ಖ್ಯಾತ ನಿರ್ಮಾಪಕ ಕೆ. ಬಾಲು ನಿಧನ

Suvarna News   | Asianet News
Published : Jan 03, 2021, 10:54 AM IST
ಖ್ಯಾತ ನಿರ್ಮಾಪಕ ಕೆ. ಬಾಲು ನಿಧನ

ಸಾರಾಂಶ

ಹೃದಯಾಘಾತದಿಂದ ತಮಿಳು ನಿರ್ಮಾಪಕ ಕೆ ಬಾಲು ಕೊನೆಯುಸಿರೆಳೆದಿದ್ದಾರೆ.   

ತೆಲುಗು ಚಿತ್ರರಂಗ ಸ್ಟಾರ್ ನಟ, ನಟಿಯರಿಗೆ ಸಿನಿಮಾ ನಿರ್ಮಾಣ ಮಾಡಿರುವ ಕೆ. ಬಾಲು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲು ಕೋವಿಡ್‌ 19ಗೆ ಒಳಗಾಗಿದ್ದರು ಎಂಬ ಮಾತುಗಳು ಕೇಳಿ ಬರುತ್ತಿದೆ.

ಹೊಸ ವರ್ಷದ ಆರಂಭಕ್ಕೂ ಮುನ್ನ ಕೊನೇ ಉಸಿರೆಳೆದ ಖ್ಯಾತ ಹಾಸ್ಯ ನಟ ನರಸಿಂಗ್ ಯಾದವ್ 

ಕೆಪಿ ಫಿಲಂ ಸಂಸ್ಥೆ ನಿರ್ಮಾಪಕರಾಗಿರುವ ಬಾಲಿ ಪ್ರಭಾಸ್, ಖುಷ್ಬೂ ಸೇರಿದಂತೆ ಅನೇಕರಿಗೆ ಬಂಡವಾಳ ಹಾಕಿದ್ದಾರೆ. ಅದರಲ್ಲೂ 'ಚಿನ್ನ ತಂಬೂರಿ','ಪಂಚಲನುಕೂರಿ' ಹಾಗೂ 'ಜನಗ್ರಾಮನ್' ತುಂಬಾನೇ ಪಾಪ್ಯೂಲರ್ ಸಿನಿಮಾ. 

ನಟ ಹಾಗೂ ನಿರ್ದೇಶಕ ಶರತ್ ಕುಮಾರ್ ಟ್ಟಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. 'ಕಪಿ ಫಿಲ್ಮಂ ಬಾಲು ಇಂದು ನಮ್ಮನ್ನು ಅಗಲಿದ್ದಾರೆ.  ಚಿತ್ರರಂಗಕ್ಕೆ ಇದೊಂದು ದೊಡ್ಡ ಲಾಸ್. ಬಾಲು ಆತ್ಮಕ್ಕೆ ಶಾಂತಿ ಸಿಗಲಿ.ನನ್ನ ಕುಟುಂಬದ ಕಡೆಯಿಂದ ಸಂತಾಪಗಳು' ಎಂದು ಬರೆದಿದ್ದಾರೆ.

ಕಿಡ್ನಿ ವೈಫಲ್ಯದಿಂದ ಕಂಠಿ ಸಿನಿಮಾ‌ ನಿರ್ದೇಶಕ ಭರತ್ ನಿಧನ! 

ಜನವರಿ 1ರಂದು ಬಾಲು ಅಗಲಿದ್ದು 2ರಂದು ಚೆನ್ನೈನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ವರ್ಷದ ಆರಂಭದಲ್ಲೇ ಅದ್ಭುತ ವ್ಯಕ್ತಿಯನ್ನು ಕಳೆದುಕೊಂಡ ನೋವಿನಲ್ಲಿ ತಮಿಳು ಚಿತ್ರರಂಗವಿದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?
ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?