ತಮಿಳು ಕಾಮಿಡಿ ನಟ ವಡಿವೇಲು ಬಾಲಾಜಿ ಹೃದಯಾಘಾತದಿಂದ ಸಾವು

Suvarna News   | Asianet News
Published : Sep 11, 2020, 11:44 AM ISTUpdated : Sep 11, 2020, 11:50 AM IST
ತಮಿಳು ಕಾಮಿಡಿ ನಟ ವಡಿವೇಲು ಬಾಲಾಜಿ ಹೃದಯಾಘಾತದಿಂದ ಸಾವು

ಸಾರಾಂಶ

ಕಾಲಿವುಡ್ ಕಾಮಿಡಿ ನಟ ವಡಿವೇಲ್ ಬಾಲಾಜಿ ಹೃದಯಾಘಾತದಿಂದ ಚೆನ್ನೈನಲ್ಲಿ ಮೃತಪಟ್ಟಿದ್ದಾರೆ.

ಕಾಲಿವುಡ್ ಕಾಮಿಡಿ ನಟ ವಡಿವೇಲ್ ಬಾಲಾಜಿ ಹೃದಯಾಘಾತದಿಂದ ಚೆನ್ನೈನಲ್ಲಿ ಮೃತಪಟ್ಟಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ನಿನ್ನೆ ನಿಧನರಾಗಿದ್ದಾರೆ. ಹೃದಯಾಘಾತವಾಗಿ ನಟನನ್ನು ಹದಿನೈದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಟನಿಗೆ 42 ವರ್ಷ ವಯಸ್ಸಾಗಿತ್ತು.

ಖಾಸಗಿ ಆಸ್ಪತ್ರೆಯಿಂದ ವಡಿವೇಲ್ ಅವರನ್ನು ಒಮನ್‌ದುರೈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚೆನ್ನೈನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಟನನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ನಿನ್ನೆ ಹುಟ್ಟುಹಬ್ಬ ಆಚರಿಸಿಕೊಂಡ ಕಿರುತೆರೆ ನಟ ಸಿದ್ಧರಾಜ್ ಕಲ್ಯಾಣ್ಕರ್‌ ನಿಧನ

ಕಾಲಿವುಡ್ ಕಾಮಿಡಿ ನಟ ವಡಿವೇಲು ಅವರ ಮಿಮಿಕ್ರಿ ಮಾಡಿ ವಡಿವೇಲು ಬಾಲಾಜಿ ಫೇಮಸ್ ಆಗಿದ್ದರು. ವಿಜಯ್ ಟಿವಿಯ ಕಲಕ್ಕಪೋವದು ಯಾರು ಕಾರ್ಯಕ್ರಮದ ಮೂಲಕ ಮನೆ ಮನೆಗೆ ಪರಿಚಯವಾಗಿದ್ದರು. ನಂತರ ಶಿವಕಾರ್ತಿಕೇಯನ್ ನಟನೆಯ  ಟಿವಿ ಶೋ ಅದು ಇದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಖ್ಯಾತ ಹಾಸ್ಯ ನಟ ಜಯಪ್ರಕಾಶ್‌ ರೆಡ್ಡಿ ಇನ್ನಿಲ್ಲ

ಬಹಳಷ್ಟು ಕಾರ್ಯಕಮದ ಮೂಲಕ ನಟ ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದರು. ನಯನ್‌ತಾರಾ ಅಭಿನಯದ ಕೊಳಮಾವು ಕೋಕಿಲ ಸಿನಿಮಾದಲ್ಲಿಯೂ ಇವರು ನಿಟಿಸಿದ್ದರು. ಕಿರುತೆರೆಯಿಂದ ಹಿರಿತೆರೆಗೆ ಬಂದು ಹಿಟ್ ಆದ ಕೆಲವರಲ್ಲಿ ಒಬ್ಬರು ವಡಿವೇಲ್.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಮುಸ್ಲಿಂ ಆಗಿ ಮತಾಂತರವಾದ್ರಾ ಬಾಲಿವುಡ್‌ನ ಪ್ರಖ್ಯಾತ ನಟಿಯ ಸಹೋದರಿ? ಬುರ್ಖಾ, ಹಿಜಾಬ್‌ ಧರಿಸಿ ಮಸೀದಿ ಪ್ರವೇಶ!
'ಕಾಂತಾರ' ದೈವಕ್ಕೆ ರಣವೀರ್ ಸಿಂಗ್ ಅವಮಾನ: ಕೂಡಲಸಂಗಮದಲ್ಲಿ ಸಪ್ತಮಿ ಗೌಡ ಎಂಥ ಮಾತು ಹೇಳಿದ್ರು ನೋಡಿ!