ಮನೆಯಲ್ಲೇ  ಕಿರುತೆರೆ ಕಲಾವಿದರ ಆತ್ಮಹತ್ಯೆ, ವಾಸನೆ ಬಂದ ಮೇಲೆ ಗೊತ್ತಾಯ್ತು

Published : Jun 15, 2020, 04:50 PM ISTUpdated : Jun 15, 2020, 05:17 PM IST
ಮನೆಯಲ್ಲೇ  ಕಿರುತೆರೆ ಕಲಾವಿದರ ಆತ್ಮಹತ್ಯೆ, ವಾಸನೆ ಬಂದ ಮೇಲೆ ಗೊತ್ತಾಯ್ತು

ಸಾರಾಂಶ

ಮತ್ತೊಂದು ಶಾಕಿಂಗ್ ನ್ಯೂಸ್ ಚೆನ್ನೈನಿಂದ/ ಆರ್ಥಿಕ ಮುಗ್ಗಟ್ಟು ಎದುರಿಸಲಾಗದೆ ಕಿರುತೆರೆ ನಟ-ನಟಿ ಆತ್ಮಹತ್ಯೆ/ ಆತ್ಮಹತ್ಯೆಗೆ ಶರಣಾದ ಅಣ್ಣ-ತಂಗಿ/ ಲಾಕ್ ಡೌನ್ ಪರಿಣಾಮ ಶೂಟಿಂಗ್ ಇರಲಿಲ್ಲ

ಚೆನ್ನೈ (ಜೂ. 15)  ಮತ್ತೊಂದು ಶಾಕಿಂಗ್ ನ್ಯೂಸ್ ತಮಿಳುನಾಡಿನಿಂದ ಬಂದಿದೆ. ತಮಿಳು ಕಿರುತೆರೆ ನಟ ಶ್ರೀಧರ್ ಮತ್ತು ಅವರ ಒಡಹುಟ್ಟಿದ ಜಯಾ ಕಲ್ಯಾಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚೆನ್ನೈನ ಅವರ ನಿವಾಸದಲ್ಲಿ ಶವ ಪತ್ತೆಯಾಗಿದೆ. ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗ್ರಹಿಸಿದ ಪಕ್ಕದವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಸುಶಾಂತ್ ಸಾವಿನ ನಂತರ ಮಾಜಿ ಗೆಳತಿ ಆಡಿದ ಮಾತುಗಳು

ಶ್ರೀಧರ್ ಮತ್ತು ಜಯಾ ಕಲ್ಯಾಣಿ ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದರು.  ಕೊರೋನಾ ಲಾಕ್ ಡೌನ್ ಕಾರಣಕ್ಕೆ ಶೂಟಿಂಗ್ ಬಂದ್ ಆಗಿದ್ದರ ಪರಿಣಾಮ ಎದುರಿಸುತ್ತಿದ್ದರು.  ಚೆನ್ನೈನ ಕುಡುಂಗೈಯೂರ್​​ ಮುತ್ತಮೀಜ್​​ ನಗರದಲ್ಲಿರುವ ನಿವಾಸದಲ್ಲಿಯೇ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರು ಶ್ರೀಧರ್​ ಮತ್ತು  ಜಯ ಕಲ್ಯಾಣಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ದೃಢಪಟ್ಟಿದೆ. 

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?
ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?