
ಟಾಲಿವುಡ್ ಹಿರಿಯ ಹಾಸ್ಯ ನಟ ಪೊಸಾನಿ ಕೃಷ್ಣ ಮುರಳಿ ಹಾಗೂ ಅವರ ಕುಟುಂಬದವರಿಗೆ ಕೊರೋನಾ ಸೋಂಕು ತಗುಲಿದೆ. ಇಡೀ ಕುಟುಂಬ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
'ನಾನು ಮತ್ತು ನನ್ನ ಕುಟುಂಬದವರಿಗೆ ಕೊರೋನಾ ಸೋಂಕು ತಗುಲಿದೆ. ದಯವಿಟ್ಟು ಕಲಾವಿದರು, ನಿರ್ದೇಶಕರು ಹಾಗೂ ನಿರ್ಮಾಪಕರು ನನ್ನನ್ನು ಕ್ಷಮಿಸಬೇಕು. ನನ್ನ ಆರೋಗ್ಯ ಪರಿಸ್ಥಿತಿಯಿಂದ ಸಿನಿಮಾ ಚಿತ್ರೀಕರಣ ಮುಂದೂಡಬೇಕಾಗಿದೆ. ನಮ್ಮ ವೀಕ್ಷಕರು, ಚಿತ್ರರಂಗದವರು ಮತ್ತು ಸ್ನೇಹಿತರು ಪ್ರೀತಿ ಮತ್ತು ಪ್ರಾರ್ಥನೆಯಿಂದ ಆದಷ್ಟು ಬೇಗ ಗುಣಮುಖನಾಗಿ ಚಿತ್ರೀಕರಣಕ್ಕೆ ಮರಳುವೆ' ಎಂದು ಪೊಸಾನಿ ಕೃಷ್ಣ ಹೇಳಿದ್ದಾರೆ.
ಸುಮಾರು 150ಕ್ಕೂ ಸಿನಿಮಾಗಳಲ್ಲಿ ಅಭಿನಯಿಸಿರುವ ಪೊಸಾನಿ ಪ್ರತಿ ಚಿತ್ರದಲ್ಲಿ ಆಯ್ಕೆ ಮಾಡಿಕೊಂಡಿರುವ ಪಾತ್ರಗಳು ಅಭಿಮಾನಿಗಳ ಮನಸ್ಸಿಗೆ ಹತ್ತಿರವಾಗಿದೆ. ಸುಮಾರು 100 ಚಿತ್ರಗಳಿಗೆ ಚಿತ್ರಕಥೆಗಾರನಾಗಿ ಕೆಲಸ ಮಾಡಿದ್ದಾರೆ. ಹೆಲ್ಮೆಡಾ ಮತ್ತು ಶ್ರಾವಣ ಮಾಸ ಚಿತ್ರದ ಮೂಲಕ ನಿರ್ದೇಶಕನಾಗಿ ಗುರುತಿಸಿಕೊಂಡು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.