
ತೆಲುಗು ಚಿತ್ರರಂಗದಲ್ಲಿ ಕ್ರಾಂತಿಕಾರಿ ಸಿನಿಮಾಗಳ ಮೂಲಕ ಚಿತ್ರರಂಗದಲ್ಲಿ ಬದಲಾವಣೆಗಳನ್ನು ತಂದ ಸ್ಟಾರ್ ನಟ ಆರ್. ನಾರಾಯಣ ಮೂರ್ತಿ ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹಾರಿದಾಡುತ್ತಿದೆ. ಸಾಲದೆಂಬಂತೆ ನಟ ಗದ್ದರ್ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ ನಾರಾಯಣ ಅವರಿಗೆ ಸಹಾಯ ಮಾಡುತ್ತೇನೆ ಎಂದರೂ ನಿರಾಕರಿಸಿದ್ದರು ಎಂದು ಹೇಳಿದ್ದರು. ನಾನ್ ಸ್ಟಾಪ್ ಕರೆ ಬರುತ್ತಿದ್ದ ಕಾರಣ ನಾರಾಯಣ ಮೂರ್ತಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.
'ನನ್ನ ಬಗ್ಗೆ ಹರಿದಾಡುತ್ತಿರುವ ವಿಡಿಯೋ ಸುಳ್ಳು. ನಾನು ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ ಆದರೆ ಮನೆಯೊಂದನ್ನು ಕಟ್ಟಿಸಿಕೊಳ್ಳಬಹುದಾದಷ್ಟು ಸಂಪಾದನೆ ಮಾಡಿದ್ದೆ.ಆದರೆ ನಾನು ಬೇಕೆಂದೇ ಮನೆ ಕಟ್ಟಿಕೊಳ್ಳಲಿಲ್ಲ. ಏಕೆಂದರೆ ಅದು ನನಗೆ ಇಷ್ಟವಿರಲಿಲ್ಲ.ಕೊರೋನಾ ಆರಂಭವಾದ ಮೇಲೆ ನಾನು ಹಳ್ಳಿಗೆ ವಾಸ್ತವ್ಯ ಬದಲಾಯಿಸಿದೆ. ಇಲ್ಲಿಯೇ ತೋಟ ನನ್ನ ಜನಗಳ ಜೊತೆ ಆರಾಮವಾಗಿದ್ದೇನೆ. ಈ ನೆಮ್ಮದಿಯನ್ನು ಬಡತನ ಎಂದು ಏಕೆ ಕರೆಯುತ್ತೀರಿ?. ನನ್ನ ನೆಮ್ಮದಿಯನ್ನು ಕಸಿಯುವ ಕೆಲಸ ಏಕೆ ಮಾಡುತ್ತೀರಿ?' ಎಂದು ನಾರಾಯಣ ಮೂರ್ತಿ ಪ್ರಶ್ನೆ ಮಾಡಿದ್ದಾರೆ.
'ದಾಸರಿ ನಾರಾಯಣ್ ಅವರು ನನಗೆ ಮೂರು ಬೆಡ್ರೂಮ್ನ ಮನೆ ನೀಡಲು ಮುಂದೆ ಬಂದರು ನಾನು ಬೇಡವೆಂದೆ. ಮಾಜಿ ಸಿಎಂ, ದಿವಂಗತ ವೈ. ಎಸ್ ರಾಜಶೇಖರ ರೆಡ್ಡಿಯವರು ಕೂಡ ಕರೆ ಮಾಡಿ ನೀನು ಪ್ರಜೆಗಳಿಗಾಗಿ ಸಿನಿಮಾಗಳನ್ನು ಮಾಡುತ್ತೀಯ ವಿಶಾಖಪಟ್ಟಣಂನಲ್ಲಿ ಫಿಲಂ ಸಿಟಿ ಕಟ್ಟು ನಾನು ನಿನಗೆ ಜಮೀನು ಕೊಡುತ್ತೇನೆ ಎಂದರು ನಾನು ಅದನ್ನೂ ಬೇಡವೆಂದೆ. ಚಂದ್ರಬಾಬು ನಾಯ್ಡು ಸಹ ಸಹಾಯದ ಹಸ್ತ ಚಾಚಿದರು ನಾನು ಬೇಡವೆಂದೆ. ತೆಲಂಗಾಣ ಸಿಎಂ ಕೆಸಿಆರ್ ಅವರೂ ಸಹ ದೊಡ್ಡ ಮನೆ, ಆಸ್ತಿ ಕೊಡಲು ಮುಂದಾದರು ನಾನು ಬೇಡವೆಂದೆ ಏಕೆಂದರೆ ಅದು ನನ್ನ ಜೀವನ ಶೈಲಿ ಅಲ್ಲ' ಎಂದಿದ್ದಾರೆ ನಾರಾಯಣ ಮೂರ್ತಿ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.