ಖ್ಯಾತ ಹಾಸ್ಯ ನಟ ಜಯಪ್ರಕಾಶ್‌ ರೆಡ್ಡಿ ಇನ್ನಿಲ್ಲ

Suvarna News   | Asianet News
Published : Sep 08, 2020, 10:01 AM IST
ಖ್ಯಾತ ಹಾಸ್ಯ ನಟ ಜಯಪ್ರಕಾಶ್‌ ರೆಡ್ಡಿ ಇನ್ನಿಲ್ಲ

ಸಾರಾಂಶ

ತೆಲುಗು ಚಿತ್ರರಂಗದ ಹೆಸರಾಂತ ಹಾಸ್ಯ ನಟ ಜಯಪ್ರಕಾಶ್ (74) ಹೃಧಯಾಘಾತದಿಂದ ನಿಧನರಾಗಿದ್ದಾರೆ.

ಆಂಧ್ರ ಪ್ರದೇಶದ ಗುಂಟೂರಿನ ನಿವಾಸಿಯಾಗಿರುವ ಜಯಪ್ರಕಾಶ್ ಬಾತ್‌ ರೂಮಿನಲ್ಲಿ ಇಂದು (ಸೆಪ್ಟೆಂಬರ್ 8) ಕುಸಿದು ಬಿದಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲು ಕರೆದುಕೊಂಡು ಹೋಗಿತ್ತಾದರೂ, ಮಾರ್ಗ ಮಾಧ್ಯದಲ್ಲಿಯೇ ಕೊನೆ ಉಸಿರೆಳೆದಿದ್ದಾರೆ. ಹೃದಯಾಘಾತದಿಂದ ಇವರು ಕೊನೆಯುಸಿರೆಳೆದಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ವಿಲನ್ ಹಾಗೂ ಹಾಸ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಜಯಪ್ರಕಾಶ್ ಕೊನೆಯ ಬಾರಿ ಮಹೇಶ್ ಬಾಬು ಜೊತೆ ಸರಿಲ್ಲೇರು ನೀಕ್ಕೆವರು ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಹಿರಿಯ ಬಾಲಿವುಡ್ ನಿರ್ದೇಶಕ ಜಾನಿ ಭಕ್ಷಿ ಇನ್ನಿಲ್ಲ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಪ್ರಕಾಶ್ ಕೇವಲ ತಮಿಳು ಮಾತ್ರವಲ್ಲದೇ, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. 2003ರಲ್ಲಿ  'ಶ್ವೇತ ನಾಗರ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ನಂತರ ಶಿವರಾಜ್‌ಕುಮಾರ್ ಜೊತೆ 'ಸತ್ಯ ಇನ್‌ ಲವ್' ಹಾಗೂ  'ಸಿಟಿಜನ್' ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

 

ತೆಲುಗು ಚಿತ್ರರಂಗದ ಗಣ್ಯರು ನಟನ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಕುಟುಂಬದವರನ್ನು ಹಾಗೂ ಆಪ್ತರನ್ನು ಅಗಲಿರುವ ಜೆಪಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಮದುವೆ ಬಳಿಕ ಹನಿಮೂನ್ ಕ್ಯಾನ್ಸಲ್ ಮಾಡಿದ ಸಮಂತಾ? ಈ ಹೊಸ ನಿರ್ಧಾರ ತಗೊಂಡು ಶಾಕ್ ಕೊಟ್ಟಿದ್ಯಾಕೆ?
ಡಾರ್ಲಿಂಗ್.. ಆ ಪ್ರೀತಿಯನ್ನು ಕಂಡು ನಿನಗೆ ಆನಂದಬಾಷ್ಪ ಬಂದಿರುತ್ತದೆ; ರಾಜಮೌಳಿ ಪತ್ರದ ಮರ್ಮವೇನು?