮುಂಬೈಗೆ ಬರುವ ಹಿನ್ನೆಲೆಯಲ್ಲಿ Y+ ಭದ್ರತೆ ನೀಡಲು ನಿರ್ಧರಿಸಿದ ಬಗ್ಗೆ ಬಾಲಿವುಡ್ ನಟಿಯರು ಟೀಕೆ ವ್ಯಕ್ತಪಡಿಸಿದ್ದಾರೆ.  

ಶಿವಸೇನೆ ಮುಖ್ಯಸ್ಥ ಸಂಜಯ್ ರಾವತ್ ಜೊತೆಗಿನ ಕ್ವೀನ್ ಕಂಗನಾ ವಾಕ್ಸಮರ ಜೋರಾಗಿರುವಂತೆ ನಟಿಗೆ ಕೇಂದ್ರ ಸರ್ಕಾರ Y+ ಭದ್ರತೆ ನೀಡಿದೆ. ಮುಂಬೈಗೆ ಕಂಗನಾ ಬರುತ್ತಾರೆ ಎಂದಾಗಲೇ ನಟಿಯ ಪೋಸ್ಟರ್‌ಗೆ ಶಿವಸೇನಾ ಮಹಿಳಾ ಕಾರ್ಯಕರ್ತರು ಚಪ್ಪಲಿ ಎಸೆದು ಪ್ರತಿಭಟಿಸಿದ್ದರು.

ಇದೀಗ ನಟಿಗೆ Y+ ಭದ್ರತೆ ನೀಡಿದ ಬಗ್ಗೆ ಬಾಲಿವುಡ್ ನಟಿಯರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರ ತೆರಿಗೆ ಹಣ ಇದಕ್ಕೆ ಬಳಸುತ್ತಿರುವುದನ್ನು ಟೀಕಿಸಿದ್ದಾರೆ. ನಟಿ ಕುಬ್ರಾ ಸೇಠ್ ಹಾಗೂ ಸ್ವಾರಾ ಭಾಸ್ಕರ್ ಕಂಗನಾಳಿಗೆ ನೀಡಿದ ವಿಶೇಷ ಭದ್ರತೆಯನ್ನು ಪ್ರಶ್ನಿಸಿದ್ದಾರೆ. ಸುಮ್ಮನೆ ಕಂಗನಾಗೆ ಭದ್ರತೆ ಒದಗಿಸೋ ಸುದ್ದಿ ಹರ ಬೀಳುತ್ತಿದ್ದಂತೆ ಪ್ರತಿಕ್ರಿಯಿಸಿದ ನಟಿ, ಸುಮ್ಮನೆ ಚೆಕ್ ಮಾಡ್ತಿದ್ದೇನೆ, ಇದು ನನ್ನ ಟ್ಯಾಕ್ಸ್ ಪೆಮೆಂಟ್‌ನಲ್ಲಿಯಾ..? ಎಂದು ಪ್ರಶ್ನಿಸಿದ್ದಾರೆ.

ನಟಿ ಕಂಗನಾಗೆ ‘ವೈ’ ಶ್ರೇಣಿ ಭದ್ರತೆ;ದಿನವಿಡೀ 10 ಸಿಆರ್‌ಪಿಎಫ್‌ ಯೋಧರ ಕಾವಲು!

ಇನ್ನ ಸ್ವರಾಗೆ ಭದ್ರತೆ ಒದಗಿಸಬೇಕೆಂಣಬ ಟ್ವಿಟರ್ ಬಳಕೆದಾರರೊಬ್ಬರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಸ್ವರಾ, ಥಾಂಕ್ಯೂ ನಜ್ಮಾ, ಆದರೆ ಬೇಡ. ತೆರಿಗೆ ಹಣ ಅಭಿವೃದ್ಧಿ, ಅಪೌಷ್ಟಿಕತೆ ನಿರ್ಮೂಲನೆಗೆ ಬಳಕೆಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಸಿಆರ್‌ಪಿಎಫ್ ಭದ್ರತಾ ಸಿಬ್ಬಂದಿಯಿಂದ ಭದ್ರತೆ ಪಡೆಯಲಿರುವ ಮೊದಲ ನಟಿಯಾಗಲಿದ್ದಾರೆ ಕಂಗನಾ.  ಸಿಆರ್‌ಪಿಎಫ್ ಭದ್ರತೆ ಪಡೆಯುವವರು ಸಾಮಾನ್ಯವಾಗಿ ಸರ್ಕಾರದಿಂದ ಪಡೆಯುವ ಭದ್ರತೆಗೆ ಪಾವತಿ ಮಾಡುತ್ತಾರೆ.

ಕಂಗನಾ ಪೋಸ್ಟರ್‌ಗೆ ಚಪ್ಪಲಿ ಎಸೆದ ಶಿವಸೇನೆ..! ಬಿಜೆಪಿ ವಕ್ತಾರ ಹೇಳಿದ್ದಿಷ್ಟು

ಕಂಗನಾ ಮುಂಬೈನ್ನು ಪಿಒಕೆಗೆ ಹೋಲಿಸಿದ ನಂತರ ಸಂಜಯ್ ರಾವತ್ ನಟಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನಟಿ ಮುಂಬೈನಲ್ಲಿ ಇರಲು ಭಯವಾಗುತ್ತೆ ಅಂದಿದ್ದರು. ಇದಕ್ಕೆ ಉತ್ತರಿಸಿದ ರಾವತ್, ನಿಮ್ಮನ್ನು ಮುಂಬೈಗೆ ಬರಲು ಬಿಡುವುದಿಲ್ಲ ಎಂದು  ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬ್ರೇಕಪ್ ಸುದ್ದಿ ಬೆನ್ನಲ್ಲೇ ಮತ್ತೆ ತ್ರಿಶಾ ಪ್ರತ್ಯಕ್ಷ! ಯಾರ ಜೊತೆ ಎಲ್ಲಿ ಬಂದು ಚಮಕ್ ಕೊಟ್ರು ನೋಡಿ!
ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಮಾತನಾಡಲ್ಲ ಎಂದಿದ್ದೇಕೆ ಸೋನು ನಿಗಮ್? ಈ ನಿರ್ಧಾರದ ಹಿಂದಿನ ಸೀಕ್ರೆಟ್ ಇದು!